AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಘೀರ’ ಚಿತ್ರದ ಮೊದಲ ದಿನದ ಗಳಿಕೆ, ಸಿಕ್ಕ ರೇಟಿಂಗ್ ಎಷ್ಟು? ಇಲ್ಲಿದೆ ವಿವರ

‘ಬಘೀರ’ ಚಿತ್ರದ ಅವಧಿ 2.38 ಗಂಟೆ ಇದೆ. ಈ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್ ಅಂಶ ಹೊಂದಿದೆ. ಈ ಚಿತ್ರಕ್ಕೆ ಬುಕ್ ಮೈ ಶೋನಲ್ಲಿ 2.8 ಸಾವಿರ ಮಂದಿ ವೋಟ್ ಮಾಡಿದ್ದು, 9.2 ರೇಟಿಂಗ್ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಈ ರೇಟಿಂಗ್​ನಲ್ಲಿ ವ್ಯತ್ಯಾಸ ಆಗಲಿದೆ.

‘ಬಘೀರ’ ಚಿತ್ರದ ಮೊದಲ ದಿನದ ಗಳಿಕೆ, ಸಿಕ್ಕ ರೇಟಿಂಗ್ ಎಷ್ಟು? ಇಲ್ಲಿದೆ ವಿವರ
ಬಘೀರ
ರಾಜೇಶ್ ದುಗ್ಗುಮನೆ
|

Updated on: Nov 01, 2024 | 11:42 AM

Share

ಶ್ರೀಮುರಳಿ ಅವರು ‘ಉಗ್ರಂ’, ‘ಮಫ್ತಿ’ ಮೂಲಕ ದೊಡ್ಡ ಯಶಸ್ಸು ಪಡೆದಿದ್ದಾರೆ. ಅವರಿಗೆ ಒಂದು ದೊಡ್ಡ ಗೆಲುವಿನ ಅವಶ್ಯಕತೆ ಇತ್ತು. ಆ ಗೆಲುವು ‘ಬಘೀರ’ ಚಿತ್ರದ ಮೂಲಕ ಸಿಕ್ಕಿದೆ. ಟ್ರೇಲರ್ ಮೂಲಕವೇ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಮಾಡಿದ್ದ ‘ಬಘೀರ’ ಚಿತ್ರ ಥಿಯೇಟರ್​ನಲ್ಲಿ ಹವಾ ಎಬ್ಬಿಸಿದೆ. ಈ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲೂ ಉತ್ತಮ ಗಳಿಕೆ ಮಾಡುತ್ತಿದೆ.

‘ಬಘೀರ’ ಸಿನಿಮಾ ಬಗ್ಗೆ

ಡಾ. ಸೂರಿ ಅವರು ‘ಬಘೀರ’ ಚಿತ್ರ ನಿರ್ದೇಶನ ಮಾಡಿದ್ದಾರೆ. ‘ಕೆಜಿಎಫ್’ ರೀತಿಯ ಸಿನಿಮಾಗಳನ್ನು ತೆರೆಮೇಲೆ ತಂದ ಪ್ರಶಾಂತ್ ನೀಲ್ ಅವರು ‘ಬಘೀರ’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈ ಸಿನಿಮಾದಲ್ಲಿ ಶ್ರೀಮುರಳಿಗೆ ಜೊತೆಯಾಗಿ ರುಕ್ಮಿಣಿ ವಸಂತ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅಚ್ಯುತ್ ಕುಮಾರ್, ಪ್ರಕಾಶ್ ರಾಜ್, ಗರುಡ ರಾಮ್ ಮೊದಲಾದವರು ಬಣ್ಣ ಹಚ್ಚಿದ್ದಾರೆ. ಹೊಂಬಾಳೆ ಫಿಲ್ಮ್ಸ್​ ಈ ಸಿನಿಮಾನ ನಿರ್ಮಾಣ ಮಾಡಿದೆ. ಸಿನಿಮಾ ಸೆಟ್​ನಲ್ಲಿ ಶ್ರೀಮುರಳಿ ಅವರಿಗೆ ಪೆಟ್ಟಾಗಿದ್ದರಿಂದ ಸಿನಿಮಾ ಕೆಲಸಗಳು ವಿಳಂಬ ಆದವು.

ಕಲೆಕ್ಷನ್

ಬಾಕ್ಸ್ ಆಫೀಸ್ ಬಗ್ಗೆ ಮಾಹಿತಿ ನೀಡುವ Sacnilk ವರದಿ ಮಾಡಿರುವ ಪ್ರಕಾರ ‘ಬಘೀರ’ ಚಿತ್ರ ಬರೋಬ್ಬರಿ 2.8 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಹೊಂಬಾಳೆ ಫಿಲ್ಮ್ಸ್​ ಕಡೆಯಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಈ ಚಿತ್ರಕ್ಕೆ ಮೊದಲ ದಿನ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಚಿತ್ರಕ್ಕೆ ಭರ್ಜರಿ ಗಳಿಕೆ ಆಗೋದು ಖಚಿತ ಎನ್ನಲಾಗುತ್ತಿದೆ. ದೀಪಾವಳಿ ಪ್ರಯುಕ್ತ ಸಾಲು ಸಾಲು ರಜೆಗಳಿವೆ. ಇದು ಸಿನಿಮಾಗೆ ಸಹಕಾರಿ ಆಗಲಿದೆ.

ಇದನ್ನೂ ಓದಿ: Bagheera Review: ಸೂಪರ್ ಹೀರೋ ಆದ ಶ್ರೀಮುರಳಿ; ‘ಬಘೀರ’ ಚಿತ್ರದಲ್ಲಿ ಬ್ಯಾಟ್​ಮ್ಯಾನ್ ರೀತಿಯ ಕಥೆ

ರೇಟಿಂಗ್

‘ಬಘೀರ’ ಚಿತ್ರದ ಅವಧಿ 2.38 ಗಂಟೆ ಇದೆ. ಈ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್ ಅಂಶ ಹೊಂದಿದೆ. ಈ ಚಿತ್ರಕ್ಕೆ ಬುಕ್ ಮೈ ಶೋನಲ್ಲಿ 2.8 ಸಾವಿರ ಮಂದಿ ವೋಟ್ ಮಾಡಿದ್ದು, 9.2 ರೇಟಿಂಗ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​