AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನಲ್ಲಿ ‘ಬಘೀರ’ ಚಿತ್ರ ಮಾಡಿದ ಕಲೆಕ್ಷನ್ ಎಷ್ಟು? ಸಿನಿಮಾದ ಒಟ್ಟಾರೆ ಗಳಿಕೆ ಬಗ್ಗೆ ಇಲ್ಲಿದೆ ವಿವರ 

‘ಬಘೀರ’ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಮೊದಲ ದಿನ 3.05 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನ 3.3 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಮೂರನೇ ದಿನ 3.5 ಕೋಟಿ ರೂಪಾಯಿ ಆಗಿದೆ.

ತೆಲುಗಿನಲ್ಲಿ ‘ಬಘೀರ’ ಚಿತ್ರ ಮಾಡಿದ ಕಲೆಕ್ಷನ್ ಎಷ್ಟು? ಸಿನಿಮಾದ ಒಟ್ಟಾರೆ ಗಳಿಕೆ ಬಗ್ಗೆ ಇಲ್ಲಿದೆ ವಿವರ 
ಬಘೀರ
ರಾಜೇಶ್ ದುಗ್ಗುಮನೆ
|

Updated on: Nov 04, 2024 | 8:12 PM

Share

ಹೊಂಬಾಳೆ ಫಿಲ್ಮ್ಸ್​ಗೆ ಮತ್ತೊಂದು ಯಶಸ್ಸಿನ ಗರಿ ಸಿಕ್ಕಿದೆ. ಅವರ ನಿರ್ಮಾಣದ ‘ಬಘೀರ’ ಸಿನಿಮಾ ಯಶಸ್ಸು ಕಂಡಿದೆ. ದೀಪಾವಳಿ ಪ್ರಯುಕ್ತ ರಿಲೀಸ್ ಆದ ಈ ಚಿತ್ರ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಈ ಸಿನಿಮಾದ ಒಟ್ಟಾರೆ ಗಳಿಕೆ ಎಷ್ಟು? ಚಿತ್ರಕ್ಕೆ ತೆಲುಗಿನಿಂದ ಆದ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಈ ಸ್ಟೋರಿಯಲ್ಲಿದೆ ವಿವರ.

‘ಬಘೀರ’ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಮೊದಲ ದಿನ 3.05 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನ 3.3 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಮೂರನೇ ದಿನ 3.5 ಕೋಟಿ ರೂಪಾಯಿ ಆಗಿದೆ. ನಾಲ್ಕನೇ ದಿನ 3.05 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಮೂಲಕ ಚಿತ್ರ ಪ್ರತಿ ದಿನ ಸರಾಸರಿ 3 ಕೋಟಿ ರೂಪಾಯಿ ಬಾಚಿಕೊಂಡಿದೆ.

‘ಬಘೀರ’ ಚಿತ್ರದ ಒಟ್ಟಾರೆ ಕಲೆಕ್ಷನ್ 12.9 ಕೋಟಿ ರೂಪಾಯಿ ಆಗಿದೆ. ಅಂದರೆ 13 ಕೋಟಿ ರೂಪಾಯಿ ಈ ಚಿತ್ರ ಗಳಿಕೆ ಮಾಡಿದೆ. ಈ ಪೈಕಿ ಕನ್ನಡದಲ್ಲಿ 11.5 ಕೋಟಿ ರೂಪಾಯಿ ಹಾಗೂ ತೆಲುಗಿನಲ್ಲಿ 1.4 ಕೋಟಿ ರೂಪಾಯಿನ ಚಿತ್ರ ಗಳಿಕೆ ಮಾಡಿದೆ. ಇದು ಸಾಧಾರಣ ಗಳಿಕೆಯೇ ಆದರೂ ಸದ್ಯದ ಪರಿಸ್ಥಿತಿಯಲ್ಲಿ ಉತ್ತಮ ಕಲೆಕ್ಷನ್ ಎನ್ನಬಹುದು.

ಸದ್ಯ ಕನ್ನಡದ ಯಾವ ಸಿನಿಮಾಗಳೂ ದೊಡ್ಡ ಮಟ್ಟದಲ್ಲಿ ಗೆಲುವು ಕಾಣುತ್ತಿಲ್ಲ ಎನ್ನುವ ಮಾತಿದೆ. ಕಳೆದ 10 ತಿಂಗಳಲ್ಲಿ ರಿಲೀಸ್ ಆಗಿ ಗೆದ್ದಿದ್ದು ಕೆಲವೇ ಕೆಲವು ಚಿತ್ರಗಳು. ಈಗ ‘ಬಘೀರ’ ಕೂಡ ಗೆಲುವಿನ ನಗೆ ಬೀರಿದೆ ಎನ್ನಬಹುದು. ಈ ಚಿತ್ರದಿಂದ ಶ್ರೀಮುರಳಿ ಗೆಲುವಿನ ನಗು ಬೀರಿದ್ದಾರೆ.

ಇದನ್ನೂ ಓದಿ: ಎರಡನೇ ದಿನಕ್ಕೆ ಹೆಚ್ಚಿತು ‘ಬಘೀರ’ನ ಅಬ್ಬರ; ಇಲ್ಲಿದೆ ಕಲೆಕ್ಷನ್ ವಿವರ

‘ಬಘೀರ’ ಚಿತ್ರಕ್ಕೆ ಡಾ.ಸೂರಿ ನಿರ್ದೇಶನ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರದಲ್ಲಿ ಶ್ರೀಮುರಳಿಗೆ ಜೊತೆಯಾಗಿ ರುಕ್ಮಿಣಿ ಅವರು ನಟಿಸಿದ್ದಾರೆ. ಪ್ರಕಾಶ್ ರಾಜ್, ಅಚ್ಯುತ್ ಕುಮಾರ್, ಗರುಡ ರಾಮ್ ಮೊದಲಾದವರು ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ