AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್ ಜನಾರ್ಧನ್ 860 ಸಿನಿಮಾ ಮಾಡಿದರೂ ಬ್ಯಾಂಕ್ ಬ್ಯಾಲೆನ್ಸ್ ಇಲ್ಲ; ತಪ್ಪಿನ ಬಗ್ಗೆ ಮರುಗಿದ್ದ ನಟ

Bank Janaradhan Death: ಪ್ರಸಿದ್ಧ ಕನ್ನಡ ನಟ ಬ್ಯಾಂಕ್ ಜನಾರ್ಧನ್ ಅವರು 76 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 860ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರೂ, ಆರ್ಥಿಕ ಸಂಕಷ್ಟ ಅವರನ್ನು ಕಾಡುತ್ತಿತ್ತು. ಬ್ಯಾಂಕ್ ಉದ್ಯೋಗ ಮತ್ತು ನಟನೆಯ ನಡುವೆ ಸಮಯ ಹೊಂದಿಸಲು ಸಾಧ್ಯವಾಗದೆ, ಸಂಬಳ ಕಡಿತ ಮತ್ತು ಕಡಿಮೆ ಸಂಭಾವನೆಯಿಂದ ಅವರು ತೊಂದರೆ ಅನುಭವಿಸಿದ್ದರು.

ಬ್ಯಾಂಕ್ ಜನಾರ್ಧನ್ 860 ಸಿನಿಮಾ ಮಾಡಿದರೂ ಬ್ಯಾಂಕ್ ಬ್ಯಾಲೆನ್ಸ್ ಇಲ್ಲ; ತಪ್ಪಿನ ಬಗ್ಗೆ ಮರುಗಿದ್ದ ನಟ
ಬ್ಯಾಂಕ್ ಜನಾರ್ಧನ್
ರಾಜೇಶ್ ದುಗ್ಗುಮನೆ
|

Updated on:Apr 14, 2025 | 8:33 AM

Share

ಬ್ಯಾಂಕ್ ಜನಾರ್ಧನ್ (Bank Janardhan) ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಜನಾರ್ಧನ್ ಅವರು ಬರೋಬ್ಬರಿ 860 ಸಿನಿಮಾಗಳಲ್ಲಿ ನಟಿಸಿದ್ದರು. ಆದರೆ, ಅವರಿಗೆ ಆರ್ಥಿಕವಾಗಿ ಸಾಕಷ್ಟು ತೊಂದರೆಗಳು ಇದ್ದವು. ಇದಕ್ಕೆ ಅವರು ಮಾಡಿದ ತಪ್ಪೇ ಕಾರಣವಂತೆ. ಈ ಬಗ್ಗೆ ‘ಕಲಾ ಮಾಧ್ಯಮ’ ಯೂಟ್ಯೂಬ್ ಚಾನೆಲ್​ಗೆ ನೀಡಿದ ಸಂದರ್ಶನ ಒಂದರಲ್ಲಿ ಬ್ಯಾಂಕ್ ಜನಾರ್ಧನ್ ಅವರು ಹೇಳಿಕೊಂಡು ಮರುಗಿದ್ದರು. ಅಷ್ಟೆಲ್ಲ ಸಿನಿಮಾಗಳನ್ನು ಮಾಡಿದರೂ ಹಣ ಗಳಿಸಲು ಏಕೆ ಸಾಧ್ಯವಾಗಿಲ್ಲ ಎಂಬುದನ್ನು ವಿವರಿಸಿದ್ದರು.

ಜನಾರ್ಧನ್ ಅವರು ಬ್ಯಾಂಕ್ ಜನಾರ್ಧನ್ ಆಗಲು ಕಾರಣವಾಗಿದ್ದು ಅವರ ವೃತ್ತಿ ಜೀವನ. ಬ್ಯಾಂಕ್​ನಲ್ಲಿ ಕೆಲಸ ಮಾಡಿಕೊಂಡಿದ್ದ ಅವರು, ನಂತರ ನಟನೆಗೆ ಹೊರಳಿದರು. ಆದರೆ, ಬ್ಯಾಂಕ್ ಕೆಲಸ ಬಿಟ್ಟಿರಲಿಲ್ಲ. ನಟನೆಯ ಕಾರಣಕ್ಕೆ ಅವರು ಬ್ಯಾಂಕ್​ಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಅಷ್ಟೆಲ್ಲ ರಜಗಳೂ ಇಲ್ಲದ ಕಾರಣ ಸಂಬಳ ಕಟ್ ಮಾಡಿಕೊಳ್ಳುತ್ತಿದ್ದರು. ಇತ್ತ ಸಿನಿಮಾಗಳಲ್ಲಿ ನಟಿಸುವಾಗ ಹೆಚ್ಚಿನ ಸಂಭಾವನೆ ನೀಡುತ್ತಿರಲಿಲ್ಲ. ಇದರಿಂದ ಅವರಿಗೆ ಜೀವನ ನಡೆಸೋದೇ ಕಷ್ಟ ಆಗಿತ್ತು.

‘ಇವತ್ತಿನವರೆಗೆ 860 ಸಿನಿಮಾ ಮಾಡಿದ್ದೇನೆ. ಇದರಲ್ಲಿ ಮೂರು ತೆಲುಗು, ಮೂರು ತಮಿಳು, ನಾಲ್ಕು ತುಳು ಮಾಡಿದ್ದೇನೆ. ಆದರೆ, ಬ್ಯಾಂಕ್ ಬ್ಯಾಲೆನ್ಸ್ ಇಲ್ಲ. ಯಾಕೆಂದರೆ ಡಿಮ್ಯಾಂಡ್ ಮಾಡೋಕೆ ಹೋಗಿಲ್ಲ. ಎಷ್ಟು ಕೊಟ್ಟರೋ ಅಷ್ಟೇ ತೆಗೆದುಕೊಳ್ಳುತ್ತಿದ್ದೆ. ಪಾತ್ರದ ಬಗ್ಗೆ ವ್ಯಾಮೋಹ ಇತ್ತು. ಹೀಗಾಗಿ, ಎಷ್ಟು ಕೊಡಲಿ ಎಂದು ಕೇಳಿದಾಗ ಇಷ್ಟೇ ಕೊಡಿ ಎಂದು ಕೇಳಲಿಲ್ಲ’ ಎಂದಿದ್ದರು ಬ್ಯಾಂಕ್ ಜನಾರ್ಧನ್. ಮೊದಲ ಮಗಳ ಮದುವೆ ಮಾಡುವಾಗ ಅವರ ಬಳಿ ಹಣ ಇರಲಿಲ್ಲ. ಆಗ ಸಹಾಯಕ್ಕೆ ಬಂದಿದ್ದರು ಕುಮಾರ್ ಬಂಗಾರಪ್ಪ. ಮಗಳ ಮದುವೆ ಖರ್ಚಿಗೆ ಆಗಿನ ಕಾಲಕ್ಕೆ ಬರೋಬ್ಬರಿ 50 ಸಾವಿರ ರೂಪಾಯಿ ನೀಡಿದ್ದರು. ‘ನಾನು ಇಂದಿಗೂ ಯಾರನ್ನಾದರೂ ನೆನಪಿಸಿಕೊಳ್ಳುತ್ತೇನೆ ಎಂದರೆ ಕುಮಾರ್ ಬಂಗಾರಪ್ಪ ಅವರನ್ನು’ ಎಂದು ಕಲಾಮಾಧ್ಯಮ ಯೂಟ್ಯೂಬ್ ಚಾನೆಲ್​ನಲ್ಲಿ ಬ್ಯಾಂಕ್ ಜನಾರ್ಧನ್ ಅವರು ಹೇಳಿಕೊಂಡಿದ್ದರು.

ಇದನ್ನೂ ಓದಿ
Image
ಬ್ಯಾಂಕ್ ಜನಾರ್ಧನ್ ವೃತ್ತಿ ಜೀವನ ಬದಲಿಸಿದ್ದು ಆ ಇಬ್ಬರು ವ್ಯಕ್ತಿಗಳು
Image
ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ; 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ  
Image
‘ಯುದ್ಧಕಾಂಡ’ ವೇದಿಕೆಯಲ್ಲಿ ಅಪ್ಪನ ತ್ಯಾಗದ ವಿಷಯ ತೆರೆದಿಟ್ಟ ರವಿಚಂದ್ರನ್
Image
ಫಿಲ್ಮ್ ಫೆಸ್ಟಿವಲ್​ಗಳಲ್ಲಿ ಗಮನ ಸೆಳೆದ ‘ಗ್ರೀನ್’ ಸಿನಿಮಾ

ಇದನ್ನೂ ಓದಿ: ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ; 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ  

ಬ್ಯಾಂಕ್ ಜನಾರ್ಧನ್ ಇಂದು (ಏಪ್ರಿಲ್ 24) ಬೆಳಿಗ್ಗೆ 2.30ಕ್ಕೆ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು. ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅವರ ಪಾರ್ಥೀವ ಶರೀರ ಇಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:22 am, Mon, 14 April 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು