AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

James: ಜೇಮ್ಸ್ ಚಿತ್ರತಂಡದಿಂದ ಸರ್ಪ್ರೈಸ್; ಟೀಸರ್ ಹಾಗೂ ಹೊಸ ಪೋಸ್ಟರ್ ಬಿಡುಗಡೆ ದಿನಾಂಕ ಘೋಷಿಸಿದ ನಿರ್ದೇಶಕ ಚೇತನ್

Puneeth Rajkumar: ಪುನೀತ್ ರಾಜಕುಮಾರ್ ನಟನೆಯ ‘ಜೇಮ್ಸ್’ ಚಿತ್ರದ ಕುರಿತಂತೆ ಅಪ್ಡೇಟ್ಸ್ ನಿರೀಕ್ಷಿಸುತ್ತಿದ್ದ ಅಭಿಮಾನಿಗಳಿಗೆ ಕೊನೆಗೂ ಉತ್ತರ ಸಿಕ್ಕಿದೆ. ನಿರ್ದೇಶಕ ಬಹದ್ದೂರ್ ಚೇತನ್ ಎರಡು ವಿಷಯಗಳನ್ನು ಘೋಷಿಸಿದ್ದಾರೆ.

James: ಜೇಮ್ಸ್ ಚಿತ್ರತಂಡದಿಂದ ಸರ್ಪ್ರೈಸ್; ಟೀಸರ್ ಹಾಗೂ ಹೊಸ ಪೋಸ್ಟರ್ ಬಿಡುಗಡೆ ದಿನಾಂಕ ಘೋಷಿಸಿದ ನಿರ್ದೇಶಕ ಚೇತನ್
ನಿರ್ದೇಶಕ ಚೇತನ್, ‘ಜೇಮ್ಸ್’ ಚಿತ್ರದ ಪೋಸ್ಟರ್
TV9 Web
| Edited By: |

Updated on: Oct 29, 2021 | 11:15 AM

Share

ಪುನೀತ್ ರಾಜಕುಮಾರ್ (Puneeth Rajkumar) ಅಭಿನಯದ ‘ಜೇಮ್ಸ್’ (James) ಚಿತ್ರ ಅಪಾರ ನಿರೀಕ್ಷೆ ಹುಟ್ಟುಹಾಕಿದೆ. ಆದರೆ ಅಪ್ಪು ಅಭಿಮಾನಿಗಳು ಜೇಮ್ಸ್ ಚಿತ್ರದ ಅಪ್ಡೇಟ್ ಬರದಿರುವ ಬಗ್ಗೆ ಬಹಳ ಬೇಸರಗೊಂಡಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪುನೀತ್ ಅಭಿಮಾನಿಯೋರ್ವ ಬೇಸರದಿಂದ ಬರೆದ ಪತ್ರವೂ ವೈರಲ್ ಆಗಿತ್ತು. ಈ ಘಟನೆಗಳ ನಂತರ, ಚಿತ್ರತಂಡ ಆದಷ್ಟು ಬೇಗ ಚಿತ್ರದ ಕುರಿತು ಅಪ್ಡೇಟ್ ನೀಡಬೇಕು ಎಂದು ಅಭಿಮಾನಿಗಳು ಕೋರಿಕೊಂಡಿದ್ದರು. ಇದೀಗ ಫ್ಯಾನ್ಸ್ ಕೋರಿಕೆಗೆ ಉತ್ತರ ಬಂದಿದೆ. ಚಿತ್ರತಂಡ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಮಾಡುವ ದಿನಾಂಕವನ್ನು ನಿರ್ದೇಶಕ ಬಹದ್ದೂರ್ ಚೇತನ್ (Bahaddur Chethan) ಘೋಷಿಸಿದ್ದಾರೆ. 

ಜೇಮ್ಸ್ ಬಹಳ ದೊಡ್ಡ ಬಜೆಟ್ ಚಿತ್ರ. ಚಿತ್ರದ ಕೆಲಸಗಳು ನಡೆಯುತ್ತಿವೆ. ಅಭಿಮಾನಿಗಳ ಕೋರಿಕೆಯೆಂದರೆ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮೂಡಿಬರಲಿ ಎಂದು. ಅದನ್ನು ಖಂಡಿತ ಈಡೇರಿಸುತ್ತೇವೆ ಎಂದು ಚೇತನ್ ಹೇಳಿದ್ದಾರೆ. ಅಲ್ಲದೇ ಅವರು ಫ್ಯಾನ್ಸ್​ಗೆ ಸರ್ಪ್ರೈಸ್ ಸುದ್ದಿಯೊಂದನ್ನು ನೀಡಿದ್ದು, ದೀಪಾವಳಿಗೆ ಹೊಸ ಪೋಸ್ಟರ್ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಚಿತ್ರದ ಟೀಸರ್ ಬಿಡುಗಡೆಯ ಕುರಿತ ಪ್ರಶ್ನೆಗೂ ಅವರು ಉತ್ತರಿಸಿದ್ದು, ಕ್ರಿಸ್​ಮಸ್​ನಲ್ಲಿ ಟೀಸರ್ ಬಿಡುಗಡೆ ಮಾಡಲಾಗುವುದು ಎಂದಿದ್ಧಾರೆ. ಇದರಿಂದ ಅಭಿಮಾನಿಗಳ ಕಾಯುವಿಕೆಗೆ ಉತ್ತರ ಸಿಕ್ಕಿದ್ದು, ಸದ್ಯದಲ್ಲೇ ಪೋಸ್ಟರ್ ಹಾಗೂ ಟೀಸರ್ ಬಿಡುಗಡೆಯಾಗಲಿವೆ.

ಬಹದ್ದೂರ್ ಚೇತನ್ ಮಾತನಾಡಿರುವ ವಿಡಿಯೋ:

ಇತ್ತೀಚೆಗೆ ವೈರಲ್ ಅಭಿಮಾನಿಯೊಬ್ಬ ಡೆತ್ ನೋಟ್ ಮಾದರಿಯ ಪತ್ರದಲ್ಲಿ ಜೇಮ್ಸ್ ಕುರಿತ ಅಪ್ಡೇಟ್ ಬರದಿರುವುದರಿಂದ ಬೇಸರಗೊಂಡಿದ್ದೇನೆ. ಇದಕ್ಕೆ ಚೇತನ್ ಕಾರಣ ಎಂದು ಬರೆದಿದ್ದು ವೈರಲ್ ಆಗಿತ್ತು. ಆದರೆ ಆ ಪತ್ರದ ಆಶಯ ಚಿತ್ರದ ಅಪ್ಡೇಟ್ ಬರಲಿ ಎಂಬುದಾಗಿತ್ತೇ ಹೊರತು, ಸಾಯುವ ಕುರಿತು ಆಗಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಇದು ವೈರಲ್ ಆಗಿ, ಸಾಕಷ್ಟು ಚರ್ಚೆಯನ್ನೂ ಹುಟ್ಟುಹಾಕಿತ್ತು. ಅದರ ಕುರಿತಂತೆಯೂ ಚೇತನ್ ಪ್ರತಿಕ್ರಿಯೆ ನೀಡಿದ್ದು, ಅಭಿಮಾನಿಗಳು ದುಡುಕಬೇಡಿ. ಆ ಪತ್ರದ ಕುರಿತಂತೆ ನನಗೂ ಕಾಲ್ ಬಂದಿತ್ತು ಎಂದಿದ್ಧಾರೆ. ನಾವೂ ಅಪ್ಪು ಅವರ ಅಭಿಮಾನಿಯಾಗಿ ಚಿತ್ರ ಮಾಡುತ್ತಿದ್ದೇವೆ. ನಿಮ್ಮ ನಿರೀಕ್ಷೆಗಳನ್ನು ಪೂರೈಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದೂ ಚೇತನ್ ನುಡಿದಿದ್ದಾರೆ.

ಶಿವರಾಜ್ ಕುಮಾರ್ ಅಭಿಮಾನಿಯಾಗಿ ಮೊದಲ ಶೋವನ್ನು ಮಿಸ್ ಮಾಡಿಕೊಳ್ಳುವುದಿಲ್ಲ. ಚಿತ್ರ ಬಹಳ ಅದ್ಭುತವಾಗಿದೆ. ಒಂದು ಸಂಪೂರ್ಣ ಎಂಟರ್​ಟೈನಿಂಗ್ ಚಿತ್ರ ಎಂದು ಚೇತನ್ ಹೊಗಳಿದ್ದಾರೆ.

ಇದನ್ನೂ ಓದಿ:

Bhajarangi 2 Movie Review: ಫ್ಯಾಂಟಸಿ ಲೋಕದ ‘ಭಜರಂಗಿ 2’ ಕಥೆಯಲ್ಲಿ ಶಿವಣ್ಣನ ಎನರ್ಜಿಯೇ ಹೈಲೈಟ್

Aryan Khan: ಆರ್ಯನ್​ಗೆ ಜಾಮೀನು: ಒಂದೇ ಮಾತಲ್ಲಿ ರಮ್ಯಾ ಪ್ರತಿಕ್ರಿಯೆ; ಖುಷಿಪಟ್ಟ ಸೆಲೆಬ್ರಿಟಿಗಳು ಯಾರೆಲ್ಲ?

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ