AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಂಧನ’ ಸಿನಿಮಾ ತಡೆಯಲು ಥಿಯೇಟರ್​ನಲ್ಲಿ ಬ್ಲೇಡ್ ಹೊಡೆದು, ಖಾರದ ಪುಡಿ ಎರಚಿದ್ದರು

1984ರಲ್ಲಿ ಬಿಡುಗಡೆಯಾದ ವಿಷ್ಣುವರ್ಧನ್ ಅವರ ‘ಬಂಧನ’ ಚಿತ್ರವು ಅಪಾರ ಜನಪ್ರಿಯತೆಯನ್ನು ಗಳಿಸಿತ್ತು. ಆದರೆ ಈ ಚಿತ್ರದ ಯಶಸ್ಸಿನ ಹಿಂದೆ ಅನೇಕ ಅಡೆತಡೆಗಳು ಇದ್ದವು. ಚಿತ್ರದ ಪ್ರದರ್ಶನವನ್ನು ತಡೆಯಲು ಕುತಂತ್ರಗಳು ನಡೆದಿದ್ದವು. ಥಿಯೇಟರ್‌ಗಳಲ್ಲಿ ಅಡಚಣೆಗಳು ಉಂಟಾಗಿದ್ದವು. ಆದರೆ ಈ ಎಲ್ಲಾ ಅಡೆತಡೆಗಳನ್ನು ದಾಟಿ "ಬಂಧನ" ಚಿತ್ರವು ದೊಡ್ಡ ಯಶಸ್ಸನ್ನು ಕಂಡಿತು.

‘ಬಂಧನ’ ಸಿನಿಮಾ ತಡೆಯಲು ಥಿಯೇಟರ್​ನಲ್ಲಿ ಬ್ಲೇಡ್ ಹೊಡೆದು, ಖಾರದ ಪುಡಿ ಎರಚಿದ್ದರು
ಬಂಧನ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Jul 07, 2025 | 7:54 AM

Share

ವಿಷ್ಣುವರ್ಧನ್ ನಟನೆಯ ‘ಬಂಧನ’ ಸಿನಿಮಾ (Bandhana Movie) 1984ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಗಿದ್ದು ಗೊತ್ತೇ ಇದೆ. ಇದು ಇತಿಹಾಸ ಪುಟಗಳಲ್ಲಿ ಸೇರಿಕೊಂಡಿದೆ. ಈ ಚಿತ್ರ ತೆರೆಗೆ ಬಂದು 31 ವರ್ಷಗಳು ಕಳೆದಿವೆ. ಈ ಸಿನಿಮಾ ಹಿಟ್ ಆಗಿದ್ದರ ಹಿಂದೆ ಒಂದು ದೊಡ್ಡ ಕಥೆಯೇ ಇದೆ. ವಿಷ್ಣು ಚಿತ್ರಕ್ಕೆ ಅಡ್ಡಿ ಮಾಡಬೇಕು ಎಂದು ಸಾಕಷ್ಟು ಕುತಂತ್ರಗಳು ನಡೆದಿದ್ದವು. ಹಾಗಂತ ಇದ್ಯಾವುದೂ ಅಚಾನಕ್ಕಾಗಿ ಆಗಿದ್ದಲ್ಲ. ಅವೆಲ್ಲವೂ ಉದ್ದೇಶ ಪೂರ್ವಕವಾಗಿಯೇ ಮಾಡಿದ್ದಾಗಿತ್ತು ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ. ಈ ಬಗ್ಗೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಹೇಳಿದ್ದರು.

‘ಬಂಧನ ಸಿನಿಮಾ ರಿಲೀಸ್ ಆಯಿತು. ಥಿಯೇಟರ್​ ಒಳಗೆ ಖಾರದ ಪುಡಿ ಎರಚುತ್ತಿದ್ದರು. ಹೆಂಗಸರು ಬರಬಾರದು ಎನ್ನುವ ಕಾರಣಕ್ಕೆ ಈ ರೀತಿ ಮಾಡುತ್ತಿದ್ದರು. ಅಲ್ಲದೆ, ಟಿಕೆಟ್ ಕೌಂಟರ್​ನಲ್ಲಿ ಬ್ಲೇಡ್ ಹೊಡೆಯುತ್ತಿದ್ದರು ಎಂದು ಥಿಯೇಟರ್​ನವರು ಹೇಳಿದರು. ಆ ಸಂದರ್ಭದಲ್ಲಿ ಹೆಗಡೆ (ರಾಮಕೃಷ್ಣ ಹೆಗಡೆ) ಅವರು ಸಿಎಂ ಆಗಿದ್ದರು. ಅವರ ಬಳಿ ನಾವು ಮಾತನಾಡಿದೆವು. ಜೀವ್​ರಾಜ್ ಆಳ್ವಾ ಆಪ್ತರು. ಸಿನಿಮಾ ನೋಡೋಕೆ ಬಿಡ್ತಿಲ್ಲ ಎಂದು ಅವರ ಬಳಿ ಹೇಳಿದ್ವಿ. ಅವರು ಪೊಲೀಸರಿಗೆ ರಕ್ಷಣೆ ಕೊಡುವಂತೆ  ಸೂಚಿಸಿದರು. ಆ ಬಳಿಕ 25 ಜನರ ಬಂಧನ ಆಯಿತು’ ಎಂದಿದ್ದರು ರಾಜೇಂದ್ರ ಸಿಂಗ್ ಬಾಬು.

ಇದನ್ನೂ ಓದಿ
Image
‘ಟಾಕ್ಸಿಕ್’ ಚಿತ್ರದಿಂದ ರವಿ ಬಸ್ರೂರು ಔಟ್? ರಾಕ್​ಸ್ಟಾರ್​ಗೆ ಮಣೆ?  
Image
ಮತ್ತೊಂದು ‘ಅನಿಮಲ್’; ‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ರಕ್ಕಸ ಅವತಾರ
Image
ನಂಬಲೇ ಬೇಕು.. ಸ್ಕ್ವಿಡ್ ಗೇಮ್ ನಟನಿಗೆ ಕನ್ನಡದ ಈ ಚಿತ್ರ ಎಂದರೆ ಸಖತ್ ಇಷ್ಟ
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

‘ಮೈಸೂರಿನಲ್ಲಿ ವಿಷ್ಣುವರ್ಧನ್ ಅವರ ದೊಡ್ಡ ಕಟೌಟ್ ಹಾಕಿದೆವು. ಆದರೆ, ಅದಕ್ಕೆ ಸೀಮೆ ಎಣ್ಣೆ ಹಾಕಿ ಸುಡಲಾಯಿತು. ಅಭಿಮಾನಿಗಳು ಬಂದು ಬೇರೆ ಕಟೌಟ್ ಹಾಕೋಣ ಎಂದರು. ಬೇಡ, ದೃಷ್ಟಿ ಪರಿಹಾರ ಎಂದು ನಾನು ಹೇಳಿದೆ. ಅದನ್ನು ಹಾಗೆಯೇ ಬಿಟ್ಟಿದ್ದೆ. ಸಿನಿಮಾನ ಯಾರೂ ನಿಲ್ಲಿಸೋಕೆ ಆಗಲಿಲ್ಲ. 25 ಸೆಂಟರ್​ಗಳಲ್ಲಿ 25 ವಾರ ಸಿನಿಮಾ ಪ್ರದರ್ಶನ ಕಂಡಿತು. ಇದು ಸಿನಿಮಾ ಮಾಡಿದ ಸಾಧನೆ. 25 ವಾರ ಆ ಕಟೌಟ್ ಹಾಗೆಯೇ ಇತ್ತು’ ಎಂದರು ಅವರು.

View this post on Instagram

A post shared by MAHANUBHAVA (@mahanubhava_)

View this post on Instagram

A post shared by MAHANUBHAVA (@mahanubhava_)

‘ಕನ್ನಡ ಗೊತ್ತಿಲ್ಲದೆ ಇರುವವರು ಈ ಸಿನಿಮಾ ನೋಡಲು ಆರಂಭಿಸಿದರು. ಈ ಸಿನಿಮಾದ ಹಾಡನ್ನು ಇಷ್ಟಪಟ್ಟು ಹಾಡೋಕೆ ಆರಂಭಿಸಿದರು. ಇದು ಆ ಸಿನಿಮಾ ಮಾಡಿದ ದೊಡ್ಡ ಸಾಧನೆಗಳಲ್ಲಿ ಒಂದಾಗಿತ್ತು. ಈ ಚಿತ್ರವನ್ನು ಆಗಿನ ಕಾಲದಲ್ಲಿ ಯಾರೂ ತಡೆಯಲು ಸಾಧ್ಯವೇ ಆಗಿರಲಿಲ್ಲ’ ಎಂದು ಅವರು ವಿವರಿಸಿದರು.

ಇದನ್ನೂ ಓದಿ: ವಿಷ್ಣುವರ್ಧನ್ ಜನ್ಮದಿನವನ್ನು ‘ಯಜಮಾನರ ಅಮೃತ ಮಹೋತ್ಸವ’ ಆಗಿ ಆಚರಣೆ; ಹೀಗಿದೆ ಕಾರ್ಯಕ್ರಮದ ರೂಪುರೇಷೆ

ಶೀಘ್ರವೇ ವಿಷ್ಣುವರ್ಧನ್ ಬರ್ತ್​ಡೇ ಬರುತ್ತಿದೆ. ಈ ವರ್ಷ ವಿಷ್ಣುವರ್ಧನ್ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಏರೋಸ್ಪೇಸ್ ಯೋಜನೆ ಬಗ್ಗೆ ಸಿಎಂ ಹೇಳಿಕೆ ಗೊಂದಲಮಯ: ವಿಜಯೇಂದ್ರ
ಏರೋಸ್ಪೇಸ್ ಯೋಜನೆ ಬಗ್ಗೆ ಸಿಎಂ ಹೇಳಿಕೆ ಗೊಂದಲಮಯ: ವಿಜಯೇಂದ್ರ
ಮನೆ ಕಟ್ಟಿಸಿಕೊಟ್ಟಿಲ್ಲ: KGF​ ಬಾಬು ಮನೆ ಮುಂದೆ ಜನರ ಪ್ರತಿಭಟನೆ
ಮನೆ ಕಟ್ಟಿಸಿಕೊಟ್ಟಿಲ್ಲ: KGF​ ಬಾಬು ಮನೆ ಮುಂದೆ ಜನರ ಪ್ರತಿಭಟನೆ
ಬೀಗರನ್ನು ಒಮ್ಮೆ ನಂಬಿ ಮೋಸ ಹೋಗಿದ್ದೇನೆ, ಪುನಃ ನಂಬಲಾರೆ: ಕೆಜಿಎಫ್ ಬಾಬು
ಬೀಗರನ್ನು ಒಮ್ಮೆ ನಂಬಿ ಮೋಸ ಹೋಗಿದ್ದೇನೆ, ಪುನಃ ನಂಬಲಾರೆ: ಕೆಜಿಎಫ್ ಬಾಬು
ಯುವಕನಿಗೆ ಮಹಿಳೆಯ ವಯಸ್ಸು ಗೊತ್ತಾಗದಿರೋದು ಅಚ್ಚರಿಯ ಸಂಗತಿ
ಯುವಕನಿಗೆ ಮಹಿಳೆಯ ವಯಸ್ಸು ಗೊತ್ತಾಗದಿರೋದು ಅಚ್ಚರಿಯ ಸಂಗತಿ
ಕೇಸ್ ದಾಖಲಾಗಿರುವುದು ರಾಜಕೀಯ ಪಿತೂರಿಯ ಭಾಗ: ಭೈರತಿ ಬಸವರಾಜ
ಕೇಸ್ ದಾಖಲಾಗಿರುವುದು ರಾಜಕೀಯ ಪಿತೂರಿಯ ಭಾಗ: ಭೈರತಿ ಬಸವರಾಜ
ಕುತ್ತಿಗೆಗೆ ನಾಗರಹಾವು ಸುತ್ತಿಕೊಂಡು ಬೈಕ್ ಓಡಿಸುತ್ತಿದ್ದ ವ್ಯಕ್ತಿ ಸಾವು
ಕುತ್ತಿಗೆಗೆ ನಾಗರಹಾವು ಸುತ್ತಿಕೊಂಡು ಬೈಕ್ ಓಡಿಸುತ್ತಿದ್ದ ವ್ಯಕ್ತಿ ಸಾವು