AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ಹೆಸರು; ಫೆ.7ಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟನೆ

ಫೆಬ್ರವರಿ 7ರಂದು ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಸ್ತೆಯನ್ನು ಉದ್ಘಾಟನೆ ಮಾಡಲಿದ್ದಾರೆ.

ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ಹೆಸರು; ಫೆ.7ಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟನೆ
ಬಸವರಾಜ ಬೊಮ್ಮಾಯಿ-ಪುನೀತ್
ರಾಜೇಶ್ ದುಗ್ಗುಮನೆ
|

Updated on: Feb 06, 2023 | 2:04 PM

Share

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ನಿಧನದ ನಂತರದಲ್ಲಿ ಅವರನ್ನು ಬೇರೆ ಬೇರೆ ರೀತಿಯಲ್ಲಿ ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ರಸ್ತೆ, ವೃತ್ತ, ಪಾರ್ಕ್​ಗೆ ಪುನೀತ್ ರಾಜ್​ಕುಮಾರ್ ಅವರ ಹೆಸರನ್ನು ಇಡಲಾಗುತ್ತಿದೆ. ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ಹೆಸರು ಇಡುವ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿತ್ತು. ಮಂಗಳವಾರ (ಫೆ.7) ಈ ರಸ್ತೆ ಉದ್ಘಾಟನೆಗೊಳ್ಳಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಸಚಿವ ಆರ್​. ಅಶೋಕ್ (R Ashok) ಮಾಹಿತಿ ನೀಡಿದ್ದಾರೆ.

ಫೆಬ್ರವರಿ 7ರಂದು ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಸ್ತೆಯನ್ನು ಉದ್ಘಾಟನೆ ಮಾಡಲಿದ್ದಾರೆ. ‘ಪುನೀತ್ ರಾಜ್​ಕುಮಾರ್​ ಸಾಮಾಜಿಕ ಕೆಲಸ ಮಾಡಿದ ಹೃದಯವಂತ. ಕಾರ್ಯಕ್ರಮದಲ್ಲಿ ಶಿವರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಸೇರಿ ಅನೇಕರು ಭಾಗಿ ಆಗುತ್ತಿದ್ದಾರೆ. ಪುನೀತ್ ​ಪತ್ನಿ ಅಶ್ವಿನಿಯವರು ಕೂಡ ಪಾಲ್ಗೊಳ್ಳುತ್ತಾರೆ’ ಎಂದು ಆರ್​.ಅಶೋಕ್ ಹೇಳಿದ್ದಾರೆ.

‘ಪುನೀತ್ ಅವರನ್ನು ಕೆಲವರು ದೇವರು ಅಂತ ಕರೀತಾರೆ. ಜಾಹೀರಾತಿಗೆ ಸ್ಟಾರ್​​ಗಳು ಕೋಟ್ಯಾಂತರ ರೂಪಾಯಿ ತೆಗೆದುಕೊಳ್ಳುತ್ತಾರೆ. ಆದರೆ, ನಮ್ಮ ನಂದಿನಿ ಜಾಹೀರಾತಿಗೆ ಅವರು ಒಂದು ನಯಾಪೈಸಾ ತೆಗೆದುಕೊಂಡಿಲ್ಲ. ಫ್ರೀ ಆಗಿ ರಾಯಬಾರಿ ಆಗಿದ್ರು. ರೈತರ ಬೆನ್ನೆಲುಬಾಗಿ ನಾನು ಉಚಿತವಾಗಿ ಮಾಡ್ತೀನಿ ಅಂದಿದ್ರು. ಅವರ ನೆನಪು ಸದಾ ನಮ್ಮೊಂದಿಗೆ ಇರಬೇಕು ಎನ್ನುವ ಕಾರಣಕ್ಕೆ  ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ಹೆಸರು ಇಡುತ್ತಿದ್ದೇವೆ’ ಎಂದಿದ್ದಾರೆ ಆರ್. ಅಶೋಕ್.

ರೇಸ್​ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರು?

ರೇಸ್​ಕೋರ್ಸ್ ರಸ್ತೆಗೆ ಅಂಬರೀಷ್ ಅವರ ಹೆಸರು ಇಡಬೇಕು ಎಂಬುದು ಅವರ ಅಭಿಮಾನಿಗಳ ಕೋರಿಕೆ. ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಈ ಬಗ್ಗೆ ಮಾತನಾಡಿರುವ ಅಶೋಕ್ ಅವರು, ‘ಅಂಬರೀಷ್ ಅವರಿಗೂ ರೇಸ್​ಕೋರ್ಸ್​ ರಸ್ತೆಗೂ ಅವಿನಾಭಾವ ಸಂಬಂಧ ಇದೆ. ಈ ರಸ್ತೆಗೆ ಅಂಬರೀಷ್ ಹೆಸರು ಇಡಬೇಕು ಎಂಬ ಕೋರಿಕೆ ಬಂದಿದೆ. ಅದನ್ನು ಸಿಎಂಗೆ ತಲುಪಿಸುತ್ತೇನೆ. ಮೇನಲ್ಲಿ ನಾವೇ ಇರ್ತೀವಿ. ಆಗ ನೋಡೋಣ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್