AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಮತ್ತು ಗ್ಯಾಂಗ್​ಗೆ ಮತ್ತೆ ಜೈಲು ಸೇರುವ ಭಯ; ಜ.24ಕ್ಕೆ ಸುಪ್ರೀಂನಲ್ಲಿ ಅರ್ಜಿ ವಿಚಾರಣೆ

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಅವರು ಪೂರ್ಣ ಪ್ರಮಾಣದ ಜಾಮೀನು ಪಡೆದು ಕೋರ್ಟ್​ನಿಂದ ಹೊರ ಬಂದಿದ್ದಾರೆ. ಅವರ ಜೊತೆ ಆಪ್ತೆ ಪವಿತ್ರಾ ಗೌಡ, ಮ್ಯಾನೇಜರ್ ನಾಗರಾಜು ಸೇರಿ ಅನೇಕರಿಗೆ ಜಾಮೀನು ಸಿಕ್ಕಿದೆ. ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿ ವಿಚಾರಣೆ ಜನವರಿ 24ರಂದು ನಡೆಯಲಿದೆ.

ದರ್ಶನ್ ಮತ್ತು ಗ್ಯಾಂಗ್​ಗೆ ಮತ್ತೆ ಜೈಲು ಸೇರುವ ಭಯ; ಜ.24ಕ್ಕೆ ಸುಪ್ರೀಂನಲ್ಲಿ ಅರ್ಜಿ ವಿಚಾರಣೆ
ದರ್ಶನ್
ರಾಚಪ್ಪಾಜಿ ನಾಯ್ಕ್
| Edited By: |

Updated on:Jan 17, 2025 | 10:45 AM

Share

ರೇಣುಕಾ ಸ್ವಾಮಿ ಕೊಲೆ ಕೇಸ್​ ಆರೋಪಿ ದರ್ಶನ್ ಹಾಗೂ ಗ್ಯಾಂಗ್​ಗೆ ಜಾಮೀನು ಸಿಕ್ಕ ವಿಚಾರ ಈಗ ಸುಪ್ರೀಂ ಕೋರ್ಟ್ ಅಂಗಳದಲ್ಲಿ ಇದೆ. ದರ್ಶನ್ ಜಾಮೀನು ಅರ್ಜಿ ಪ್ರಶ್ನಿಸಿ ಪೊಲೀಸರು ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿ ವಿಚಾರಣೆ ಜನವರಿ 24ರಂದು ನಡೆಯಲಿದೆ. ಒಂದೊಮ್ಮೆ ಜಾಮೀನು ರದ್ದಾದರೆ ದರ್ಶನ್ ಮತ್ತೆ ಜೈಲು ಸೇರಬೇಕಾಗುತ್ತದೆ.

ಜೂನ್ 11ರಂದು ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದರು. ಆ ಬಳಿಕ ಹಲವು ತಿಂಗಳು ಜೈಲಿನಲ್ಲಿ ಇದ್ದರು. ಕೆಳಹಂತದ ಕೋರ್ಟ್​​ನಲ್ಲಿ ಅವರ ಜಾಮೀನು ಅರ್ಜಿ ವಜಾ ಆಯಿತು. ಆ ಬಳಿಕ ಹೈಕೋರ್ಟ್​ನಲ್ಲಿ ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದ ಅವರು ನಂತರ ಪೂರ್ಣ ಪ್ರಮಾಣದ ಜಾಮೀನು ಪಡೆದುಕೊಂಡರು. ದರ್ಶನ್ ಜೊತೆ ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಮತ್ತು ಪ್ರದೋಶ್​​​ ಕೂಡ ಜಾಮೀನು ಪಡೆದಿದ್ದಾರೆ. ಇದನ್ನು ಸುಪ್ರೀಂನಲ್ಲಿ ಪ್ರಶ್ನಿಸಲಾಗಿದೆ.

ಸುಪ್ರೀಂಕೋರ್ಟ್​ನಲ್ಲಿ ಜ.24ರಂದು ಅರ್ಜಿ ವಿಚಾರಣೆ ನಡೆಸಲಿದೆ. ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಜನವರಿ 6ರಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈಗ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ.

ಇದನ್ನೂ ಓದಿ: ದರ್ಶನ್ ಭೇಟಿ ಮಾಡಲು ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ ಇಲ್ಲಿದೆ..

ಕಳೆದ ಡಿಸೆಂಬರ್​ನಲ್ಲಿ ಹೈಕೋರ್ಟ್​​ನಿಂದ ಆರೋಪಿಗಳು ಜಾಮೀನು ಪಡೆದಿದ್ದರು. ಪೊಲೀಸರು ಮೇಲ್ಮನವಿ ಸಲ್ಲಿಸಿರುವುದರಿಂದ ಏಳು ಆರೋಪಿಗಳಿಗೆ ಮತ್ತೆ ಕಂಟಕ ಶುರುವಾಗಿದೆ. ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್​ಗೆ ರಿಲೀಫ್ ಸಿಗುತ್ತಾ ನೋಡಬೇಕಿದೆ.

ಹೈಕೋರ್ಟ್​ನಲ್ಲಿ ಈ ಮೊದಲು ಸರ್ಕಾರಿ ಪರ ವಕೀಲರಾಗಿ ಪ್ರಸನ್ನ ಕುಮಾರ್ ಅವರು ವಾದ ಮಂಡನೆ ಮಾಡಿದ್ದರು. ಸುಪ್ರೀಂ ಕೋರ್ಟ್​ಗೆ ವಕೀಲರಾಗಿ ಅನಿಲ್ ಸಿ. ನಿಶಾನಿ ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರು ದರ್ಶನ್ ವಿರುದ್ಧ ವಾದ ಮಂಡನೆ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:44 am, Fri, 17 January 25

Follow Us
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್