AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿನ್ನ ಕಥೆ ಹೇಳೋಕೆ ಬಂದ ‘ಬೆಂಗಳೂರು ಬಾಯ್ಸ್​’; ಸಿನಿಪ್ರಿಯರಿಗೆ ನೆನಪಾಯ್ತು ‘ಓಂ’ ಸಿನಿಮಾ

. ಒಂದು ನಿಮಿಷದ ಹದಿಮೂರು ಸೆಕೆಂಡ್ ಇರುವ ಈ ಟೀಸರ್ 90ರ ದಶಕದ ಸೂಪರ್ ಹಿಟ್ ಸಿನಿಮಾಗಳಾದ ‘ಅಂತ‘, ‘ರಣಧೀರ’, ‘ಓಂ’ ಹಾಗೂ ‘ಎ’ ಸಿನಿಮಾಗಳನ್ನು ನೆನಪಿಸಿದೆ.

ಭಿನ್ನ ಕಥೆ ಹೇಳೋಕೆ ಬಂದ ‘ಬೆಂಗಳೂರು ಬಾಯ್ಸ್​’; ಸಿನಿಪ್ರಿಯರಿಗೆ ನೆನಪಾಯ್ತು ‘ಓಂ’ ಸಿನಿಮಾ
TV9 Web
| Edited By: |

Updated on: Apr 11, 2022 | 8:08 PM

Share

ಚಿತ್ರರಂಗದಲ್ಲಿ (Cinema Industry) ನಿತ್ಯ ಹೊಸಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಭಿನ್ನ ಚಿತ್ರಗಳನ್ನು ಪ್ರೇಕ್ಷಕರ ಎದುರು ಇಡಲು ಚಿತ್ರ ನಿರ್ಮಾತೃರು ಪ್ರಯತ್ನಿಸುತ್ತಿರುತ್ತಾರೆ. ಈಗಾಗಲೇ ಈ ರೀತಿಯ ಹಲವು ಪ್ರಯತ್ನಗಳು ನಡೆದಿವೆ. ಈಗ ‘ಬೆಂಗಳೂರು ಬಾಯ್ಸ್’ ಸಿನಿಮಾ (Bangalore Boys Movie) ತಂಡ ಕೂಡ ಇದೇ ಮಾದರಿಯ ಪ್ರಯತ್ನಕ್ಕೆ ಮುಂದಾಗಿದೆ. ಈ ಸಿನಿಮಾದ ಟೀಸರ್ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಅಷ್ಟೇ ಅಲ್ಲ, ಸ್ಯಾಂಡಲ್​ವುಡ್​ನಲ್ಲಿ(Sandalwood)  ಸಾಕಷ್ಟು ಹವಾ ಸೃಷ್ಟಿಸಿದ ಸಿನಿಮಾಗಳ ಪಾತ್ರಗಳನ್ನು ಈ ಚಿತ್ರದ ಟೀಸರ್ ನೆನಪಿಸಿದೆ. ಹಾಗಾದರೆ, ‘ಬೆಂಗಳೂರ ಬಾಯ್ಸ್​’ನಲ್ಲಿ ಅಂತಹ ವಿಶೇಷತೆ ಏನಿದೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ವಿ ಮೇಕರ್ಸ್ ‘ಬೆಂಗಳೂರು ಬಾಯ್ಸ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಒಂದು ನಿಮಿಷದ ಹದಿಮೂರು ಸೆಕೆಂಡ್ ಇರುವ ಈ ಟೀಸರ್ 90ರ ದಶಕದ ಸೂಪರ್ ಹಿಟ್ ಸಿನಿಮಾಗಳಾದ ‘ಅಂತ‘, ‘ರಣಧೀರ’, ‘ಓಂ’ ಹಾಗೂ ‘ಎ’ ಸಿನಿಮಾಗಳನ್ನು ನೆನಪಿಸಿದೆ. ಚಿತ್ರದ ಸೂಪರ್ ಹಿಟ್ ಸಿನಿಮಾ ಪಾತ್ರಗಳಲ್ಲಿ ನಾಯಕರಾದ ಸಚಿನ್ ಚೆಲುವರಾಯ ಸ್ವಾಮಿ, ಅಭಿಷೇಕ್ ದಾಸ್, ರೋಹಿತ್ ಕಾಣಿಸಿಕೊಂಡಿದ್ದಾರೆ. ಇವರ ಜತೆ ವೈನಿಧಿ ಜಗದೀಶ್, ಸೋನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಹಾಗಾದರೆ, ಈ ಚಿತ್ರದಲ್ಲಿ ರೌಡಿಸಂ ಬಗ್ಗೆ ಹೇಳಲಾಗುತ್ತಿದೆಯೇ? ಖಂಡಿತವಾಗಿಯೂ ಇಲ್ಲ. ‘ಬೆಂಗಳೂರು ಬಾಯ್ಸ್’ ರೋಮ್ಯಾಂಟಿಕ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದ ಸಿನಿಮಾ. ಕಾಲೇಜು ಕಥೆ, ಲವ್ ಸ್ಟೋರಿ, ಎಮೋಷನ್-ಸೆಂಟಿಮೆಂಟ್ ಚಿತ್ರದ ಪ್ರಮುಖ ಅಂಶಗಳು. ಟೀಸರ್​ನಲ್ಲಿ ಬರುವ ‘ಎ’ ಚಿತ್ರದ ಡೈಲಾಗ್ ಸಖತ್ ಹೈಲೈಟ್ ಆಗಿದೆ.

ರ‍್ಯಾಪ್ ಸಾಂಗ್ ಮೂಲಕ ಸಾಕಷ್ಟು ಖ್ಯಾತಿ ಗಳಿಸಿದ್ದಾರೆ ಅಲೋಕ್. ಅವರು ಈ ಚಿತ್ರಕ್ಕೆ  ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಧರ್ಮ ವಿಷ್ ಸಂಗೀತ ಸಂಯೋಜನೆ ಸಿನಿಮಾಗಿದೆ. ವಿಕ್ರಮ್ ಕೆ.ವೈ. ಚಿತ್ರಕ್ಕೆ ಬಂಡವಾಳ ಹೂಡಿದ್ದು, ಪ್ರಶಾಂತ್ ರಾವ್ ಪುರಂ ನಿರ್ಮಾಣದಲ್ಲಿ ವಿಕ್ರಮ್​ಗೆ ಸಾಥ್ ನೀಡಿದ್ದಾರೆ. ‘ಅಂಬಿ ನಿಂಗ್​ ವಯಸ್ಸಾಯ್ತೋ’ ಖ್ಯಾತಿಯ ಗುರುದತ್ ಗಾಣಿಗ ಕ್ರಿಯೇಟಿವ್ ಡೈರೆಕ್ಟರ್ ಆಗಿ ‘ಬೆಂಗಳೂರು ಬಾಯ್ಸ್’ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ, ಶೀಘ್ರವೇ ಸಿನಿಮಾ ತೆರೆಗೆ ತರುವ ಆಲೋಚನೆಯಲ್ಲಿದೆ.

ಇದನ್ನೂ ಓದಿ: ‘ಕೆಜಿಎಫ್​ 2’ ಬೇರೆ ವರ್ಷನ್​ಗೆ ಧ್ವನಿ ಕೊಡಲ್ಲ ಅಂದ್ರು ಯಶ್​; ಕಾರಣವೇನು?

ಹೊರಬಿತ್ತು ‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾದ ಮೊದಲ ವಿಮರ್ಶೆ; ಐದಕ್ಕೆ ಐದು ಸ್ಟಾರ್​

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ