AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್‌ಗೆ ವಂಚನೆ? ಸಿನಿಮಾ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಬಂಧನ

ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣಗಳನ್ನು ಹರಾಜು ಹಾಕ್ತೀವಿ ಅಂದಾಗಲೂ ಅದರ ಮಾಲಿಕ ಡೋಂಟ್​ ಕೇರ್​ ಎಂದಿದ್ದರಿಂದ ಬ್ಯಾಂಕ್​ ಸಿಬ್ಬಂದಿಗೆ ಅನುಮಾನ ಬಂತು. ಪರಿಶೀಲಿಸಿ ನೋಡಿದಾಗ ಆಘಾತ ಕಾದಿತ್ತು.

ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್‌ಗೆ ವಂಚನೆ? ಸಿನಿಮಾ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಬಂಧನ
ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್‌ಗೆ ವಂಚನೆ? ಸಿನಿಮಾ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಬಂಧನ
TV9 Web
| Edited By: |

Updated on: Aug 17, 2021 | 4:07 PM

Share

ವಂಚನೆ ಪ್ರಕರಣಗಳಲ್ಲಿ ಸಿನಿಮಾ ಮಂದಿಯ ಹೆಸರು ಪದೇಪದೇ ಕೇಳಿಬರುವಂತಾಗಿದೆ. ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್​ಗೆ ವಂಚಿಸಿದ ಆರೋಪದ ಮೇಲೆ ಸ್ಯಾಂಡಲ್​ವುಡ್​ ಸಿನಿಮಾ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 2016ರಲ್ಲಿ ‘ಮಧುರ ಸ್ವಪ್ನ’ ಚಿತ್ರಕ್ಕೆ ಕರಮಲ ಬಾಲರವೀಂದ್ರನಾಥ್ ನಿರ್ದೇಶನ ಮಾಡಿದ್ದರು. ಈಗ ಪೊಲೀಸರ ಅತಿಥಿ ಆಗಿದ್ದಾರೆ. ಅವರ ಮೇಲೆ ಗಂಭೀರ ಆರೋಪ ಎದುರಾಗಿದೆ. ನಕಲಿ ಚಿನ್ನ ಅಡವಿಟ್ಟು ಹಲವು ಬ್ಯಾಂಕ್​ಗಳಿಗೆ ಲಕ್ಷಾಂತರ ರೂ. ವಂಚಿಸಿರುವ ಶಂಕೆ ವ್ಯಕ್ತವಾಗಿದೆ.

ಅಚ್ಚರಿ ಎಂದರೆ ಸಿನಿಮಾ ಶೈಲಿಯಲ್ಲಿ ಕರಮಲ ಬಾಲರವೀಂದ್ರನಾಥ್ ಖತರ್ನಾಕ್​ ಕೆಲಸ ಮಾಡಿರುವುದು ಬೆಳಕಿಗೆ ಬಂದಿದೆ. ಖಾಸಗಿ ಬ್ಯಾಂಕ್​ನಲ್ಲಿ ಚಿನ್ನ ಅಡವಿಟ್ಟು ಬರೋಬ್ಬರಿ 42.91 ಲಕ್ಷ ರೂ. ಹಣವನ್ನು ಅವರು ಪಡೆದಿದ್ದರು. ನಂತರ ಬಡ್ಡಿ ಕಟ್ಟಲು ನೋಟೀಸ್ ನೀಡಿದರೂ ಅದಕ್ಕೆ ಕರಮಲ ಬಾಲರವೀಂದ್ರನಾಥ್ ತಲೆ ಕೆಡಿಸಿಕೊಳ್ಳಲಿಲ್ಲ. ಅಡವಿಟ್ಟುಕೊಂಡಿದ್ದ ಚಿನ್ನ ಹರಾಜು ಹಾಕ್ತೀವಿ ಅಂತ ಬ್ಯಾಂಕ್​ನವರು ಹೇಳಿದರೂ ಬಾಲರವೀಂದ್ರನಾಥ್ ಕಡೆಯಿಂದ ಪ್ರತಿಕ್ರಿಯೆ ಬರಲಿಲ್ಲ. ಆಗಲೇ ಬ್ಯಾಂಕ್​ ಸಿಬ್ಬಂದಿಗೆ ಅನುಮಾನ ಶುರುವಾಯ್ತು.

ಅಷ್ಟು ಬೆಲೆ ಬಾಳುವ ಚಿನ್ನಾಭರಣಗಳನ್ನು ಹರಾಜು ಹಾಕ್ತೀವಿ ಅಂದಾಗಲೂ ಅದರ ಮಾಲಿಕ ಡೋಂಟ್​ ಕೇರ್​ ಎಂದಿದ್ದು ಗಮನಿಸಿ ಬ್ಯಾಂಕ್​ ಸಿಬ್ಬಂದಿಗೆ ಯಾಕೋ ಎಡವಟ್ಟಾಗಿದೆ ಅನಿಸಿತು. ಅನುಮಾನ ಬಂದು ಪರಿಶೀಲಿಸಿದಾಗ ಅವರಿಗೆ ಆಘಾತ ಕಾದಿತ್ತು. ಹೊರಗಿನಿಂದ ಚಿನ್ನ, ಒಳಗೆಲ್ಲ ಲೋಹ ತುಂಬಿಸಿ ಅಡವಿಟ್ಟಿದ್ದ ಕರಮಲ ಬಾಲರವೀಂದ್ರನಾಥ್ ಮಾಸ್ಟರ್​ ಪ್ಲ್ಯಾನ್​ ಬಯಲಾಯಿತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸರಿಂದ ಆರೋಪಿ ಬಾಲರವಿಂದ್ರನಾಥ ಬಂಧನವಾಗಿದೆ. ಇನ್ನೂ ಹಲವೆಡೆ ಇದೇ ರೀತಿ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಅವರನ್ನು ವಶಕ್ಕೆ ಪಡೆದಿರುವ ರಾಜಾಜಿನಗರ ಪೊಲೀಸರು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ. ವಂಚನೆ ಪ್ರಕರಣದ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ:

ದೊಡ್ಡಬಳ್ಳಾಪುರದ ಮಾಜಿ ಶಾಸಕ ಮತ್ತು ಪತ್ನಿ ವಿರುದ್ಧ ಕೇಸ್ ದಾಖಲು; 3 ಕೋಟಿ ರೂ. ಪಡೆದು ವಂಚನೆ ಆರೋಪ

ದರ್ಶನ್​ಗೆ ವಂಚನೆ ಕೇಸ್; ಕ್ಷಣಕ್ಕೊಂದರಂತೆ.. ದಿನಕ್ಕೊಂದರಂತೆ ಹೇಳಿಕೆ ನೀಡುತ್ತಿರುವ ಆರೋಪಿ ಅರುಣ ಕುಮಾರಿ

(Bank cheating Case: Madhura Swapna Kannada movie director Karamala Balaravindranath arrested)

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು