AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈರಸಿ ಮಾಡಿದ್ರೆ ಸಿಕ್ಕಿ ಬೀಳೋದು ಗ್ಯಾರಂಟಿ; ಗುಪ್ತವಾಗಿ ಕಾರ್ಯಾಚರಣೆಗಿಳಿಯಲಿದೆ ಪೊಲೀಸ್​ ತಂಡ

ಅಕ್ಟೋಬರ್​ 14ರಂದು ದಿನಿಯಾ ವಿಜಯ್​ ನಟನೆಯ ‘ಸಲಗ’ ಮತ್ತು ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ತೆರೆಗೆ ಬರುತ್ತಿದೆ. ಅಕ್ಟೋಬರ್​ 29ರಂದು ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ರಿಲೀಸ್​ ಆಗುತ್ತಿದೆ.

ಪೈರಸಿ ಮಾಡಿದ್ರೆ ಸಿಕ್ಕಿ ಬೀಳೋದು ಗ್ಯಾರಂಟಿ; ಗುಪ್ತವಾಗಿ ಕಾರ್ಯಾಚರಣೆಗಿಳಿಯಲಿದೆ ಪೊಲೀಸ್​ ತಂಡ
ಸಲಗ-ಭಜರಂಗಿ 2, ಕೋಟಿಗೊಬ್ಬ 3 ಪೋಸ್ಟರ್​
TV9 Web
| Edited By: |

Updated on:Oct 01, 2021 | 6:34 PM

Share

ಕರ್ನಾಟಕ ಕೊವಿಡ್​ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆ ಚಿತ್ರಮಂದಿರದಲ್ಲಿ ಶೇ.100 ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಈ ಸುದ್ದಿ ಹೊರ ಬೀಳುತ್ತಿದ್ದಂತೆ ಸ್ಟಾರ್​ ಸಿನಿಮಾಗಳು ರಿಲೀಸ್​ ಡೇಟ್​ ಘೋಷಣೆ ಮಾಡಿದೆ. ಇದರ ಜತೆಗೆ ಸಿನಿಮಾ ತಂಡಕ್ಕೆ ಪೈರಸಿಯ ಕಾಟದ ಭಯ ಕಾಡುತ್ತಿದೆ. ಸಿನಿಮಾಗಳು ರಿಲೀಸ್​ ಆದ ಕೂಡಲೇ ಥಿಯೇಟರ್​ ಪ್ರಿಂಟ್​ಅನ್ನು ಆನ್​ಲೈನ್​ನಲ್ಲಿ ಬಿಡೋಕೆ ಕೆಲ ಕಿಡಿಗೇಡಿಗಳು ಸಜ್ಜಾಗಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಪೈರಸಿ ತಡೆಗೆ ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಅದು ಸಾಲುತ್ತಿಲ್ಲ. ಈ ಕಾರಣಕ್ಕೆ ಪೈರಸಿ ತಡೆಗೆ ಈ ಬಾರಿ ಹೊಸ ಕ್ರಮ ಕೈಗೊಳ್ಳಲಾಗುತ್ತಿದೆ.

ಅಕ್ಟೋಬರ್​ 14ರಂದು ದುನಿಯಾ ವಿಜಯ್​ ನಟನೆಯ ‘ಸಲಗ’ ಮತ್ತು ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ತೆರೆಗೆ ಬರುತ್ತಿದೆ. ಅಕ್ಟೋಬರ್​ 29ರಂದು ಶಿವರಾಜ್​ಕುಮಾರ್​ ನಟನೆಯ ‘ಭಜರಂಗಿ 2’ ರಿಲೀಸ್​ ಆಗುತ್ತಿದೆ. ಈ ಎಲ್ಲಾ ಸಿನಿಮಾಗಳು ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟು ಹಾಕಿವೆ. ಈ ಸಿನಿಮಾಗಳನ್ನು ನೋಡೋಕೆ ಅಭಿಮಾನಿಗಳು ರೆಡಿ ಆಗುತ್ತಿದ್ದಾರೆ. ಚಿತ್ರಮಂದಿರಗಳು ಕೂಡ ಈಗಾಗಲೇ ಸಜ್ಜುಗೊಂಡಿವೆ. ಈ ಮಧ್ಯೆ ಚಿತ್ರತಂಡಕ್ಕೆ ಪೈರಸಿ ಕಾಟದ ಭಯ ಕಾಡುತ್ತಿದೆ.

‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಬಗ್ಗೆ ಸಂದೇಶವೊಂದು ಟೆಲಿಗ್ರಾಮ್​ನಲ್ಲಿ ಹರಿದಾಡುತ್ತಿದೆ. ‘ನೀವು ‘ಕೋಟಿಗೊಬ್ಬ 3’ ಸಿನಿಮಾ ಡೌನ್​ಲೋಡ್​ ಮಾಡಲು ನಮ್ಮ ಚಾನೆಲ್​ಗೆ ಜಾಯಿನ್​ ಆಗಿ’ ಎಂಬಿತ್ಯಾದಿ ಸಂದೇಶ ವೈರಲ್​ ಆಗಿದೆ. ಇದು ಚಿತ್ರತಂಡದ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಇಂದು (ಅಕ್ಟೋಬರ್​ 1) ‘ಸಲಗ’ ಸಿನಿಮಾ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ‘ಭಜರಂಗಿ-2’ ಸಿನಿಮಾ ನಿರ್ಮಾಪಕ ಜಯಣ್ಣ, ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್, ಪದಾಧಿಕಾರಿಗಳಾದ ರಮೇಶ್, ಗಣೇಶ್​ ಅವರು ಬೆಂಗಳೂರು ಸಿಟಿ ಪೊಲೀಸ್ ಆಯುಕ್ತ ಕಮಲ್ ಪಂತ್​ಗೆ ಮನವಿ ಸಲ್ಲಿಕೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ನಿರ್ಮಾಪಕ ಕೆ.ಮಂಜು, ‘ಕಮೀಷನರ್ ಕಚೇರಿಯಲ್ಲಿಯೇ ಸ್ಕ್ವಾಡ್ ಮಾಡಲಾಗಿದೆ. ಆ ತಂಡ ಗುಪ್ತವಾಗಿ ಕಾರ್ಯಾಚರಣೆಗಿಳಿಯಲಿದೆ’ ಎಂದಿದ್ದಾರೆ. ಈ ಮೂಲಕ ಪೈರಸಿಗೆ ಬ್ರೇಕ್​ ಹಾಕಲು ಹೊಸ ಪ್ಲ್ಯಾನ್​ ರೂಪಿಸಲಾಗಿದೆ.

ಇದನ್ನೂ ಓದಿ: ‘ಕೋಟಿಗೊಬ್ಬ 3’ ರಿಲೀಸ್​ಗೂ ಮೊದಲೇ ಪೈರಸಿ ಮಾಡಲು ಕಿಡಿಗೇಡಿಗಳ ಪ್ಲ್ಯಾನ್​; ಇಲ್ಲಿದೆ ಸಾಕ್ಷಿ

ಕೋಟಿಗೊಬ್ಬ 3 ಚಿತ್ರತಂಡಕ್ಕೆ ಅಭಯ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

Published On - 6:13 pm, Fri, 1 October 21

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ