AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhajarangi 2 Teaser: ಶಿವಣ್ಣನ ಹುಟ್ಟುಹಬ್ಬದಂದೇ ಭಜರಂಗಿ-2 ಸಿನಿಮಾ ಟೀಸರ್ ಬಿಡುಗಡೆ​; ರಗಡ್​ ಲುಕ್​​ನಲ್ಲಿ ಮಿಂಚುತ್ತಿರುವ ಹ್ಯಾಟ್ರಿಕ್ ಹೀರೋ

ಭಜರಂಗಿ-2 ಟೀಸರ್​: ಸಿನಿಮಾದಲ್ಲಿ ಶಿವರಾಜ್​ಕುಮಾರ್ ಜತೆ ಭಾವನಾ ಮೆನನ್​ ಅಭಿನಯಿಸಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನಿರ್ದೇಶನವಿದೆ. ಇದೀಗ ಟೀಸರ್​​ನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್​ನಲ್ಲಿ ಬಿಡುಗಡೆ ಮಾಡಲಾಗಿದೆ.

Bhajarangi 2 Teaser: ಶಿವಣ್ಣನ ಹುಟ್ಟುಹಬ್ಬದಂದೇ ಭಜರಂಗಿ-2 ಸಿನಿಮಾ ಟೀಸರ್ ಬಿಡುಗಡೆ​; ರಗಡ್​ ಲುಕ್​​ನಲ್ಲಿ ಮಿಂಚುತ್ತಿರುವ ಹ್ಯಾಟ್ರಿಕ್ ಹೀರೋ
ಭಜರಂಗಿ-2 ಸಿನಿಮಾದಲ್ಲಿ ಶಿವರಾಜ್​ ಕುಮಾರ್​ ರಗಡ್​ ಲುಕ್​​
TV9 Web
| Edited By: |

Updated on:Jul 12, 2021 | 1:19 PM

Share

ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್ ಅವರಿಗೆ ಇಂದು 59ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಇದೇ ಹೊತ್ತಲ್ಲಿ ಅವರ ಭಜರಂಗಿ-2 (Bhajarangi 2) ಸಿನಿಮಾದ ಟೀಸರ್ (Teaser) ಬಿಡುಗಡೆ ಮಾಡಲಾಗಿದೆ. ಒಂದು ನಿಮಿಷ 23 ಸೆಕೆಂಡ್​ಗಳ 4k ಟೀಸರ್​​ನಲ್ಲಿ ಶಿವಣ್ಣನ ಖಡಕ್​ ಲುಕ್​ ಗಮನಸೆಳೆಯುತ್ತದೆ. ಶಿವಣ್ಣನ ಹುಟ್ಟುಹಬ್ಬಕ್ಕೆ ಭಜರಂಗಿ-2 ಸಿನಿಮಾ ತಂಡ ನೀಡಿರುವ ವಿಶೇಷ ಉಡುಗೊರೆ ಇದಾಗಿದ್ದು, ಫ್ಯಾನ್ಸ್​ ಫುಲ್​ ಖುಷಿಯಾಗಿದ್ದಾರೆ.

ಭಜರಂಗಿ-2 ಸಿನಿಮಾ ಜಯಣ್ಣ ಫಿಲ್ಮ್ಸ್​ ನಿರ್ಮಾಣದಲ್ಲಿ ಮೂಡಿಬಂದಿದ್ದು, ಎ.ಹರ್ಷ ನಿರ್ದೇಶನ ಮಾಡಿದ್ದಾರೆ. ಶಿವಣ್ಣನ ಬರ್ತ್​ ಡೇ ದಿನ ಭಜರಂಗಿ-2 ಸಿನಿಮಾದ ಟೀಸರ್​ ಬಿಡುಗಡೆ ಮಾಡುವುದಾಗಿ ಹರ್ಷಾ ಅವರು ಜು.8ರಂದು ಟ್ವೀಟ್​ ಮಾಡಿದ್ದರು. ಶಿವಣ್ಣ ರಗಡ್ ಲುಕ್​​ನಲ್ಲಿ ಕಾಣಿಸಿಕೊಂಡಿದ್ದು, ಒರಟಾದ ನೋಟ ಬೀರುತ್ತ ಹೆಜ್ಜೆ ಹಾಕುತ್ತಿರುವ ದೃಶ್ಯದ ಟೀಸರ್ ಇದಾಗಿದೆ. ಶಿವಣ್ಣ ಮತ್ತು ಐಂದ್ರಿತಾ ರೈ ಅಭಿನಯದ ಭಜರಂಗಿ ಸಿನಿಮಾ 2013ರಲ್ಲಿ ಬಿಡುಗಡೆಯಾಗಿ ಯಶಸ್ಸು ಕಂಡಿತ್ತು. ಅದೊಂದು ಆ್ಯಕ್ಷನ್​ ಸಿನಿಮಾ ಆಗಿತ್ತು. ಇದೀಗ ಭಜರಂಗಿ-2 ಬಗ್ಗೆಯೂ ಬಹು ನಿರೀಕ್ಷೆ ಇದೆ.

ಸಿನಿಮಾದಲ್ಲಿ ಶಿವರಾಜ್​ಕುಮಾರ್ ಜತೆ ಭಾವನಾ ಮೆನನ್​ ಅಭಿನಯಿಸಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನಿರ್ದೇಶನವಿದೆ. ಇದೀಗ ಟೀಸರ್​​ನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಟೀಸರ್ ರಿಲೀಸ್​ ಆದ 2 ತಾಸಿನಲ್ಲಿ ಲಕ್ಷಕ್ಕೂ ಅಧಿಕ ವೀವ್ಸ್​ ಪಡೆದುಕೊಂಡಿದೆ. ಸದ್ಯ ಟ್ರೆಂಡ್ ಆಗುತ್ತಿದೆ. ಈ ಬಾರಿ ಶಿವರಾಜ್​ ಕುಮಾರ್​ ಕೊವಿಡ್ 19 ಕಾರಣದಿಂದ ಅಭಿಮಾನಿಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಕುಟುಂಬದವರೊಂದಿಗೆ ಕೇಕ್​ ಕತ್ತರಿಸಿದ್ದಾರೆ.

ಇದನ್ನೂ ಓದಿ: ಯಾವುದೇ ಕಪ್ಪು ಚುಕ್ಕೆ ಇಲ್ಲ, ನನಗೆ ಅನುಭವ ಚೆನ್ನಾಗಿದೆ, ಮುಖ್ಯಮಂತ್ರಿ ಆಗುವ ಯೋಗ್ಯತೆ ನನಗಿದೆ: ಸಚಿವ ಉಮೇಶ ಕತ್ತಿ

Bajrangi 2 Film Teaser released on shivrajkumar birthday as Special Gift

Published On - 1:17 pm, Mon, 12 July 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ