AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟ ಬ್ಯಾಂಕ್ ಜನಾರ್ದನ್​ಗೆ ಹೃದಯಾಘಾತ; ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪುತ್ರ

ತಂದೆಯ ಆರೋಗ್ಯದ ಕುರಿತು ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ‘ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ’ ಎಂದು ಗುರುಪ್ರಸಾದ್ ಅವರು ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.

ಹಿರಿಯ ನಟ ಬ್ಯಾಂಕ್ ಜನಾರ್ದನ್​ಗೆ ಹೃದಯಾಘಾತ; ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪುತ್ರ
ಬ್ಯಾಂಕ್ ಜನಾರ್ಧನ್
ಮಂಗಳ ರಾಜಗೋಪಾಲ್​
| Edited By: |

Updated on: Sep 26, 2023 | 1:09 PM

Share

ಸ್ಯಾಂಡಲ್​ವುಡ್​ನ ಹಿರಿಯ ನಟ ಬ್ಯಾಂಕ್ ಜನಾರ್ದನ್ (Bank Janardhan) ಅವರಿಗೆ ಹೃದಯಘಾತ ಆಗಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ, ಸಿನಿಪ್ರಿಯರಿಗೆ ಆತಂಕ ಕಾಡಲು ಆರಂಭವಾಗಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಲಾಗುತ್ತಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ತಂದೆಯ ಆರೋಗ್ಯದ ಕುರಿತು ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ‘ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ’ ಎಂದು ಗುರುಪ್ರಸಾದ್ ಅವರು ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಡಬ್ಬಿಂಗ್ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟ ‘ಜೈಲರ್’ ಸಿನಿಮಾ ವಿಲನ್  

ಬ್ಯಾಂಕ್ ಜನಾರ್ದನ್ ಜನಿಸಿದ್ದು 1949ರಲ್ಲಿ. ಅವರು 1991ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಅಜಗಜಾಂತರ’ ಅವರ ನಟನೆಯ ಮೊದಲ ಸಿನಿಮಾ. ಆ ಬಳಿಕ ‘ಗೌರಿ ಗಣೇಶ’, ‘ತರ್ಲೆ ನನ್ಮಗ’, ‘ಶ್’ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದರು. 2012ರಿಂದ ಈಚೆ ಅವರು ಹೆಚ್ಚು ಸಿನಿಮಾಗಳನ್ನು ಮಾಡುತ್ತಿಲ್ಲ. ನಾಟಕ ಹಾಗೂ ಧಾರಾವಾಹಿಗಳಲ್ಲೂ ಅವರು ನಟಿಸಿದ್ದಾರೆ. ಹಾಸ್ಯ ಹಾಗೂ ವಿಲನ್ ಪಾತ್ರಗಳ ಮೂಲಕ ಜನಾರ್ದನ್ ಅವರು ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್