AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈರಸಿ ಮಾಡಿದ್ರೆ ಸಿಕ್ಕಿ ಬೀಳೋದು ಗ್ಯಾರಂಟಿ; ಗುಪ್ತವಾಗಿ ಕಾರ್ಯಾಚರಣೆಗಿಳಿಯಲಿದೆ ಪೊಲೀಸ್​ ತಂಡ

ಅಕ್ಟೋಬರ್​ 14ರಂದು ದಿನಿಯಾ ವಿಜಯ್​ ನಟನೆಯ ‘ಸಲಗ’ ಮತ್ತು ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ತೆರೆಗೆ ಬರುತ್ತಿದೆ. ಅಕ್ಟೋಬರ್​ 29ರಂದು ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ರಿಲೀಸ್​ ಆಗುತ್ತಿದೆ.

ಪೈರಸಿ ಮಾಡಿದ್ರೆ ಸಿಕ್ಕಿ ಬೀಳೋದು ಗ್ಯಾರಂಟಿ; ಗುಪ್ತವಾಗಿ ಕಾರ್ಯಾಚರಣೆಗಿಳಿಯಲಿದೆ ಪೊಲೀಸ್​ ತಂಡ
ಸಲಗ-ಭಜರಂಗಿ 2, ಕೋಟಿಗೊಬ್ಬ 3 ಪೋಸ್ಟರ್​
TV9 Web
| Edited By: |

Updated on:Oct 01, 2021 | 6:34 PM

Share

ಕರ್ನಾಟಕ ಕೊವಿಡ್​ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆ ಚಿತ್ರಮಂದಿರದಲ್ಲಿ ಶೇ.100 ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಈ ಸುದ್ದಿ ಹೊರ ಬೀಳುತ್ತಿದ್ದಂತೆ ಸ್ಟಾರ್​ ಸಿನಿಮಾಗಳು ರಿಲೀಸ್​ ಡೇಟ್​ ಘೋಷಣೆ ಮಾಡಿದೆ. ಇದರ ಜತೆಗೆ ಸಿನಿಮಾ ತಂಡಕ್ಕೆ ಪೈರಸಿಯ ಕಾಟದ ಭಯ ಕಾಡುತ್ತಿದೆ. ಸಿನಿಮಾಗಳು ರಿಲೀಸ್​ ಆದ ಕೂಡಲೇ ಥಿಯೇಟರ್​ ಪ್ರಿಂಟ್​ಅನ್ನು ಆನ್​ಲೈನ್​ನಲ್ಲಿ ಬಿಡೋಕೆ ಕೆಲ ಕಿಡಿಗೇಡಿಗಳು ಸಜ್ಜಾಗಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಪೈರಸಿ ತಡೆಗೆ ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಅದು ಸಾಲುತ್ತಿಲ್ಲ. ಈ ಕಾರಣಕ್ಕೆ ಪೈರಸಿ ತಡೆಗೆ ಈ ಬಾರಿ ಹೊಸ ಕ್ರಮ ಕೈಗೊಳ್ಳಲಾಗುತ್ತಿದೆ.

ಅಕ್ಟೋಬರ್​ 14ರಂದು ದುನಿಯಾ ವಿಜಯ್​ ನಟನೆಯ ‘ಸಲಗ’ ಮತ್ತು ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ತೆರೆಗೆ ಬರುತ್ತಿದೆ. ಅಕ್ಟೋಬರ್​ 29ರಂದು ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ರಿಲೀಸ್​ ಆಗುತ್ತಿದೆ. ಈ ಎಲ್ಲಾ ಸಿನಿಮಾಗಳು ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟು ಹಾಕಿವೆ. ಈ ಸಿನಿಮಾಗಳನ್ನು ನೋಡೋಕೆ ಅಭಿಮಾನಿಗಳು ರೆಡಿ ಆಗುತ್ತಿದ್ದಾರೆ. ಚಿತ್ರಮಂದಿರಗಳು ಕೂಡ ಈಗಾಗಲೇ ಸಜ್ಜುಗೊಂಡಿವೆ. ಈ ಮಧ್ಯೆ ಚಿತ್ರತಂಡಕ್ಕೆ ಪೈರಸಿ ಕಾಟದ ಭಯ ಕಾಡುತ್ತಿದೆ.

‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಬಗ್ಗೆ ಸಂದೇಶವೊಂದು ಟೆಲಿಗ್ರಾಮ್​ನಲ್ಲಿ ಹರಿದಾಡುತ್ತಿದೆ. ‘ನೀವು ‘ಕೋಟಿಗೊಬ್ಬ 3’ ಸಿನಿಮಾ ಡೌನ್​ಲೋಡ್​ ಮಾಡಲು ನಮ್ಮ ಚಾನೆಲ್​ಗೆ ಜಾಯಿನ್​ ಆಗಿ’ ಎಂಬಿತ್ಯಾದಿ ಸಂದೇಶ ವೈರಲ್​ ಆಗಿದೆ. ಇದು ಚಿತ್ರತಂಡದ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಇಂದು (ಅಕ್ಟೋಬರ್​ 1) ‘ಸಲಗ’ ಸಿನಿಮಾ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ‘ಭಜರಂಗಿ-2’ ಸಿನಿಮಾ ನಿರ್ಮಾಪಕ ಜಯಣ್ಣ, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್, ಪದಾಧಿಕಾರಿಗಳಾದ ರಮೇಶ್, ಗಣೇಶ್​ ಅವರು ಬೆಂಗಳೂರು ಸಿಟಿ ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ಮನವಿ ಸಲ್ಲಿಕೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ನಿರ್ಮಾಪಕ ಕೆ.ಮಂಜು, ‘ಕಮೀಷನರ್ ಕಚೇರಿಯಲ್ಲಿಯೇ ಸ್ಕ್ವಾಡ್ ಮಾಡಲಾಗಿದೆ. ಆ ತಂಡ ಗುಪ್ತವಾಗಿ ಕಾರ್ಯಾಚರಣೆಗಿಳಿಯಲಿದೆ’ ಎಂದಿದ್ದಾರೆ. ಈ ಮೂಲಕ ಪೈರಸಿಗೆ ಬ್ರೇಕ್​ ಹಾಕಲು ಹೊಸ ಪ್ಲ್ಯಾನ್​ ರೂಪಿಸಲಾಗಿದೆ.

ಇದನ್ನೂ ಓದಿ: ‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಮಾಡಲು ಕಿಡಿಗೇಡಿಗಳ ಪ್ಲ್ಯಾನ್​; ಇಲ್ಲಿದೆ ಸಾಕ್ಷಿ

ಕೋಟಿಗೊಬ್ಬ 3 ಚಿತ್ರತಂಡಕ್ಕೆ ಅಭಯ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

Published On - 6:13 pm, Fri, 1 October 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್