AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಚಿಣ್ಣರ ಚಂದ್ರ’ ಸಿನಿಮಾ ಆಯ್ಕೆ

‘ಚಿಣ್ಣರ ಚಂದ್ರ’ ಸಿನಿಮಾ ಈಗಾಗಲೇ ಮೆಲ್ಬೋರ್ನ್​ ಅಂತರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿ ಅಂತಿಮ ಹಂತ ತಲುಪಿದೆ. ಹೀಗಿರುವಾಗಲೇ ಈ ಸಿನಿಮಾ ಅಹಮದಾಬಾದ್ ಅಂತರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ಆಯ್ಕೆ ಆಗಿದ್ದು ತಂಡದ ಖುಷಿ ಹೆಚ್ಚಿಸಿದೆ.

ಅಂತರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಚಿಣ್ಣರ ಚಂದ್ರ’ ಸಿನಿಮಾ ಆಯ್ಕೆ
ಚಿಣ್ಣರ ಚಂದ್ರ ತಂಡ
ರಾಜೇಶ್ ದುಗ್ಗುಮನೆ
|

Updated on:Nov 18, 2023 | 10:33 AM

Share

ಬರಗೂರು ರಾಮಚಂದ್ರಪ್ಪ (Baraguru Ramachandrappa) ಅವರು ಸಾಹಿತಿಯಾಗಿ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಅವರು ಹಲವು ಕಾದಂಬರಿಗಳನ್ನು ಬರೆದಿದ್ದಾರೆ. ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಅವರ ನಿರ್ದೇಶನದ ಹೊಸ ಸಿನಿಮಾ ‘ಚಿಣ್ಣರ ಚಂದ್ರ’ ಅಹಮದಾಬಾದ್ ಅಂತರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ಆಯ್ಕೆ ಆಗಿದೆ. ‘ಚಿಣ್ಣರ ಚಂದ್ರ’ ಇದು ಮಕ್ಕಳ ಸಿನಿಮಾ. ಈ ಚಿತ್ರ ಈಗ ಅವಾರ್ಡ್ ಗೆಲ್ಲುವ ರೇಸ್​ನಲ್ಲಿದೆ.

‘ಚಿಣ್ಣರ ಚಂದ್ರ’ ಸಿನಿಮಾ ಈಗಾಗಲೇ ಮೆಲ್ಬೋರ್ನ್​ ಅಂತರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿ ಅಂತಿಮ ಹಂತ ತಲುಪಿದೆ. ಹೀಗಿರುವಾಗಲೇ ಈ ಸಿನಿಮಾ ಅಹಮದಾಬಾದ್ ಅಂತರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ಆಯ್ಕೆ ಆಗಿದ್ದು ತಂಡದ ಖುಷಿ ಹೆಚ್ಚಿಸಿದೆ. ಈ ವಿಚಾರವನ್ನು ಬರಗೂರು ರಾಮಚಂದ್ರಪ್ಪ ಅವರು ಹಂಚಿಕೊಂಡಿದ್ದಾರೆ.

‘ಚಿಣ್ಣರ ಚಂದ್ರ’ ಸಿನಿಮಾ ಶಿಕ್ಷಣದ ಮಹತ್ವದ ಬಗ್ಗೆ ಹೇಳುತ್ತದೆ. ಸೌಹಾರ್ದತೆ ಮತ್ತು ಸಮಾನತೆ ಅಗತ್ಯ ಸಮಾಜಕ್ಕೆ ಇದೆ ಎಂಬ ವಿಚಾರವನ್ನು ಮಕ್ಕಳ ಮೂಲಕ ಅಭಿವ್ಯಕ್ತ ಪಡಿಸುವ ಕೆಲಸ ಮಾಡಿದ್ದಾರೆ ಬರಗೂರು ಚಂದ್ರಪ್ಪ.

ಬರಗೂರು ರಾಮಚಂದ್ರಪ್ಪ ಅವರೇ ಬರೆದ ‘ಅಡಗೂಲಜ್ಜಿ’ ಹೆಸರಿನ ಕಾದಂಬರಿ ಆಧರಿಸಿ ‘ಚಿಣ್ಣರ ಚಂದ್ರ’ ಸಿದ್ಧವಾಗಿದೆ. ಈ ಚಿತ್ರವನ್ನು ಜಿ.ಎಸ್ ಗೋವಿಂದರಾಜು (ರಾಜಶೇಖರ್) ನಿರ್ಮಾಣ ಮಾಡಿದ್ದಾರೆ. ಕಲಾವಿದರ ವರ್ಗದಲ್ಲಿ ಆಕಾಂಕ್ಷ್ ಬರಗೂರ್, ಷಡ್ಜ, ನಿಕ್ಷೇಪ, ಈಶಾನ್, ಸುಂದರ್ ರಾಜ್, ಅಭಿನವ್ ನಾಗ್, ರೇಖಾ, ರಾಧ ರಾಮಚಂದ್ರ, ವತ್ಸಲ ಮೋಹನ್, ರಾಘವ, ರಾಜಪ್ಪ ದಳವಾಯಿ, ಸುಂದರರಾಜ್ ಅರಸು, ವೆಂಕಟರಾಜು, ಹಂಸ ಮೊದಲಾದವರು ಇದ್ದಾರೆ.

ಇದನ್ನೂ ಓದಿ: SSE Side B Review: ‘ಸೈಡ್​ ಎ’ ಬಳಿಕ ಮನು, ಪ್ರಿಯಾ ಬದುಕು ಬದಲಾದರೂ ‘ಸೈಡ್​ ಬಿ’ ಲಯ ಬದಲಾಗಿಲ್ಲ

‘ಚಿಣ್ಣರ ಚಂದ್ರ’ ಸಿನಿಮಾ ಶೀಘ್ರವೇ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಇದರ ಜೊತೆಗೆ ರಾಜ್ಯಾದ್ಯಂತ ಶಾಲೆಗಳಲ್ಲಿ ಪ್ರದರ್ಶನ ಮಾಡಲು ಅವರು ಆಲೋಚಿಸಿದ್ದಾರೆ. ಈ ಚಿತ್ರಕ್ಕೆ ಸುರೇಶ್ ಅರಸು ಸಂಕಲನ, ನಾಗರಾಜ್ ಆದವಾನಿ ಛಾಯಾಗ್ರಹಣ, ಶಮಿತ ಮಲ್ನಾಡ್ ಸಂಗೀತ ನಿರ್ದೇಶನ ಇದೆ. ನಟರಾಜ್ ಶಿವ ಮತ್ತು ಪ್ರವೀಣ್ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:14 am, Sat, 18 November 23

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ