Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿನಲ್ಲಿ ‘ಬಘೀರ’ ಚಿತ್ರ ಮಾಡಿದ ಕಲೆಕ್ಷನ್ ಎಷ್ಟು? ಸಿನಿಮಾದ ಒಟ್ಟಾರೆ ಗಳಿಕೆ ಬಗ್ಗೆ ಇಲ್ಲಿದೆ ವಿವರ 

‘ಬಘೀರ’ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಮೊದಲ ದಿನ 3.05 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನ 3.3 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಮೂರನೇ ದಿನ 3.5 ಕೋಟಿ ರೂಪಾಯಿ ಆಗಿದೆ.

ತೆಲುಗಿನಲ್ಲಿ ‘ಬಘೀರ’ ಚಿತ್ರ ಮಾಡಿದ ಕಲೆಕ್ಷನ್ ಎಷ್ಟು? ಸಿನಿಮಾದ ಒಟ್ಟಾರೆ ಗಳಿಕೆ ಬಗ್ಗೆ ಇಲ್ಲಿದೆ ವಿವರ 
ಬಘೀರ
Follow us
ರಾಜೇಶ್ ದುಗ್ಗುಮನೆ
|

Updated on: Nov 04, 2024 | 8:12 PM

ಹೊಂಬಾಳೆ ಫಿಲ್ಮ್ಸ್​ಗೆ ಮತ್ತೊಂದು ಯಶಸ್ಸಿನ ಗರಿ ಸಿಕ್ಕಿದೆ. ಅವರ ನಿರ್ಮಾಣದ ‘ಬಘೀರ’ ಸಿನಿಮಾ ಯಶಸ್ಸು ಕಂಡಿದೆ. ದೀಪಾವಳಿ ಪ್ರಯುಕ್ತ ರಿಲೀಸ್ ಆದ ಈ ಚಿತ್ರ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಈ ಸಿನಿಮಾದ ಒಟ್ಟಾರೆ ಗಳಿಕೆ ಎಷ್ಟು? ಚಿತ್ರಕ್ಕೆ ತೆಲುಗಿನಿಂದ ಆದ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಈ ಸ್ಟೋರಿಯಲ್ಲಿದೆ ವಿವರ.

‘ಬಘೀರ’ ಸಿನಿಮಾ ಅಕ್ಟೋಬರ್ 31ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಮೊದಲ ದಿನ 3.05 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನ 3.3 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಮೂರನೇ ದಿನ 3.5 ಕೋಟಿ ರೂಪಾಯಿ ಆಗಿದೆ. ನಾಲ್ಕನೇ ದಿನ 3.05 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಮೂಲಕ ಚಿತ್ರ ಪ್ರತಿ ದಿನ ಸರಾಸರಿ 3 ಕೋಟಿ ರೂಪಾಯಿ ಬಾಚಿಕೊಂಡಿದೆ.

‘ಬಘೀರ’ ಚಿತ್ರದ ಒಟ್ಟಾರೆ ಕಲೆಕ್ಷನ್ 12.9 ಕೋಟಿ ರೂಪಾಯಿ ಆಗಿದೆ. ಅಂದರೆ 13 ಕೋಟಿ ರೂಪಾಯಿ ಈ ಚಿತ್ರ ಗಳಿಕೆ ಮಾಡಿದೆ. ಈ ಪೈಕಿ ಕನ್ನಡದಲ್ಲಿ 11.5 ಕೋಟಿ ರೂಪಾಯಿ ಹಾಗೂ ತೆಲುಗಿನಲ್ಲಿ 1.4 ಕೋಟಿ ರೂಪಾಯಿನ ಚಿತ್ರ ಗಳಿಕೆ ಮಾಡಿದೆ. ಇದು ಸಾಧಾರಣ ಗಳಿಕೆಯೇ ಆದರೂ ಸದ್ಯದ ಪರಿಸ್ಥಿತಿಯಲ್ಲಿ ಉತ್ತಮ ಕಲೆಕ್ಷನ್ ಎನ್ನಬಹುದು.

ಸದ್ಯ ಕನ್ನಡದ ಯಾವ ಸಿನಿಮಾಗಳೂ ದೊಡ್ಡ ಮಟ್ಟದಲ್ಲಿ ಗೆಲುವು ಕಾಣುತ್ತಿಲ್ಲ ಎನ್ನುವ ಮಾತಿದೆ. ಕಳೆದ 10 ತಿಂಗಳಲ್ಲಿ ರಿಲೀಸ್ ಆಗಿ ಗೆದ್ದಿದ್ದು ಕೆಲವೇ ಕೆಲವು ಚಿತ್ರಗಳು. ಈಗ ‘ಬಘೀರ’ ಕೂಡ ಗೆಲುವಿನ ನಗೆ ಬೀರಿದೆ ಎನ್ನಬಹುದು. ಈ ಚಿತ್ರದಿಂದ ಶ್ರೀಮುರಳಿ ಗೆಲುವಿನ ನಗು ಬೀರಿದ್ದಾರೆ.

ಇದನ್ನೂ ಓದಿ: ಎರಡನೇ ದಿನಕ್ಕೆ ಹೆಚ್ಚಿತು ‘ಬಘೀರ’ನ ಅಬ್ಬರ; ಇಲ್ಲಿದೆ ಕಲೆಕ್ಷನ್ ವಿವರ

‘ಬಘೀರ’ ಚಿತ್ರಕ್ಕೆ ಡಾ.ಸೂರಿ ನಿರ್ದೇಶನ ಇದೆ. ಈ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಈ ಚಿತ್ರದಲ್ಲಿ ಶ್ರೀಮುರಳಿಗೆ ಜೊತೆಯಾಗಿ ರುಕ್ಮಿಣಿ ಅವರು ನಟಿಸಿದ್ದಾರೆ. ಪ್ರಕಾಶ್ ರಾಜ್, ಅಚ್ಯುತ್ ಕುಮಾರ್, ಗರುಡ ರಾಮ್ ಮೊದಲಾದವರು ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ