AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರೀಕರಣ ವೇಳೆ ನಿಯಮಗಳನ್ನು ಪಾಲಿಸುತ್ತಿಲ್ಲ, ಕಠಿಣ ನಿಯಮಗಳನ್ನು ಜಾರಿ ಮಾಡಿ ಶೀಘ್ರದಲ್ಲೇ ಆದೇಶ; ಸಿಎಂ ಬಸವರಾಜ ಬೊಮ್ಮಾಯಿ

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿವೆ. ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಇಂತಹ ಘಟನೆ ಮರುಕಳಿಸದಂತೆ ಎಚ್ಚರವಹಿಸಲು ಸೂಚಿಸುತ್ತೇನೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಟಿವಿ9ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಚಿತ್ರೀಕರಣ ವೇಳೆ ನಿಯಮಗಳನ್ನು ಪಾಲಿಸುತ್ತಿಲ್ಲ, ಕಠಿಣ ನಿಯಮಗಳನ್ನು ಜಾರಿ ಮಾಡಿ ಶೀಘ್ರದಲ್ಲೇ ಆದೇಶ; ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Aug 10, 2021 | 11:03 AM

Share

ಬೆಂಗಳೂರು: ನಟ ಅಜಯ್ ರಾವ್ (Ajay Rao) ಮತ್ತ ನಟಿ ರಚಿತಾ ರಮ್ (Rachita Ram) ಅಭಿನಯಿಸುತ್ತಿದ್ದ ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ಫೈಟರ್ ವಿವೇಕ್ ಸಾವನ್ನಪ್ಪಿದ್ದಾರೆ. ಹೈ ವೋಲ್ಟೇಜ್ ತಂತಿ ತಗುಲಿ ನಿನ್ನೆ (ಆಗಸ್ಟ್ 9) ಫೈಟರ್ ವಿವೇಕ್ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂತಹ ಹಲವು ಘಟನೆಗಳು ಬೆಳಕಿಗೆ ಬರುತ್ತಿವೆ. ಚಿತ್ರೀಕರಣ ವೇಳೆ ಕೆಲವರು ನಿಯಮಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿ ಮಾಡುತ್ತೇವೆ. ನಾಳೆ ಅಥವಾ ನಾಡಿದ್ದು ಆದೇಶವನ್ನು ಹೊರಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ಹಿಂದೆಯೂ ಇಂತಹ ಹಲವು ಘಟನೆಗಳು ನಡೆದಿವೆ. ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಇಂತಹ ಘಟನೆ ಮರುಕಳಿಸದಂತೆ ಎಚ್ಚರವಹಿಸಲು ಸೂಚಿಸುತ್ತೇನೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಟಿವಿ9ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅಮಾಯಕರು ಮೃತಪಟ್ಟಾಗ ಮನಸ್ಸಿಗೆ ಬೇಸರವಾಗುತ್ತೆ. ತೆರೆ ಹಿಂದೆ ಏನೇನು ನಡೆಯುತ್ತೆ ಎಂದು ಗೊತ್ತಾಗುವುದಿಲ್ಲ. ಎಷ್ಟು ಡೇಂಜರ್​ನಲ್ಲಿ ಕೆಲಸ ಮಾಡ್ತಿದ್ದಾರೆಂದು ಗೊತ್ತಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಾರೆ. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಅಂತ ಅವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಈ ಪ್ರಕರಣಕೆ ಸಂಬಂಧಿಸಿ ಬಿಡದಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದು, ಐವರ ವಿರುದ್ಧ ಎಫ್ಐಆರ್ ಹಾಕಿದ್ದಾರೆ. ನಿರ್ದೇಶಕ ಶಂಕರ್ ರಾಜ್ ಎ1, ನಿರ್ಮಾಪಕ ಗುರು ದೇಶಪಾಂಡೆ ಎ2, ಚಿತ್ರದ ಸಾಹಸ ನಿರ್ದೇಶಕ ವಿನೋದ್ ಕುಮಾರ್ ಎ3, ಸಿನಿಮಾ ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಎ4 ಹಾಗೂ ಕ್ರೇನ್ ಆಪರೇಟರ್ ಮಹದೇವ್ ಎ5 ಎಂದು ಬಿಡದಿ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಆದರೆ ಘಟನೆ ಬಳಿಕ ಗುರು ದೇಶಪಾಂಡೆ ಮತ್ತು ಪ್ರೊಡಕ್ಷನ್ ಮ್ಯಾನೇಜರ್ ಫರ್ನಾಂಡಿಸ್ ಪರಾರಿ ಆಗಿದ್ದು, ಬಿಡದಿ ಪೊಲೀಸರು ಹುಡುಕುತ್ತಿದ್ದಾರೆ.

ಇದನ್ನೂ ಓದಿ

Love You Racchu: ಫೈಟರ್​ ವಿವೇಕ್​ ಸಾವು; ನಿರ್ದೇಶಕ ಶಂಕರ್​, ಸಾಹಸ ನಿರ್ದೇಶಕ ವಿನೋದ್​ ಪೊಲೀಸರ ವಶಕ್ಕೆ

Fighter Vivek Death: ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ, ಫೈಟರ್ ವಿವೇಕ್ ಸಾವು

(Basavaraja Bommai said strict rules will be issued soon for cinema shooting in Bengaluru)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್