AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಘೀರ’ ಚಿತ್ರದ ಮೊದಲ ದಿನದ ಗಳಿಕೆ, ಸಿಕ್ಕ ರೇಟಿಂಗ್ ಎಷ್ಟು? ಇಲ್ಲಿದೆ ವಿವರ

‘ಬಘೀರ’ ಚಿತ್ರದ ಅವಧಿ 2.38 ಗಂಟೆ ಇದೆ. ಈ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್ ಅಂಶ ಹೊಂದಿದೆ. ಈ ಚಿತ್ರಕ್ಕೆ ಬುಕ್ ಮೈ ಶೋನಲ್ಲಿ 2.8 ಸಾವಿರ ಮಂದಿ ವೋಟ್ ಮಾಡಿದ್ದು, 9.2 ರೇಟಿಂಗ್ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಈ ರೇಟಿಂಗ್​ನಲ್ಲಿ ವ್ಯತ್ಯಾಸ ಆಗಲಿದೆ.

‘ಬಘೀರ’ ಚಿತ್ರದ ಮೊದಲ ದಿನದ ಗಳಿಕೆ, ಸಿಕ್ಕ ರೇಟಿಂಗ್ ಎಷ್ಟು? ಇಲ್ಲಿದೆ ವಿವರ
ಬಘೀರ
ರಾಜೇಶ್ ದುಗ್ಗುಮನೆ
|

Updated on: Nov 01, 2024 | 11:42 AM

Share

ಶ್ರೀಮುರಳಿ ಅವರು ‘ಉಗ್ರಂ’, ‘ಮಫ್ತಿ’ ಮೂಲಕ ದೊಡ್ಡ ಯಶಸ್ಸು ಪಡೆದಿದ್ದಾರೆ. ಅವರಿಗೆ ಒಂದು ದೊಡ್ಡ ಗೆಲುವಿನ ಅವಶ್ಯಕತೆ ಇತ್ತು. ಆ ಗೆಲುವು ‘ಬಘೀರ’ ಚಿತ್ರದ ಮೂಲಕ ಸಿಕ್ಕಿದೆ. ಟ್ರೇಲರ್ ಮೂಲಕವೇ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಮಾಡಿದ್ದ ‘ಬಘೀರ’ ಚಿತ್ರ ಥಿಯೇಟರ್​ನಲ್ಲಿ ಹವಾ ಎಬ್ಬಿಸಿದೆ. ಈ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲೂ ಉತ್ತಮ ಗಳಿಕೆ ಮಾಡುತ್ತಿದೆ.

‘ಬಘೀರ’ ಸಿನಿಮಾ ಬಗ್ಗೆ

ಡಾ. ಸೂರಿ ಅವರು ‘ಬಘೀರ’ ಚಿತ್ರ ನಿರ್ದೇಶನ ಮಾಡಿದ್ದಾರೆ. ‘ಕೆಜಿಎಫ್’ ರೀತಿಯ ಸಿನಿಮಾಗಳನ್ನು ತೆರೆಮೇಲೆ ತಂದ ಪ್ರಶಾಂತ್ ನೀಲ್ ಅವರು ‘ಬಘೀರ’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈ ಸಿನಿಮಾದಲ್ಲಿ ಶ್ರೀಮುರಳಿಗೆ ಜೊತೆಯಾಗಿ ರುಕ್ಮಿಣಿ ವಸಂತ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಅಚ್ಯುತ್ ಕುಮಾರ್, ಪ್ರಕಾಶ್ ರಾಜ್, ಗರುಡ ರಾಮ್ ಮೊದಲಾದವರು ಬಣ್ಣ ಹಚ್ಚಿದ್ದಾರೆ. ಹೊಂಬಾಳೆ ಫಿಲ್ಮ್ಸ್​ ಈ ಸಿನಿಮಾನ ನಿರ್ಮಾಣ ಮಾಡಿದೆ. ಸಿನಿಮಾ ಸೆಟ್​ನಲ್ಲಿ ಶ್ರೀಮುರಳಿ ಅವರಿಗೆ ಪೆಟ್ಟಾಗಿದ್ದರಿಂದ ಸಿನಿಮಾ ಕೆಲಸಗಳು ವಿಳಂಬ ಆದವು.

ಕಲೆಕ್ಷನ್

ಬಾಕ್ಸ್ ಆಫೀಸ್ ಬಗ್ಗೆ ಮಾಹಿತಿ ನೀಡುವ Sacnilk ವರದಿ ಮಾಡಿರುವ ಪ್ರಕಾರ ‘ಬಘೀರ’ ಚಿತ್ರ ಬರೋಬ್ಬರಿ 2.8 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಹೊಂಬಾಳೆ ಫಿಲ್ಮ್ಸ್​ ಕಡೆಯಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಈ ಚಿತ್ರಕ್ಕೆ ಮೊದಲ ದಿನ ವಿಮರ್ಶಕರಿಂದ ಮೆಚ್ಚುಗೆ ಸಿಕ್ಕಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಚಿತ್ರಕ್ಕೆ ಭರ್ಜರಿ ಗಳಿಕೆ ಆಗೋದು ಖಚಿತ ಎನ್ನಲಾಗುತ್ತಿದೆ. ದೀಪಾವಳಿ ಪ್ರಯುಕ್ತ ಸಾಲು ಸಾಲು ರಜೆಗಳಿವೆ. ಇದು ಸಿನಿಮಾಗೆ ಸಹಕಾರಿ ಆಗಲಿದೆ.

ಇದನ್ನೂ ಓದಿ: Bagheera Review: ಸೂಪರ್ ಹೀರೋ ಆದ ಶ್ರೀಮುರಳಿ; ‘ಬಘೀರ’ ಚಿತ್ರದಲ್ಲಿ ಬ್ಯಾಟ್​ಮ್ಯಾನ್ ರೀತಿಯ ಕಥೆ

ರೇಟಿಂಗ್

‘ಬಘೀರ’ ಚಿತ್ರದ ಅವಧಿ 2.38 ಗಂಟೆ ಇದೆ. ಈ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್ ಅಂಶ ಹೊಂದಿದೆ. ಈ ಚಿತ್ರಕ್ಕೆ ಬುಕ್ ಮೈ ಶೋನಲ್ಲಿ 2.8 ಸಾವಿರ ಮಂದಿ ವೋಟ್ ಮಾಡಿದ್ದು, 9.2 ರೇಟಿಂಗ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು