AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhajarangi 2 Teaser: ಶಿವಣ್ಣನ ಹುಟ್ಟುಹಬ್ಬದಂದೇ ಭಜರಂಗಿ-2 ಸಿನಿಮಾ ಟೀಸರ್ ಬಿಡುಗಡೆ​; ರಗಡ್​ ಲುಕ್​​ನಲ್ಲಿ ಮಿಂಚುತ್ತಿರುವ ಹ್ಯಾಟ್ರಿಕ್ ಹೀರೋ

ಭಜರಂಗಿ-2 ಟೀಸರ್​: ಸಿನಿಮಾದಲ್ಲಿ ಶಿವರಾಜ್​ಕುಮಾರ್ ಜತೆ ಭಾವನಾ ಮೆನನ್​ ಅಭಿನಯಿಸಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನಿರ್ದೇಶನವಿದೆ. ಇದೀಗ ಟೀಸರ್​​ನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್​ನಲ್ಲಿ ಬಿಡುಗಡೆ ಮಾಡಲಾಗಿದೆ.

Bhajarangi 2 Teaser: ಶಿವಣ್ಣನ ಹುಟ್ಟುಹಬ್ಬದಂದೇ ಭಜರಂಗಿ-2 ಸಿನಿಮಾ ಟೀಸರ್ ಬಿಡುಗಡೆ​; ರಗಡ್​ ಲುಕ್​​ನಲ್ಲಿ ಮಿಂಚುತ್ತಿರುವ ಹ್ಯಾಟ್ರಿಕ್ ಹೀರೋ
ಭಜರಂಗಿ-2 ಸಿನಿಮಾದಲ್ಲಿ ಶಿವರಾಜ್​ ಕುಮಾರ್​ ರಗಡ್​ ಲುಕ್​​
TV9 Web
| Edited By: |

Updated on:Jul 12, 2021 | 1:19 PM

Share

ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್ ಅವರಿಗೆ ಇಂದು 59ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಇದೇ ಹೊತ್ತಲ್ಲಿ ಅವರ ಭಜರಂಗಿ-2 (Bhajarangi 2) ಸಿನಿಮಾದ ಟೀಸರ್ (Teaser) ಬಿಡುಗಡೆ ಮಾಡಲಾಗಿದೆ. ಒಂದು ನಿಮಿಷ 23 ಸೆಕೆಂಡ್​ಗಳ 4k ಟೀಸರ್​​ನಲ್ಲಿ ಶಿವಣ್ಣನ ಖಡಕ್​ ಲುಕ್​ ಗಮನಸೆಳೆಯುತ್ತದೆ. ಶಿವಣ್ಣನ ಹುಟ್ಟುಹಬ್ಬಕ್ಕೆ ಭಜರಂಗಿ-2 ಸಿನಿಮಾ ತಂಡ ನೀಡಿರುವ ವಿಶೇಷ ಉಡುಗೊರೆ ಇದಾಗಿದ್ದು, ಫ್ಯಾನ್ಸ್​ ಫುಲ್​ ಖುಷಿಯಾಗಿದ್ದಾರೆ.

ಭಜರಂಗಿ-2 ಸಿನಿಮಾ ಜಯಣ್ಣ ಫಿಲ್ಮ್ಸ್​ ನಿರ್ಮಾಣದಲ್ಲಿ ಮೂಡಿಬಂದಿದ್ದು, ಎ.ಹರ್ಷ ನಿರ್ದೇಶನ ಮಾಡಿದ್ದಾರೆ. ಶಿವಣ್ಣನ ಬರ್ತ್​ ಡೇ ದಿನ ಭಜರಂಗಿ-2 ಸಿನಿಮಾದ ಟೀಸರ್​ ಬಿಡುಗಡೆ ಮಾಡುವುದಾಗಿ ಹರ್ಷಾ ಅವರು ಜು.8ರಂದು ಟ್ವೀಟ್​ ಮಾಡಿದ್ದರು. ಶಿವಣ್ಣ ರಗಡ್ ಲುಕ್​​ನಲ್ಲಿ ಕಾಣಿಸಿಕೊಂಡಿದ್ದು, ಒರಟಾದ ನೋಟ ಬೀರುತ್ತ ಹೆಜ್ಜೆ ಹಾಕುತ್ತಿರುವ ದೃಶ್ಯದ ಟೀಸರ್ ಇದಾಗಿದೆ. ಶಿವಣ್ಣ ಮತ್ತು ಐಂದ್ರಿತಾ ರೈ ಅಭಿನಯದ ಭಜರಂಗಿ ಸಿನಿಮಾ 2013ರಲ್ಲಿ ಬಿಡುಗಡೆಯಾಗಿ ಯಶಸ್ಸು ಕಂಡಿತ್ತು. ಅದೊಂದು ಆ್ಯಕ್ಷನ್​ ಸಿನಿಮಾ ಆಗಿತ್ತು. ಇದೀಗ ಭಜರಂಗಿ-2 ಬಗ್ಗೆಯೂ ಬಹು ನಿರೀಕ್ಷೆ ಇದೆ.

ಸಿನಿಮಾದಲ್ಲಿ ಶಿವರಾಜ್​ಕುಮಾರ್ ಜತೆ ಭಾವನಾ ಮೆನನ್​ ಅಭಿನಯಿಸಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನಿರ್ದೇಶನವಿದೆ. ಇದೀಗ ಟೀಸರ್​​ನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಟೀಸರ್ ರಿಲೀಸ್​ ಆದ 2 ತಾಸಿನಲ್ಲಿ ಲಕ್ಷಕ್ಕೂ ಅಧಿಕ ವೀವ್ಸ್​ ಪಡೆದುಕೊಂಡಿದೆ. ಸದ್ಯ ಟ್ರೆಂಡ್ ಆಗುತ್ತಿದೆ. ಈ ಬಾರಿ ಶಿವರಾಜ್​ ಕುಮಾರ್​ ಕೊವಿಡ್ 19 ಕಾರಣದಿಂದ ಅಭಿಮಾನಿಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಕುಟುಂಬದವರೊಂದಿಗೆ ಕೇಕ್​ ಕತ್ತರಿಸಿದ್ದಾರೆ.

ಇದನ್ನೂ ಓದಿ: ಯಾವುದೇ ಕಪ್ಪು ಚುಕ್ಕೆ ಇಲ್ಲ, ನನಗೆ ಅನುಭವ ಚೆನ್ನಾಗಿದೆ, ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗಿದೆ: ಸಚಿವ ಉಮೇಶ ಕತ್ತಿ

Bajrangi 2 Film Teaser released on shivrajkumar birthday as Special Gift

Published On - 1:17 pm, Mon, 12 July 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!