AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಚಿಣ್ಣರ ಚಂದ್ರ’ ಸಿನಿಮಾ ಆಯ್ಕೆ

‘ಚಿಣ್ಣರ ಚಂದ್ರ’ ಸಿನಿಮಾ ಈಗಾಗಲೇ ಮೆಲ್ಬೋರ್ನ್​ ಅಂತರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿ ಅಂತಿಮ ಹಂತ ತಲುಪಿದೆ. ಹೀಗಿರುವಾಗಲೇ ಈ ಸಿನಿಮಾ ಅಹಮದಾಬಾದ್ ಅಂತರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ಆಯ್ಕೆ ಆಗಿದ್ದು ತಂಡದ ಖುಷಿ ಹೆಚ್ಚಿಸಿದೆ.

ಅಂತರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಚಿಣ್ಣರ ಚಂದ್ರ’ ಸಿನಿಮಾ ಆಯ್ಕೆ
ಚಿಣ್ಣರ ಚಂದ್ರ ತಂಡ
ರಾಜೇಶ್ ದುಗ್ಗುಮನೆ
|

Updated on:Nov 18, 2023 | 10:33 AM

Share

ಬರಗೂರು ರಾಮಚಂದ್ರಪ್ಪ (Baraguru Ramachandrappa) ಅವರು ಸಾಹಿತಿಯಾಗಿ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಅವರು ಹಲವು ಕಾದಂಬರಿಗಳನ್ನು ಬರೆದಿದ್ದಾರೆ. ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಅವರ ನಿರ್ದೇಶನದ ಹೊಸ ಸಿನಿಮಾ ‘ಚಿಣ್ಣರ ಚಂದ್ರ’ ಅಹಮದಾಬಾದ್ ಅಂತರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ಆಯ್ಕೆ ಆಗಿದೆ. ‘ಚಿಣ್ಣರ ಚಂದ್ರ’ ಇದು ಮಕ್ಕಳ ಸಿನಿಮಾ. ಈ ಚಿತ್ರ ಈಗ ಅವಾರ್ಡ್ ಗೆಲ್ಲುವ ರೇಸ್​ನಲ್ಲಿದೆ.

‘ಚಿಣ್ಣರ ಚಂದ್ರ’ ಸಿನಿಮಾ ಈಗಾಗಲೇ ಮೆಲ್ಬೋರ್ನ್​ ಅಂತರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿ ಅಂತಿಮ ಹಂತ ತಲುಪಿದೆ. ಹೀಗಿರುವಾಗಲೇ ಈ ಸಿನಿಮಾ ಅಹಮದಾಬಾದ್ ಅಂತರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ಆಯ್ಕೆ ಆಗಿದ್ದು ತಂಡದ ಖುಷಿ ಹೆಚ್ಚಿಸಿದೆ. ಈ ವಿಚಾರವನ್ನು ಬರಗೂರು ರಾಮಚಂದ್ರಪ್ಪ ಅವರು ಹಂಚಿಕೊಂಡಿದ್ದಾರೆ.

‘ಚಿಣ್ಣರ ಚಂದ್ರ’ ಸಿನಿಮಾ ಶಿಕ್ಷಣದ ಮಹತ್ವದ ಬಗ್ಗೆ ಹೇಳುತ್ತದೆ. ಸೌಹಾರ್ದತೆ ಮತ್ತು ಸಮಾನತೆ ಅಗತ್ಯ ಸಮಾಜಕ್ಕೆ ಇದೆ ಎಂಬ ವಿಚಾರವನ್ನು ಮಕ್ಕಳ ಮೂಲಕ ಅಭಿವ್ಯಕ್ತ ಪಡಿಸುವ ಕೆಲಸ ಮಾಡಿದ್ದಾರೆ ಬರಗೂರು ಚಂದ್ರಪ್ಪ.

ಬರಗೂರು ರಾಮಚಂದ್ರಪ್ಪ ಅವರೇ ಬರೆದ ‘ಅಡಗೂಲಜ್ಜಿ’ ಹೆಸರಿನ ಕಾದಂಬರಿ ಆಧರಿಸಿ ‘ಚಿಣ್ಣರ ಚಂದ್ರ’ ಸಿದ್ಧವಾಗಿದೆ. ಈ ಚಿತ್ರವನ್ನು ಜಿ.ಎಸ್ ಗೋವಿಂದರಾಜು (ರಾಜಶೇಖರ್) ನಿರ್ಮಾಣ ಮಾಡಿದ್ದಾರೆ. ಕಲಾವಿದರ ವರ್ಗದಲ್ಲಿ ಆಕಾಂಕ್ಷ್ ಬರಗೂರ್, ಷಡ್ಜ, ನಿಕ್ಷೇಪ, ಈಶಾನ್, ಸುಂದರ್ ರಾಜ್, ಅಭಿನವ್ ನಾಗ್, ರೇಖಾ, ರಾಧ ರಾಮಚಂದ್ರ, ವತ್ಸಲ ಮೋಹನ್, ರಾಘವ, ರಾಜಪ್ಪ ದಳವಾಯಿ, ಸುಂದರರಾಜ್ ಅರಸು, ವೆಂಕಟರಾಜು, ಹಂಸ ಮೊದಲಾದವರು ಇದ್ದಾರೆ.

ಇದನ್ನೂ ಓದಿ: SSE Side B Review: ‘ಸೈಡ್​ ಎ’ ಬಳಿಕ ಮನು, ಪ್ರಿಯಾ ಬದುಕು ಬದಲಾದರೂ ‘ಸೈಡ್​ ಬಿ’ ಲಯ ಬದಲಾಗಿಲ್ಲ

‘ಚಿಣ್ಣರ ಚಂದ್ರ’ ಸಿನಿಮಾ ಶೀಘ್ರವೇ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಇದರ ಜೊತೆಗೆ ರಾಜ್ಯಾದ್ಯಂತ ಶಾಲೆಗಳಲ್ಲಿ ಪ್ರದರ್ಶನ ಮಾಡಲು ಅವರು ಆಲೋಚಿಸಿದ್ದಾರೆ. ಈ ಚಿತ್ರಕ್ಕೆ ಸುರೇಶ್ ಅರಸು ಸಂಕಲನ, ನಾಗರಾಜ್ ಆದವಾನಿ ಛಾಯಾಗ್ರಹಣ, ಶಮಿತ ಮಲ್ನಾಡ್ ಸಂಗೀತ ನಿರ್ದೇಶನ ಇದೆ. ನಟರಾಜ್ ಶಿವ ಮತ್ತು ಪ್ರವೀಣ್ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:14 am, Sat, 18 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು