AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ದಿನಕ್ಕೆ ಹೆಚ್ಚಿತು ‘ಬಘೀರ’ನ ಅಬ್ಬರ; ಇಲ್ಲಿದೆ ಕಲೆಕ್ಷನ್ ವಿವರ

‘ಬಘೀರ’ ಚಿತ್ರ ಶ್ರೀಮುರಳಿ ನಟನೆಯ ಕನ್ನಡದ ಸಿನಿಮಾ. ಈ ಚಿತ್ರಕ್ಕೆ ಡಾ. ಸೂರಿ ಅವರ ನಿರ್ದೇಶನ ಇದೆ. ‘ಕೆಜಿಎಫ್’, ‘ಕೆಜಿಎಫ್ 2’, ‘ಕಾಂತಾರ’ ರೀತಿಯ ಸಿನಿಮಾಗಳನ್ನು ನಿರ್ಮಿಸಿದ ‘ಹೊಂಬಾಳೆ ಫಿಲ್ಮ್ಸ್’ ಈ ಚಿತ್ರವನ್ನು ನಿರ್ಮಾಣ ಮಾಡಿದೆ ಎಂಬ ಕಾರಣಕ್ಕೂ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿತ್ತು.

ಎರಡನೇ ದಿನಕ್ಕೆ ಹೆಚ್ಚಿತು ‘ಬಘೀರ’ನ ಅಬ್ಬರ; ಇಲ್ಲಿದೆ ಕಲೆಕ್ಷನ್ ವಿವರ
ಉಗ್ರಂ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 02, 2024 | 8:25 AM

Share

ಶ್ರೀಮುರಳಿ ನಟನೆಯ ‘ಬಘೀರ’ ಚಿತ್ರವು ದೀಪಾವಳಿ ಪ್ರಯುಕ್ತ ಅಕ್ಟೋಬರ್ 31ರಂದು ರಿಲೀಸ್ ಆಯಿತು. ಈ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. ಎಲ್ಲರೂ ಮುಗಿಬಿದ್ದು ಸಿನಿಮಾನ ವೀಕ್ಷಣೆ ಮಾಡುತ್ತಿದ್ದಾರೆ. ದೀಪಾವಳಿ ಹಬ್ಬದ ರಜೆಗಳು ಚಿತ್ರದ ಗಳಿಕೆಯನ್ನು ಹೆಚ್ಚಿಸುವಲ್ಲಿ ಸಹಕಾರಿ ಆಗುತ್ತಿದೆ. ಮೊದಲ ದಿನಕ್ಕಿಂತ ಎರಡನೇ ದಿನ ಚಿತ್ರವು ಉತ್ತಮ ಗಳಿಕೆ ಮಾಡಿದೆ. ಆ ಬಗ್ಗೆ ಇಲ್ಲಿ ನಾವು ಹೇಳುತ್ತಿದ್ದೇವೆ.

‘ಬಘೀರ’ ಚಿತ್ರ ಶ್ರೀಮುರಳಿ ನಟನೆಯ ಕನ್ನಡದ ಸಿನಿಮಾ. ಈ ಚಿತ್ರಕ್ಕೆ ಡಾ. ಸೂರಿ ಅವರ ನಿರ್ದೇಶನ ಇದೆ. ‘ಕೆಜಿಎಫ್’, ‘ಕೆಜಿಎಫ್ 2’, ‘ಕಾಂತಾರ’ ರೀತಿಯ ಸಿನಿಮಾಗಳನ್ನು ನಿರ್ಮಿಸಿದ ‘ಹೊಂಬಾಳೆ ಫಿಲ್ಮ್ಸ್’ ಈ ಚಿತ್ರವನ್ನು ನಿರ್ಮಾಣ ಮಾಡಿದೆ ಎಂಬ ಕಾರಣಕ್ಕೂ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿತ್ತು. ಈ ನಿರೀಕ್ಷೆಯನ್ನು ಸಿನಿಮಾ ತಲುಪಿದೆ.

‘ಬಘೀರ’ ಸಿನಿಮಾ ಮೊದಲ ದಿನ 3.25 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇದರಲ್ಲಿ ಕನ್ನಡದ್ದು 2.55 ಕೋಟಿ ರೂಪಾಯಿ ಆದರೆ, ಉಳಿದ ಮೊತ್ತ ತೆಲುಗು ವರ್ಷನ್​ನಿಂದ ಹರಿದು ಬಂದಿತ್ತು. ಎರಡನೇ ದಿನ ಚಿತ್ರ 3.25 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು sacnilk ಹೇಳಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 6.30 ಕೋಟಿ ರೂಪಾಯಿ ಆಗಿದೆ.

ಸದ್ಯ ಎರಡನೇ ದಿನ ಕಲೆಕ್ಷನ್ ದೊರೆತಿರೋದು ಕನ್ನಡದ ವರ್ಷನ್​ನಿಂದ ಮಾತ್ರ ಎಂದು ಹೇಳಲಾಗುತ್ತಿದೆ. ತೆಲುಗು ಕಲೆಕ್ಷನ್ ಸೇರಿದರೆ ಸಿನಿಮಾದ ಗಳಿಕೆ ಮತ್ತಷ್ಟು ಹೆಚ್ಚಲಿದೆ. ಈ ಚಿತ್ರದಿಂದ ನಟ ಶ್ರೀಮುರಳಿ ಅವರಿಗೆ ದೊಡ್ಡ ಗೆಲುವು ಸಿಕ್ಕಂತೆ ಆಗಿದೆ.

2019ರಲ್ಲಿ ರಿಲೀಸ್ ಆದ ‘ಭರಾಟೆ’ ವಿಫಲತೆ ಕಂಡಿತು. 2021ರಲ್ಲಿ ‘ಮದಗಜ’ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆಯಿತು. ಈ ಎಲ್ಲಾ ಕಾರಣಕ್ಕೆ ಶ್ರೀಮುರಳಿ ಅವರಿಗೆ ಒಂದು ದೊಡ್ಡ ಗೆಲುವಿನ ಅವಶ್ಯಕತೆ ಇತ್ತು. ಅದು ಪೂರ್ಣಗೊಂಡಿದೆ. ‘ಬಘೀರ’ ಚಿತ್ರದಿಂದ ಅವರು ಗೆಲುವಿನ ನಗೆ ಬೀರಿದ್ದಾರೆ.

ಇದನ್ನೂ ಓದಿ: Bagheera Review: ಸೂಪರ್ ಹೀರೋ ಆದ ಶ್ರೀಮುರಳಿ; ‘ಬಘೀರ’ ಚಿತ್ರದಲ್ಲಿ ಬ್ಯಾಟ್​ಮ್ಯಾನ್ ರೀತಿಯ ಕಥೆ

ಇಂದು (ನವೆಂಬರ್ 2) ಹಾಗೂ ನಾಳೆ (ಡಿಸೆಂಬರ್ 3) ಚಿತ್ರ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಹಬ್ಬ ಹಾಗೂ ವೀಕೆಂಡ್ ಕಾರಣದಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಣೆ ಮಾಡುವ ಸಾಧ್ಯತೆ ಇದೆ. ಈ ಚಿತ್ರಕ್ಕೆ ಕಥೆ ಬರೆದಿದ್ದು ಪ್ರಶಾಂತ್ ನೀಲ್ ಅವರು. ಪ್ರಶಾಂತ್ ನೀಲ್​ಗೆ ತೆಲುಗಿನಲ್ಲಿ ಸಾಕಷ್ಟು ಬೇಡಿಕೆ ಇದೆ. ಹೀಗಾಗಿ, ಅಲ್ಲಿನವರು ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!