AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈರಸಿ ಮಾಡಿದ್ರೆ ಸಿಕ್ಕಿ ಬೀಳೋದು ಗ್ಯಾರಂಟಿ; ಗುಪ್ತವಾಗಿ ಕಾರ್ಯಾಚರಣೆಗಿಳಿಯಲಿದೆ ಪೊಲೀಸ್​ ತಂಡ

ಅಕ್ಟೋಬರ್​ 14ರಂದು ದಿನಿಯಾ ವಿಜಯ್​ ನಟನೆಯ ‘ಸಲಗ’ ಮತ್ತು ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ತೆರೆಗೆ ಬರುತ್ತಿದೆ. ಅಕ್ಟೋಬರ್​ 29ರಂದು ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ರಿಲೀಸ್​ ಆಗುತ್ತಿದೆ.

ಪೈರಸಿ ಮಾಡಿದ್ರೆ ಸಿಕ್ಕಿ ಬೀಳೋದು ಗ್ಯಾರಂಟಿ; ಗುಪ್ತವಾಗಿ ಕಾರ್ಯಾಚರಣೆಗಿಳಿಯಲಿದೆ ಪೊಲೀಸ್​ ತಂಡ
ಸಲಗ-ಭಜರಂಗಿ 2, ಕೋಟಿಗೊಬ್ಬ 3 ಪೋಸ್ಟರ್​
TV9 Web
| Edited By: |

Updated on:Oct 01, 2021 | 6:34 PM

Share

ಕರ್ನಾಟಕ ಕೊವಿಡ್​ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆ ಚಿತ್ರಮಂದಿರದಲ್ಲಿ ಶೇ.100 ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಈ ಸುದ್ದಿ ಹೊರ ಬೀಳುತ್ತಿದ್ದಂತೆ ಸ್ಟಾರ್​ ಸಿನಿಮಾಗಳು ರಿಲೀಸ್​ ಡೇಟ್​ ಘೋಷಣೆ ಮಾಡಿದೆ. ಇದರ ಜತೆಗೆ ಸಿನಿಮಾ ತಂಡಕ್ಕೆ ಪೈರಸಿಯ ಕಾಟದ ಭಯ ಕಾಡುತ್ತಿದೆ. ಸಿನಿಮಾಗಳು ರಿಲೀಸ್​ ಆದ ಕೂಡಲೇ ಥಿಯೇಟರ್​ ಪ್ರಿಂಟ್​ಅನ್ನು ಆನ್​ಲೈನ್​ನಲ್ಲಿ ಬಿಡೋಕೆ ಕೆಲ ಕಿಡಿಗೇಡಿಗಳು ಸಜ್ಜಾಗಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಪೈರಸಿ ತಡೆಗೆ ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಅದು ಸಾಲುತ್ತಿಲ್ಲ. ಈ ಕಾರಣಕ್ಕೆ ಪೈರಸಿ ತಡೆಗೆ ಈ ಬಾರಿ ಹೊಸ ಕ್ರಮ ಕೈಗೊಳ್ಳಲಾಗುತ್ತಿದೆ.

ಅಕ್ಟೋಬರ್​ 14ರಂದು ದುನಿಯಾ ವಿಜಯ್​ ನಟನೆಯ ‘ಸಲಗ’ ಮತ್ತು ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ತೆರೆಗೆ ಬರುತ್ತಿದೆ. ಅಕ್ಟೋಬರ್​ 29ರಂದು ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ರಿಲೀಸ್​ ಆಗುತ್ತಿದೆ. ಈ ಎಲ್ಲಾ ಸಿನಿಮಾಗಳು ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟು ಹಾಕಿವೆ. ಈ ಸಿನಿಮಾಗಳನ್ನು ನೋಡೋಕೆ ಅಭಿಮಾನಿಗಳು ರೆಡಿ ಆಗುತ್ತಿದ್ದಾರೆ. ಚಿತ್ರಮಂದಿರಗಳು ಕೂಡ ಈಗಾಗಲೇ ಸಜ್ಜುಗೊಂಡಿವೆ. ಈ ಮಧ್ಯೆ ಚಿತ್ರತಂಡಕ್ಕೆ ಪೈರಸಿ ಕಾಟದ ಭಯ ಕಾಡುತ್ತಿದೆ.

‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಬಗ್ಗೆ ಸಂದೇಶವೊಂದು ಟೆಲಿಗ್ರಾಮ್​ನಲ್ಲಿ ಹರಿದಾಡುತ್ತಿದೆ. ‘ನೀವು ‘ಕೋಟಿಗೊಬ್ಬ 3’ ಸಿನಿಮಾ ಡೌನ್​ಲೋಡ್​ ಮಾಡಲು ನಮ್ಮ ಚಾನೆಲ್​ಗೆ ಜಾಯಿನ್​ ಆಗಿ’ ಎಂಬಿತ್ಯಾದಿ ಸಂದೇಶ ವೈರಲ್​ ಆಗಿದೆ. ಇದು ಚಿತ್ರತಂಡದ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಇಂದು (ಅಕ್ಟೋಬರ್​ 1) ‘ಸಲಗ’ ಸಿನಿಮಾ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ‘ಭಜರಂಗಿ-2’ ಸಿನಿಮಾ ನಿರ್ಮಾಪಕ ಜಯಣ್ಣ, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್, ಪದಾಧಿಕಾರಿಗಳಾದ ರಮೇಶ್, ಗಣೇಶ್​ ಅವರು ಬೆಂಗಳೂರು ಸಿಟಿ ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ಮನವಿ ಸಲ್ಲಿಕೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ನಿರ್ಮಾಪಕ ಕೆ.ಮಂಜು, ‘ಕಮೀಷನರ್ ಕಚೇರಿಯಲ್ಲಿಯೇ ಸ್ಕ್ವಾಡ್ ಮಾಡಲಾಗಿದೆ. ಆ ತಂಡ ಗುಪ್ತವಾಗಿ ಕಾರ್ಯಾಚರಣೆಗಿಳಿಯಲಿದೆ’ ಎಂದಿದ್ದಾರೆ. ಈ ಮೂಲಕ ಪೈರಸಿಗೆ ಬ್ರೇಕ್​ ಹಾಕಲು ಹೊಸ ಪ್ಲ್ಯಾನ್​ ರೂಪಿಸಲಾಗಿದೆ.

ಇದನ್ನೂ ಓದಿ: ‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಮಾಡಲು ಕಿಡಿಗೇಡಿಗಳ ಪ್ಲ್ಯಾನ್​; ಇಲ್ಲಿದೆ ಸಾಕ್ಷಿ

ಕೋಟಿಗೊಬ್ಬ 3 ಚಿತ್ರತಂಡಕ್ಕೆ ಅಭಯ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

Published On - 6:13 pm, Fri, 1 October 21

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ