AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್‌ಗೆ ವಂಚನೆ? ಸಿನಿಮಾ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಬಂಧನ

ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಚಿನ್ನಾಭರಣಗಳನ್ನು ಹರಾಜು ಹಾಕ್ತೀವಿ ಅಂದಾಗಲೂ ಅದರ ಮಾಲಿಕ ಡೋಂಟ್​ ಕೇರ್​ ಎಂದಿದ್ದರಿಂದ ಬ್ಯಾಂಕ್​ ಸಿಬ್ಬಂದಿಗೆ ಅನುಮಾನ ಬಂತು. ಪರಿಶೀಲಿಸಿ ನೋಡಿದಾಗ ಆಘಾತ ಕಾದಿತ್ತು.

ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್‌ಗೆ ವಂಚನೆ? ಸಿನಿಮಾ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಬಂಧನ
ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್‌ಗೆ ವಂಚನೆ? ಸಿನಿಮಾ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಬಂಧನ
TV9 Web
| Edited By: |

Updated on: Aug 17, 2021 | 4:07 PM

Share

ವಂಚನೆ ಪ್ರಕರಣಗಳಲ್ಲಿ ಸಿನಿಮಾ ಮಂದಿಯ ಹೆಸರು ಪದೇಪದೇ ಕೇಳಿಬರುವಂತಾಗಿದೆ. ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್​ಗೆ ವಂಚಿಸಿದ ಆರೋಪದ ಮೇಲೆ ಸ್ಯಾಂಡಲ್​ವುಡ್​ ಸಿನಿಮಾ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 2016ರಲ್ಲಿ ‘ಮಧುರ ಸ್ವಪ್ನ’ ಚಿತ್ರಕ್ಕೆ ಕರಮಲ ಬಾಲರವೀಂದ್ರನಾಥ್ ನಿರ್ದೇಶನ ಮಾಡಿದ್ದರು. ಈಗ ಪೊಲೀಸರ ಅತಿಥಿ ಆಗಿದ್ದಾರೆ. ಅವರ ಮೇಲೆ ಗಂಭೀರ ಆರೋಪ ಎದುರಾಗಿದೆ. ನಕಲಿ ಚಿನ್ನ ಅಡವಿಟ್ಟು ಹಲವು ಬ್ಯಾಂಕ್​ಗಳಿಗೆ ಲಕ್ಷಾಂತರ ರೂ. ವಂಚಿಸಿರುವ ಶಂಕೆ ವ್ಯಕ್ತವಾಗಿದೆ.

ಅಚ್ಚರಿ ಎಂದರೆ ಸಿನಿಮಾ ಶೈಲಿಯಲ್ಲಿ ಕರಮಲ ಬಾಲರವೀಂದ್ರನಾಥ್ ಖತರ್ನಾಕ್​ ಕೆಲಸ ಮಾಡಿರುವುದು ಬೆಳಕಿಗೆ ಬಂದಿದೆ. ಖಾಸಗಿ ಬ್ಯಾಂಕ್​ನಲ್ಲಿ ಚಿನ್ನ ಅಡವಿಟ್ಟು ಬರೋಬ್ಬರಿ 42.91 ಲಕ್ಷ ರೂ. ಹಣವನ್ನು ಅವರು ಪಡೆದಿದ್ದರು. ನಂತರ ಬಡ್ಡಿ ಕಟ್ಟಲು ನೋಟೀಸ್ ನೀಡಿದರೂ ಅದಕ್ಕೆ ಕರಮಲ ಬಾಲರವೀಂದ್ರನಾಥ್ ತಲೆ ಕೆಡಿಸಿಕೊಳ್ಳಲಿಲ್ಲ. ಅಡವಿಟ್ಟುಕೊಂಡಿದ್ದ ಚಿನ್ನ ಹರಾಜು ಹಾಕ್ತೀವಿ ಅಂತ ಬ್ಯಾಂಕ್​ನವರು ಹೇಳಿದರೂ ಬಾಲರವೀಂದ್ರನಾಥ್ ಕಡೆಯಿಂದ ಪ್ರತಿಕ್ರಿಯೆ ಬರಲಿಲ್ಲ. ಆಗಲೇ ಬ್ಯಾಂಕ್​ ಸಿಬ್ಬಂದಿಗೆ ಅನುಮಾನ ಶುರುವಾಯ್ತು.

ಅಷ್ಟು ಬೆಲೆ ಬಾಳುವ ಚಿನ್ನಾಭರಣಗಳನ್ನು ಹರಾಜು ಹಾಕ್ತೀವಿ ಅಂದಾಗಲೂ ಅದರ ಮಾಲಿಕ ಡೋಂಟ್​ ಕೇರ್​ ಎಂದಿದ್ದು ಗಮನಿಸಿ ಬ್ಯಾಂಕ್​ ಸಿಬ್ಬಂದಿಗೆ ಯಾಕೋ ಎಡವಟ್ಟಾಗಿದೆ ಅನಿಸಿತು. ಅನುಮಾನ ಬಂದು ಪರಿಶೀಲಿಸಿದಾಗ ಅವರಿಗೆ ಆಘಾತ ಕಾದಿತ್ತು. ಹೊರಗಿನಿಂದ ಚಿನ್ನ, ಒಳಗೆಲ್ಲ ಲೋಹ ತುಂಬಿಸಿ ಅಡವಿಟ್ಟಿದ್ದ ಕರಮಲ ಬಾಲರವೀಂದ್ರನಾಥ್ ಮಾಸ್ಟರ್​ ಪ್ಲ್ಯಾನ್​ ಬಯಲಾಯಿತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸರಿಂದ ಆರೋಪಿ ಬಾಲರವಿಂದ್ರನಾಥ ಬಂಧನವಾಗಿದೆ. ಇನ್ನೂ ಹಲವೆಡೆ ಇದೇ ರೀತಿ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಅವರನ್ನು ವಶಕ್ಕೆ ಪಡೆದಿರುವ ರಾಜಾಜಿನಗರ ಪೊಲೀಸರು ಹೆಚ್ಚಿನ ವಿಚಾರಣೆ ಮಾಡುತ್ತಿದ್ದಾರೆ. ವಂಚನೆ ಪ್ರಕರಣದ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ:

ದೊಡ್ಡಬಳ್ಳಾಪುರದ ಮಾಜಿ ಶಾಸಕ ಮತ್ತು ಪತ್ನಿ ವಿರುದ್ಧ ಕೇಸ್ ದಾಖಲು; 3 ಕೋಟಿ ರೂ. ಪಡೆದು ವಂಚನೆ ಆರೋಪ

ದರ್ಶನ್​ಗೆ ವಂಚನೆ ಕೇಸ್; ಕ್ಷಣಕ್ಕೊಂದರಂತೆ.. ದಿನಕ್ಕೊಂದರಂತೆ ಹೇಳಿಕೆ ನೀಡುತ್ತಿರುವ ಆರೋಪಿ ಅರುಣ ಕುಮಾರಿ

(Bank cheating Case: Madhura Swapna Kannada movie director Karamala Balaravindranath arrested)

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ