AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್‌ಗೆ ವಂಚನೆ? ಸಿನಿಮಾ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಬಂಧನ

ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣಗಳನ್ನು ಹರಾಜು ಹಾಕ್ತೀವಿ ಅಂದಾಗಲೂ ಅದರ ಮಾಲಿಕ ಡೋಂಟ್​ ಕೇರ್​ ಎಂದಿದ್ದರಿಂದ ಬ್ಯಾಂಕ್​ ಸಿಬ್ಬಂದಿಗೆ ಅನುಮಾನ ಬಂತು. ಪರಿಶೀಲಿಸಿ ನೋಡಿದಾಗ ಆಘಾತ ಕಾದಿತ್ತು.

ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್‌ಗೆ ವಂಚನೆ? ಸಿನಿಮಾ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಬಂಧನ
ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್‌ಗೆ ವಂಚನೆ? ಸಿನಿಮಾ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಬಂಧನ
TV9 Web
| Edited By: |

Updated on: Aug 17, 2021 | 4:07 PM

Share

ವಂಚನೆ ಪ್ರಕರಣಗಳಲ್ಲಿ ಸಿನಿಮಾ ಮಂದಿಯ ಹೆಸರು ಪದೇಪದೇ ಕೇಳಿಬರುವಂತಾಗಿದೆ. ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್​ಗೆ ವಂಚಿಸಿದ ಆರೋಪದ ಮೇಲೆ ಸ್ಯಾಂಡಲ್​ವುಡ್​ ಸಿನಿಮಾ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 2016ರಲ್ಲಿ ‘ಮಧುರ ಸ್ವಪ್ನ’ ಚಿತ್ರಕ್ಕೆ ಕರಮಲ ಬಾಲರವೀಂದ್ರನಾಥ್ ನಿರ್ದೇಶನ ಮಾಡಿದ್ದರು. ಈಗ ಪೊಲೀಸರ ಅತಿಥಿ ಆಗಿದ್ದಾರೆ. ಅವರ ಮೇಲೆ ಗಂಭೀರ ಆರೋಪ ಎದುರಾಗಿದೆ. ನಕಲಿ ಚಿನ್ನ ಅಡವಿಟ್ಟು ಹಲವು ಬ್ಯಾಂಕ್​ಗಳಿಗೆ ಲಕ್ಷಾಂತರ ರೂ. ವಂಚಿಸಿರುವ ಶಂಕೆ ವ್ಯಕ್ತವಾಗಿದೆ.

ಅಚ್ಚರಿ ಎಂದರೆ ಸಿನಿಮಾ ಶೈಲಿಯಲ್ಲಿ ಕರಮಲ ಬಾಲರವೀಂದ್ರನಾಥ್ ಖತರ್ನಾಕ್​ ಕೆಲಸ ಮಾಡಿರುವುದು ಬೆಳಕಿಗೆ ಬಂದಿದೆ. ಖಾಸಗಿ ಬ್ಯಾಂಕ್​ನಲ್ಲಿ ಚಿನ್ನ ಅಡವಿಟ್ಟು ಬರೋಬ್ಬರಿ 42.91 ಲಕ್ಷ ರೂ. ಹಣವನ್ನು ಅವರು ಪಡೆದಿದ್ದರು. ನಂತರ ಬಡ್ಡಿ ಕಟ್ಟಲು ನೋಟೀಸ್ ನೀಡಿದರೂ ಅದಕ್ಕೆ ಕರಮಲ ಬಾಲರವೀಂದ್ರನಾಥ್ ತಲೆ ಕೆಡಿಸಿಕೊಳ್ಳಲಿಲ್ಲ. ಅಡವಿಟ್ಟುಕೊಂಡಿದ್ದ ಚಿನ್ನ ಹರಾಜು ಹಾಕ್ತೀವಿ ಅಂತ ಬ್ಯಾಂಕ್​ನವರು ಹೇಳಿದರೂ ಬಾಲರವೀಂದ್ರನಾಥ್ ಕಡೆಯಿಂದ ಪ್ರತಿಕ್ರಿಯೆ ಬರಲಿಲ್ಲ. ಆಗಲೇ ಬ್ಯಾಂಕ್​ ಸಿಬ್ಬಂದಿಗೆ ಅನುಮಾನ ಶುರುವಾಯ್ತು.

ಅಷ್ಟು ಬೆಲೆ ಬಾಳುವ ಚಿನ್ನಾಭರಣಗಳನ್ನು ಹರಾಜು ಹಾಕ್ತೀವಿ ಅಂದಾಗಲೂ ಅದರ ಮಾಲಿಕ ಡೋಂಟ್​ ಕೇರ್​ ಎಂದಿದ್ದು ಗಮನಿಸಿ ಬ್ಯಾಂಕ್​ ಸಿಬ್ಬಂದಿಗೆ ಯಾಕೋ ಎಡವಟ್ಟಾಗಿದೆ ಅನಿಸಿತು. ಅನುಮಾನ ಬಂದು ಪರಿಶೀಲಿಸಿದಾಗ ಅವರಿಗೆ ಆಘಾತ ಕಾದಿತ್ತು. ಹೊರಗಿನಿಂದ ಚಿನ್ನ, ಒಳಗೆಲ್ಲ ಲೋಹ ತುಂಬಿಸಿ ಅಡವಿಟ್ಟಿದ್ದ ಕರಮಲ ಬಾಲರವೀಂದ್ರನಾಥ್ ಮಾಸ್ಟರ್​ ಪ್ಲ್ಯಾನ್​ ಬಯಲಾಯಿತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸರಿಂದ ಆರೋಪಿ ಬಾಲರವಿಂದ್ರನಾಥ ಬಂಧನವಾಗಿದೆ. ಇನ್ನೂ ಹಲವೆಡೆ ಇದೇ ರೀತಿ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಅವರನ್ನು ವಶಕ್ಕೆ ಪಡೆದಿರುವ ರಾಜಾಜಿನಗರ ಪೊಲೀಸರು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ. ವಂಚನೆ ಪ್ರಕರಣದ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ:

ದೊಡ್ಡಬಳ್ಳಾಪುರದ ಮಾಜಿ ಶಾಸಕ ಮತ್ತು ಪತ್ನಿ ವಿರುದ್ಧ ಕೇಸ್ ದಾಖಲು; 3 ಕೋಟಿ ರೂ. ಪಡೆದು ವಂಚನೆ ಆರೋಪ

ದರ್ಶನ್​ಗೆ ವಂಚನೆ ಕೇಸ್; ಕ್ಷಣಕ್ಕೊಂದರಂತೆ.. ದಿನಕ್ಕೊಂದರಂತೆ ಹೇಳಿಕೆ ನೀಡುತ್ತಿರುವ ಆರೋಪಿ ಅರುಣ ಕುಮಾರಿ

(Bank cheating Case: Madhura Swapna Kannada movie director Karamala Balaravindranath arrested)

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ