AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Murali: ಶ್ರೀಮುರಳಿ ಕಾಲಿಗೆ ಪೆಟ್ಟು: ‘ಬಘೀರ’ ಚಿತ್ರದ ಶೂಟಿಂಗ್​ ವೇಳೆ ಅವಘಡ; ಶೀಘ್ರದಲ್ಲೇ ಸರ್ಜರಿ

Bagheera Movie: ಬಿಗ್​ ಬಜೆಟ್​ನ ‘ಬಘೀರ’ ಸಿನಿಮಾದ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿದೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ.

Sri Murali: ಶ್ರೀಮುರಳಿ ಕಾಲಿಗೆ ಪೆಟ್ಟು: ‘ಬಘೀರ’ ಚಿತ್ರದ ಶೂಟಿಂಗ್​ ವೇಳೆ ಅವಘಡ; ಶೀಘ್ರದಲ್ಲೇ ಸರ್ಜರಿ
ಶ್ರೀಮುರಳಿ
TV9 Web
| Edited By: |

Updated on:Jan 12, 2023 | 10:33 PM

Share

ಕನ್ನಡ ಚಿತ್ರರಂಗದ ಖ್ಯಾತ ನಟ ಶ್ರೀಮುರಳಿ (Sri Murali) ಅವರು ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಬಹುನಿರೀಕ್ಷಿತ ‘ಬಘೀರ’ ಸಿನಿಮಾದ ಶೂಟಿಂಗ್​ ವೇಳೆ ಅವಘಡ ಸಂಭವಿಸಿದೆ. ಗುರುವಾರ (ಜ.12) ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಅವರ ಕಾಲಿಗೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ರಾಕ್​ಲೈನ್​ ಸ್ಟುಡಿಯೋದಲ್ಲಿ ‘ಬಘೀರ’ ಸಿನಿಮಾದ (Bagheera Movie) ಶೂಟಿಂಗ್​ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಸಣ್ಣ ಪೆಟ್ಟಾಗಿದೆ ಎನ್ನಲಾಗಿದೆ. ಎರಡು ದಿನಗಳ ನಂತರ ಶ್ರೀಮುರಳಿ ಅವರು ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

ನಟ ಶ್ರೀಮುರಳಿ ಅವರು ಕನ್ನಡ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಬ್ಯಾಕ್​ ಟು ಬ್ಯಾಕ್​ ಆ್ಯಕ್ಷನ್ ಸಿನಿಮಾಗಳಲ್ಲಿ ಅವರು ತೊಡಗಿಕೊಳ್ಳುತ್ತಿದ್ದಾರೆ. ‘ಉಗ್ರಂ’ ಚಿತ್ರದ ಯಶಸ್ಸಿನ ಬಳಿಕ ಅವರ ಇಮೇಜ್​ ಬದಲಾಯಿತು. ಆ ನಂತರ ಅವರು ‘ರಥಾವರ’, ‘ಮಫ್ತಿ’, ‘ಭರಾಟೆ’, ‘ಮದಗಜ’ ಸಿನಿಮಾಗಳಲ್ಲಿ ನಟಿಸಿದರು. ಆ ನಂತರ ಸೆಟ್ಟೇರಿದ ಚಿತ್ರವೇ ‘ಬಘೀರ’. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇದನ್ನೂ ಓದಿ: ಶೂಟಿಂಗ್​ ವೇಳೆ ಅವಘಡ: ‘ಕಾಂತಾರ’ ಚಿತ್ರದ ವಕೀಲ ಪಾತ್ರದಾರಿ ನಟ ನವೀನ್ ಡಿ. ಪಡೀಲ್ ಆಸ್ಪತ್ರೆಗೆ ದಾಖಲು

ಇದನ್ನೂ ಓದಿ
Image
Samyuktha Hegde: ‘ಕ್ರೀಮ್​’ ಸಿನಿಮಾ ಶೂಟಿಂಗ್​ ವೇಳೆ ಅವಘಡ; ನಟಿ ಸಂಯುಕ್ತಾ ಹೆಗಡೆಗೆ ಗಂಭೀರ ಪೆಟ್ಟು
Image
‘ಲವ್ ಯೂ ರಚ್ಚು’ ಶೂಟಿಂಗ್​ ಅವಘಡ ಪ್ರಕರಣ; ಮೂವರು ಆರೋಪಿಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ
Image
Shanvi Srivastava: ಸಿನಿಮಾ ಶೂಟಿಂಗ್ ವೇಳೆ ಅವಘಡ; ನಟಿ ಶಾನ್ವಿ ಕೈಗೆ ಪೆಟ್ಟು
Image
Upendra: ನಟ ಉಪೇಂದ್ರ ತಲೆಗೆ ರಾಡ್​ನಿಂದ ಪೆಟ್ಟು! ಕಬ್ಜ ಸಿನಿಮಾ ಶೂಟಿಂಗ್​ ವೇಳೆ ಅವಘಡ

ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ಶ್ರೀಮುರಳಿ ಹಿಂದೇಟು ಹಾಕುವವರಲ್ಲ. ದೃಶ್ಯಗಳು ಸಾಧ್ಯವಾದಷ್ಟು ರಿಯಲ್​ ಆಗಿ ಮೂಡಿಬರಬೇಕು ಎಂಬ ಉದ್ದೇಶದಿಂದ ಅವರು ಪರಿಶ್ರಮ ಪಡುತ್ತಾರೆ. ಆದರೆ ಇಂಥ ಸನ್ನಿವೇಶಗಳ ಚಿತ್ರೀಕರಣದಲ್ಲಿ ಎಷ್ಟು ಜಾಗರೂಕತೆ ವಹಿಸಿದರೂ ಸಾಲದು. ಎಷ್ಟೇ ಹುಷಾರಾಗಿದ್ದರೂ ಕೂಡ ಕೆಲವೊಮ್ಮೆ ಅವಘಡಗಳು ಸಂಭವಿಸುತ್ತವೆ. ಈಗ ‘ಬಘೀರ’ ಚಿತ್ರದ ಸೆಟ್​ನಲ್ಲಿ ಶ್ರೀಮುರಳಿ ಅವರ ಮೊಣಕಾಲಿಗೆ ಪೆಟ್ಟಾಗಿರುವುದು ಬೇಸರದ ಸಂಗತಿ.

ಇದನ್ನೂ ಓದಿ: Stunt Master Death: ಸಿನಿಮಾ ಶೂಟಿಂಗ್​ ವೇಳೆ ಕ್ರೇನ್​ ಅವಘಡ; ಹಿರಿಯ ಸಾಹಸ ನಿರ್ದೇಶಕ ನಿಧನ

ಹಲವು ಕಾರಣಗಳಿಂದಾಗಿ ‘ಬಘೀರ’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಪ್ರತಿಷ್ಠಿತ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಸ್ಟಾರ್​ ಡೈರೆಕ್ಟರ್​ ಪ್ರಶಾಂತ್​ ನೀಲ್​ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ಗಳು ಮಾಸ್​ ಆಗಿವೆ. ಶೀರ್ಷಿಕೆ ಕೂಡ ಡಿಫರೆಂಟ್​ ಆಗಿದೆ. ಹಾಗಾಗಿ ಶ್ರೀಮುರಳಿ ಅಭಿಮಾನಿಗಳು ಈ ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಈ ಹಿಂದೆ ‘ಮದಗಜ’ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿಯೂ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿತ್ತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣ ಮುಂದುವರಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:33 pm, Thu, 12 January 23

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ