AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಪ್ರತಿಷ್ಠಿತ ಸಂಸ್ಥೆಗೆ ಒಲಿದ ‘ಬನಾರಸ್’ ಸಿನಿಮಾ ವಿತರಣಾ ಹಕ್ಕು

ಝೈದ್ ಖಾನ್ ನಾಯಕನಾಗಿ ನಟಿಸಿರುವ ‘ಬನಾರಸ್’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈಗ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವಾಗಲೇ ಮುಳಕುಪಾಡಂ ಸಂಸ್ಥೆ  ಖುದ್ದು ತಾನೇ ಅಧಿಕೃತವಾಗಿ ಈ ವಿಚಾರವನ್ನ ಘೋಷಿಸಿದೆ.

ಕೇರಳದ ಪ್ರತಿಷ್ಠಿತ ಸಂಸ್ಥೆಗೆ ಒಲಿದ ‘ಬನಾರಸ್’ ಸಿನಿಮಾ ವಿತರಣಾ ಹಕ್ಕು
TV9 Web
| Edited By: |

Updated on:Oct 06, 2022 | 5:09 PM

Share

ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ರಿಲೀಸ್​​ಗೆ ರೆಡಿ ಆಗಿರುವ ‘ಬನಾರಸ್’ ಸಿನಿಮಾ (Banaras Movie) ಬಗ್ಗೆ ಚರ್ಚೆ ಜೋರಾಗಿದೆ. ಒಂದೊಂದೇ ಝಲಕ್ ಮೂಲಕ ಕ್ರೇಜ್ ಹುಟ್ಟಿಸಿರುವ ಜಯತೀರ್ಥ ನಿರ್ದೇಶನದ ಈ ಚಿತ್ರದ ರಿಲೀಸ್​ಗೆ ದಿನಗಣನೆ ಶುರುವಾಗಿದೆ. ಇಂಥ ಸಮಯದಲ್ಲಿ ಚಿತ್ರತಂಡದಿಂದ ಸರ್​ಪ್ರೈಸಿಂಗ್ ವಿಚಾರಗಳು, ಸುದ್ದಿಗಳು ಹೊರ ಬರುತ್ತಿದೆ. ‘ಬನಾರಸ್​’ ತಂಡದಿಂದ ಈಗ ಹೊರಬಂದ ಹೊಸಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಕೇರಳದ ಪ್ರತಿಷ್ಠಿತ ವಿತರಣಾ ಸಂಸ್ಥೆಯಾಗಿರುವ ‘ಮುಳಕುಪಾಡಂ’ ‘ಬನಾರಸ್​​’ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಹಲವಾರು ಹಿಟ್ ಚಿತ್ರಗಳನ್ನು ವಿತರಿಸಿರುವ ಈ ಖ್ಯಾತ ಸಂಸ್ಥೆಯ ತೆಕ್ಕೆಗೆ ‘ಬನಾರಸ್​’ ವಿತರಣೆಯ ಹಕ್ಕು ಒಲಿದಿರುವುದು ಚಿತ್ರತಂಡದ ಖುಷಿ ಹೆಚ್ಚಿಸಿದೆ.

ಝೈದ್ ಖಾನ್ ನಾಯಕನಾಗಿ ನಟಿಸಿರುವ ‘ಬನಾರಸ್’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಈಗ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವಾಗಲೇ ಮುಳಕುಪಾಡಂ ಸಂಸ್ಥೆ  ಖುದ್ದು ತಾನೇ ಅಧಿಕೃತವಾಗಿ ಈ ವಿಚಾರವನ್ನ ಘೋಷಿಸಿದೆ. ಉದ್ಯಮಿಯಾಗಿ ಥಾಮಸ್ ಆಂಟೋನಿ ಹೆಸರು ಮಾಡಿದ್ದಾರೆ. ಅವರು ಮಲಕುಪ್ಪಡಮ್ ಫಿಲ್ಮ್ಸ್​ ಮೂಲಕ ಹಲವಾರು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಈ ಸಂಸ್ಥೆ ಹಂಚಿಕೆ ಮಾಡಿದ ಚಿತ್ರಗಳೆಲ್ಲವೂ ಉತ್ತಮ ಗುಣಮಟ್ಟದ ಹಾಗೂ ನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲೇ ಇದ್ದವು. ‘ಬನಾರಸ್’ ಚಿತ್ರವನ್ನು ಈ ಸಂಸ್ಥೆ ಖರೀದಿಸಿರುವುದರಿಂದ ಕುತೂಹಲ ಹೆಚ್ಚಿದೆ.

ಮೊದಲ ಬಾರಿಗೆ ಸಿನಿಪಯಣ ಆರಂಭಿಸಿ ತಮ್ಮ ಅದೃಷ್ಟ ಪರೀಕ್ಷೆಗೆ ನಿಂತಿದ್ದಾರೆ ನಟ ಝೈದ್ ಖಾನ್​. ಅವರ ಮೊದಲ ಚಿತ್ರವೇ ಇಷ್ಟೊಂದು ದಾಖಲೆಯನ್ನು ನಿರ್ಮಿಸುತ್ತಿರುವುದು ಹೆಮ್ಮೆಯ ಸಂಗತಿ. ಮೊದಲಿನಿಂದಲೂ ಸಿನಿಮಾ ಆಯ್ಕೆಯಲ್ಲಿ ರಾಜಿಯಾಗದೇ ಉತ್ತಮ ಗುಣಮಟ್ಟ ಕಾದುಕೊಳ್ಳಲು ಮುಳಕುಪಾಡಂ ಸಂಸ್ಥೆ ಹೆಸರುವಾಸಿಯಾಗಿದೆ. ಈಗ ‘ಬನಾರಸ್’ ಚಿತ್ರವನ್ನು ಈ ಸಂಸ್ಥೆ ದೊಡ್ಡ ಮೊತ್ತಕ್ಕೆ ಖರೀದಿಸಿದೆ ಎಂದರೆ ಅದಕ್ಕಿಂತ ಬೇರೆ ಖುಷಿ ಚಿತ್ರತಂಡಕ್ಕೆ ಬೇಕಿಲ್ಲ. ಚಿತ್ರ ರಿಲೀಸ್​ಗೂ ಮೊದಲೇ ಇಡೀ ತಂಡ ಗೆದ್ದ ಖುಷಿಯಲ್ಲಿದೆ. ಈ ಸಂಸ್ಥೆಯ ಮುಖ್ಯಸ್ಥರು ‘ಬನಾರಸ್’ ಮೂಡಿ ಬಂದಿರುವ ರೀತಿಯನ್ನು ಕಂಡು ಥ್ರಿಲ್ ಆಗಿದ್ದಾರೆ. ಆ ಮೆಚ್ಚುಗೆಯಿಂದಲೇ ಇದೇ ನವೆಂಬರ್4ರಂದು ಕೇರಳಾದ್ಯಂತ ಸಿನಿಮಾ ರಿಲೀಸ್ ಆಗಲಿದೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದನ್ನೂ ಓದಿ: ಪಂಚಭಾಷೆಗಳಲ್ಲೂ ‘ಬನಾರಸ್’ ಟ್ರೇಲರ್ ಅಬ್ಬರ; ಮಿಲಿಯನ್ ಗಟ್ಟಲೆ ವೀಕ್ಷಣೆ  

ತಿಲಕ್ ರಾಜ್ ಬಲ್ಲಾಳ್ ಬಂಡವಾಳ ಹೂಡಿ ಅದ್ದೂರಿಯಾಗಿ ನಿರ್ಮಾಣ ಮಾಡಿರುವ ಬನಾರಸ್​ ಚಿತ್ರಕ್ಕೆ ಸೋನಲ್ ಮೊಂಥೆರೋ  ನಾಯಕಿ. ಝೈದ್ ಖಾನ್ ಹೀರೋ. ಈ ಚಿತ್ರಕ್ಕೆ ಅಜನೀಶ್ ಬಿ. ಲೋಕನಾಥ್ ಅವರ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ ಸೇರಿದಂತೆ ಪ್ರತಿಭಾನ್ವಿತ ತಾಂತ್ರಿಕ ವರ್ಗ ಬನಾರಸ್ ಚಿತ್ರಕ್ಕಾಗಿ ಕೆಲಸ ಮಾಡಿದೆ.

Published On - 4:58 pm, Thu, 6 October 22

Follow Us
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?