AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿನ್ನ ಕಥೆ ಹೇಳೋಕೆ ಬಂದ ‘ಬೆಂಗಳೂರು ಬಾಯ್ಸ್​’; ಸಿನಿಪ್ರಿಯರಿಗೆ ನೆನಪಾಯ್ತು ‘ಓಂ’ ಸಿನಿಮಾ

. ಒಂದು ನಿಮಿಷದ ಹದಿಮೂರು ಸೆಕೆಂಡ್ ಇರುವ ಈ ಟೀಸರ್ 90ರ ದಶಕದ ಸೂಪರ್ ಹಿಟ್ ಸಿನಿಮಾಗಳಾದ ‘ಅಂತ‘, ‘ರಣಧೀರ’, ‘ಓಂ’ ಹಾಗೂ ‘ಎ’ ಸಿನಿಮಾಗಳನ್ನು ನೆನಪಿಸಿದೆ.

ಭಿನ್ನ ಕಥೆ ಹೇಳೋಕೆ ಬಂದ ‘ಬೆಂಗಳೂರು ಬಾಯ್ಸ್​’; ಸಿನಿಪ್ರಿಯರಿಗೆ ನೆನಪಾಯ್ತು ‘ಓಂ’ ಸಿನಿಮಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Apr 11, 2022 | 8:08 PM

Share

ಚಿತ್ರರಂಗದಲ್ಲಿ (Cinema Industry) ನಿತ್ಯ ಹೊಸಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಭಿನ್ನ ಚಿತ್ರಗಳನ್ನು ಪ್ರೇಕ್ಷಕರ ಎದುರು ಇಡಲು ಚಿತ್ರ ನಿರ್ಮಾತೃರು ಪ್ರಯತ್ನಿಸುತ್ತಿರುತ್ತಾರೆ. ಈಗಾಗಲೇ ಈ ರೀತಿಯ ಹಲವು ಪ್ರಯತ್ನಗಳು ನಡೆದಿವೆ. ಈಗ ‘ಬೆಂಗಳೂರು ಬಾಯ್ಸ್’ ಸಿನಿಮಾ (Bangalore Boys Movie) ತಂಡ ಕೂಡ ಇದೇ ಮಾದರಿಯ ಪ್ರಯತ್ನಕ್ಕೆ ಮುಂದಾಗಿದೆ. ಈ ಸಿನಿಮಾದ ಟೀಸರ್ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಅಷ್ಟೇ ಅಲ್ಲ, ಸ್ಯಾಂಡಲ್​ವುಡ್​ನಲ್ಲಿ(Sandalwood)  ಸಾಕಷ್ಟು ಹವಾ ಸೃಷ್ಟಿಸಿದ ಸಿನಿಮಾಗಳ ಪಾತ್ರಗಳನ್ನು ಈ ಚಿತ್ರದ ಟೀಸರ್ ನೆನಪಿಸಿದೆ. ಹಾಗಾದರೆ, ‘ಬೆಂಗಳೂರ ಬಾಯ್ಸ್​’ನಲ್ಲಿ ಅಂತಹ ವಿಶೇಷತೆ ಏನಿದೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ವಿ ಮೇಕರ್ಸ್ ‘ಬೆಂಗಳೂರು ಬಾಯ್ಸ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಒಂದು ನಿಮಿಷದ ಹದಿಮೂರು ಸೆಕೆಂಡ್ ಇರುವ ಈ ಟೀಸರ್ 90ರ ದಶಕದ ಸೂಪರ್ ಹಿಟ್ ಸಿನಿಮಾಗಳಾದ ‘ಅಂತ‘, ‘ರಣಧೀರ’, ‘ಓಂ’ ಹಾಗೂ ‘ಎ’ ಸಿನಿಮಾಗಳನ್ನು ನೆನಪಿಸಿದೆ. ಚಿತ್ರದ ಸೂಪರ್ ಹಿಟ್ ಸಿನಿಮಾ ಪಾತ್ರಗಳಲ್ಲಿ ನಾಯಕರಾದ ಸಚಿನ್ ಚೆಲುವರಾಯ ಸ್ವಾಮಿ, ಅಭಿಷೇಕ್ ದಾಸ್, ರೋಹಿತ್ ಕಾಣಿಸಿಕೊಂಡಿದ್ದಾರೆ. ಇವರ ಜತೆ ವೈನಿಧಿ ಜಗದೀಶ್, ಸೋನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಹಾಗಾದರೆ, ಈ ಚಿತ್ರದಲ್ಲಿ ರೌಡಿಸಂ ಬಗ್ಗೆ ಹೇಳಲಾಗುತ್ತಿದೆಯೇ? ಖಂಡಿತವಾಗಿಯೂ ಇಲ್ಲ. ‘ಬೆಂಗಳೂರು ಬಾಯ್ಸ್’ ರೋಮ್ಯಾಂಟಿಕ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದ ಸಿನಿಮಾ. ಕಾಲೇಜು ಕಥೆ, ಲವ್ ಸ್ಟೋರಿ, ಎಮೋಷನ್-ಸೆಂಟಿಮೆಂಟ್ ಚಿತ್ರದ ಪ್ರಮುಖ ಅಂಶಗಳು. ಟೀಸರ್​ನಲ್ಲಿ ಬರುವ ‘ಎ’ ಚಿತ್ರದ ಡೈಲಾಗ್ ಸಖತ್ ಹೈಲೈಟ್ ಆಗಿದೆ.

ರ‍್ಯಾಪ್ ಸಾಂಗ್ ಮೂಲಕ ಸಾಕಷ್ಟು ಖ್ಯಾತಿ ಗಳಿಸಿದ್ದಾರೆ ಅಲೋಕ್. ಅವರು ಈ ಚಿತ್ರಕ್ಕೆ  ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಧರ್ಮ ವಿಷ್ ಸಂಗೀತ ಸಂಯೋಜನೆ ಸಿನಿಮಾಗಿದೆ. ವಿಕ್ರಮ್ ಕೆ.ವೈ. ಚಿತ್ರಕ್ಕೆ ಬಂಡವಾಳ ಹೂಡಿದ್ದು, ಪ್ರಶಾಂತ್ ರಾವ್ ಪುರಂ ನಿರ್ಮಾಣದಲ್ಲಿ ವಿಕ್ರಮ್​ಗೆ ಸಾಥ್ ನೀಡಿದ್ದಾರೆ. ‘ಅಂಬಿ ನಿಂಗ್​ ವಯಸ್ಸಾಯ್ತೋ’ ಖ್ಯಾತಿಯ ಗುರುದತ್ ಗಾಣಿಗ ಕ್ರಿಯೇಟಿವ್ ಡೈರೆಕ್ಟರ್ ಆಗಿ ‘ಬೆಂಗಳೂರು ಬಾಯ್ಸ್’ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ, ಶೀಘ್ರವೇ ಸಿನಿಮಾ ತೆರೆಗೆ ತರುವ ಆಲೋಚನೆಯಲ್ಲಿದೆ.

ಇದನ್ನೂ ಓದಿ: ‘ಕೆಜಿಎಫ್​ 2’ ಬೇರೆ ವರ್ಷನ್​ಗೆ ಧ್ವನಿ ಕೊಡಲ್ಲ ಅಂದ್ರು ಯಶ್​; ಕಾರಣವೇನು?

ಹೊರಬಿತ್ತು ‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾದ ಮೊದಲ ವಿಮರ್ಶೆ; ಐದಕ್ಕೆ ಐದು ಸ್ಟಾರ್​

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್