AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದ 7 ಆರೋಪಿಗಳಿಗೆ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡುವವರಿಗೆ ರಮ್ಯಾ ಅವರು ಕಾನೂನಿನ ಪಾಠ ಕಲಿಸಿದ್ದಾರೆ. ಅಶ್ಲೀಲ ಮೆಸೇಜ್ ಕಳಿಸಿದವರ ವಿರುದ್ಧ ರಮ್ಯಾ ದೂರು ನೀಡಿದ್ದರು. ಆ ಪೈಕಿ ಹಲವರನ್ನು ಬಂಧಿಸಲಾಗಿತ್ತು. ಈಗ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಪ್ರಕರಣದ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದ 7 ಆರೋಪಿಗಳಿಗೆ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು
Ramya Divya Spandana
ರಮೇಶ್​ ಎಮ್​.
| Edited By: |

Updated on: Oct 10, 2025 | 9:08 PM

Share

ಮಾಜಿ ಸಂಸದೆ, ಜನಪ್ರಿಯ ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಆರೋಪಿಗಳನ್ನು ಬಂಧಿಸಲಾಗಿತ್ತು. ಈಗ 7 ಆರೋಪಿಗಳಿಗೆ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಕೆ. ಪ್ರಮೋದ್, ಮಂಜುನಾಥ್, ರಾಜೇಶ್ ಸಿ.ವೈ, ಓಬಣ್ಣ ಟಿ, ಗಂಗಾಧರ್ ಕೆ.ಎಂ, ಚಿನ್ಮಯ್ ಶೆಟ್ಟಿಗೆ ಷರತ್ತುಬದ್ಧ ಜಾಮೀನು ಸಿಕ್ಕಿದೆ. ಮತ್ತೊಬ್ಬ ಆರೋಪಿ ವಿಕಾಸ್ ಬಿ.ಎ.ಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಈಗಾಗಲೇ ಆರೋಪಪಟ್ಟಿ ದಾಖಲಾಗಿರುವ ಹಿನ್ನೆಲೆಯಲ್ಲಿ ನ್ಯಾ. ಶಿವಶಂಕರ್ ಅಮರಣ್ಣವರ್ ಅವರಿದ್ದ ಪೀಠದಿಂದ ಜಾಮೀನು (Bail) ಮಂಜೂರಾಗಿದೆ. ಒಂದು ಲಕ್ಷ ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ಹಾಕಲಾಗಿದೆ.

ನಟಿ ರಮ್ಯಾ ಅವರು ನಟನೆಯಿಂದ ದೂರ ಇದ್ದಾರೆ. ಹಾಗಿದ್ದರೂ ಚಿತ್ರರಂಗದ ನಂಟು ಉಳಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಸಕ್ರಿಯರಾಗಿದ್ದಾರೆ. ಸಮಾಜದ ಅನೇಕ ಆಗು-ಹೋಗುಗಳ ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ನಟ ದರ್ಶನ್ ಪ್ರಕರಣದ ಬಗ್ಗೆಯೂ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದರು. ಆಗ ದರ್ಶನ್ ಅಭಿಮಾನಿಗಳು ರಮ್ಯಾಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ್ದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇತರರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದು ಸೂಕ್ತವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು. ಆಗ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡುತ್ತಿದೆ ಎಂದು ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದು ದರ್ಶನ್ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿತ್ತು.

ರಮ್ಯಾ ಅವರ ಪೋಸ್ಟ್ ನೋಡಿದ ದರ್ಶನ್ ಅಭಿಮಾನಿಗಳು ಇನ್​ಸ್ಟಾಗ್ರಾಮ್​​ನಲ್ಲಿ ಅಸಭ್ಯವಾಗಿ, ಅಶ್ಲೀಲವಾಗಿ ಮೆಸೇಜ್ ಮಾಡಲು ಆರಂಭಿಸಿದ್ದರು. ಅಂಥವರ ಮೆಸೇಜ್​​ಗಳ ಸ್ಕ್ರೀನ್ ಶಾಟ್​​ಗಳನ್ನು ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡರು. ಅಲ್ಲದೇ ತಮಗೆ ಅಸಭ್ಯ, ಅಶ್ಲೀಲ ಕಮೆಂಟ್ ಮಾಡಿದವರ ವಿರುದ್ಧ ದೂರು ನೀಡಿದರು.

ಇದನ್ನೂ ಓದಿ: ರಮ್ಯಾ ಬಗ್ಗೆ ಅವಹೇಳನಾಕಾರಿ ಪೋಸ್ಟ್: ಆರೋಪಿಗಳ ಮೊಬೈಲ್​ FSLಗೆ ರವಾನೆ

40ಕ್ಕೂ ಅಧಿಕ ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ರಮ್ಯಾ ಅವರು ದೂರು ಸಲ್ಲಿಸಿದ್ದರು. ಆ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದರು. ಆ ಪೈಕಿ ಕೆಲವರನ್ನು ಬಂಧಿಸಲಾಯಿತು. ಈಗ 7 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ರಮ್ಯಾ ದೂರು ನೀಡಿದ ಬಳಿಕ ಅವರ ಪೋಸ್ಟ್​​ಗಳಿಗೆ ಅಶ್ಲೀಲವಾಗಿ ಕಮೆಂಟ್ ಮಾಡುವವರ ಸಂಖ್ಯೆ ಕಡಿಮೆ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ