AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನಲ್ಲಿ ‘ಬಘೀರ’ ಚಿತ್ರ ಮಾಡಿದ ಕಲೆಕ್ಷನ್ ಎಷ್ಟು? ಸಿನಿಮಾದ ಒಟ್ಟಾರೆ ಗಳಿಕೆ ಬಗ್ಗೆ ಇಲ್ಲಿದೆ ವಿವರ 

‘ಬಘೀರ’ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಮೊದಲ ದಿನ 3.05 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನ 3.3 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಮೂರನೇ ದಿನ 3.5 ಕೋಟಿ ರೂಪಾಯಿ ಆಗಿದೆ.

ತೆಲುಗಿನಲ್ಲಿ ‘ಬಘೀರ’ ಚಿತ್ರ ಮಾಡಿದ ಕಲೆಕ್ಷನ್ ಎಷ್ಟು? ಸಿನಿಮಾದ ಒಟ್ಟಾರೆ ಗಳಿಕೆ ಬಗ್ಗೆ ಇಲ್ಲಿದೆ ವಿವರ 
ಬಘೀರ
ರಾಜೇಶ್ ದುಗ್ಗುಮನೆ
|

Updated on: Nov 04, 2024 | 8:12 PM

Share

ಹೊಂಬಾಳೆ ಫಿಲ್ಮ್ಸ್​ಗೆ ಮತ್ತೊಂದು ಯಶಸ್ಸಿನ ಗರಿ ಸಿಕ್ಕಿದೆ. ಅವರ ನಿರ್ಮಾಣದ ‘ಬಘೀರ’ ಸಿನಿಮಾ ಯಶಸ್ಸು ಕಂಡಿದೆ. ದೀಪಾವಳಿ ಪ್ರಯುಕ್ತ ರಿಲೀಸ್ ಆದ ಈ ಚಿತ್ರ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಈ ಸಿನಿಮಾದ ಒಟ್ಟಾರೆ ಗಳಿಕೆ ಎಷ್ಟು? ಚಿತ್ರಕ್ಕೆ ತೆಲುಗಿನಿಂದ ಆದ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಈ ಸ್ಟೋರಿಯಲ್ಲಿದೆ ವಿವರ.

‘ಬಘೀರ’ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಮೊದಲ ದಿನ 3.05 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನ 3.3 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಮೂರನೇ ದಿನ 3.5 ಕೋಟಿ ರೂಪಾಯಿ ಆಗಿದೆ. ನಾಲ್ಕನೇ ದಿನ 3.05 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಮೂಲಕ ಚಿತ್ರ ಪ್ರತಿ ದಿನ ಸರಾಸರಿ 3 ಕೋಟಿ ರೂಪಾಯಿ ಬಾಚಿಕೊಂಡಿದೆ.

‘ಬಘೀರ’ ಚಿತ್ರದ ಒಟ್ಟಾರೆ ಕಲೆಕ್ಷನ್ 12.9 ಕೋಟಿ ರೂಪಾಯಿ ಆಗಿದೆ. ಅಂದರೆ 13 ಕೋಟಿ ರೂಪಾಯಿ ಈ ಚಿತ್ರ ಗಳಿಕೆ ಮಾಡಿದೆ. ಈ ಪೈಕಿ ಕನ್ನಡದಲ್ಲಿ 11.5 ಕೋಟಿ ರೂಪಾಯಿ ಹಾಗೂ ತೆಲುಗಿನಲ್ಲಿ 1.4 ಕೋಟಿ ರೂಪಾಯಿನ ಚಿತ್ರ ಗಳಿಕೆ ಮಾಡಿದೆ. ಇದು ಸಾಧಾರಣ ಗಳಿಕೆಯೇ ಆದರೂ ಸದ್ಯದ ಪರಿಸ್ಥಿತಿಯಲ್ಲಿ ಉತ್ತಮ ಕಲೆಕ್ಷನ್ ಎನ್ನಬಹುದು.

ಸದ್ಯ ಕನ್ನಡದ ಯಾವ ಸಿನಿಮಾಗಳೂ ದೊಡ್ಡ ಮಟ್ಟದಲ್ಲಿ ಗೆಲುವು ಕಾಣುತ್ತಿಲ್ಲ ಎನ್ನುವ ಮಾತಿದೆ. ಕಳೆದ 10 ತಿಂಗಳಲ್ಲಿ ರಿಲೀಸ್ ಆಗಿ ಗೆದ್ದಿದ್ದು ಕೆಲವೇ ಕೆಲವು ಚಿತ್ರಗಳು. ಈಗ ‘ಬಘೀರ’ ಕೂಡ ಗೆಲುವಿನ ನಗೆ ಬೀರಿದೆ ಎನ್ನಬಹುದು. ಈ ಚಿತ್ರದಿಂದ ಶ್ರೀಮುರಳಿ ಗೆಲುವಿನ ನಗು ಬೀರಿದ್ದಾರೆ.

ಇದನ್ನೂ ಓದಿ: ಎರಡನೇ ದಿನಕ್ಕೆ ಹೆಚ್ಚಿತು ‘ಬಘೀರ’ನ ಅಬ್ಬರ; ಇಲ್ಲಿದೆ ಕಲೆಕ್ಷನ್ ವಿವರ

‘ಬಘೀರ’ ಚಿತ್ರಕ್ಕೆ ಡಾ.ಸೂರಿ ನಿರ್ದೇಶನ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರದಲ್ಲಿ ಶ್ರೀಮುರಳಿಗೆ ಜೊತೆಯಾಗಿ ರುಕ್ಮಿಣಿ ಅವರು ನಟಿಸಿದ್ದಾರೆ. ಪ್ರಕಾಶ್ ರಾಜ್, ಅಚ್ಯುತ್ ಕುಮಾರ್, ಗರುಡ ರಾಮ್ ಮೊದಲಾದವರು ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!