AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್ ಸಾವಿಗೆ ಕಂಬನಿ ಮಿಡಿದ ಅಂತಾರಾಷ್ಟ್ರೀಯ ಸುದ್ದಿವಾಹಿನಿಗಳು

ಪುನೀತ್ ಗಳಿಸಿದ ಪ್ರೀತಿ, ಅಭಿಮಾನಕ್ಕೆ ಇನ್ನೂ ಮುಗಿಯದ ಸಂತಾಪ, ಕಂಠೀರವ ಸ್ಟೇಡಿಯಂ ಸುತ್ತ ಇರುವ ಜನಸಾಗರವೇ ಸಾಕ್ಷಿ. ಪುನೀತ್ ರಾಜ್​ಕುಮಾರ್​ ನಿಧನಕ್ಕೆ ಅಂತಾರಾಷ್ಟ್ರೀಯ ಮಟ್ಟದ ಸುದ್ದಿ ಸಂಸ್ಥೆ, ಬಿಬಿಸಿ ವಾಹಿನಿ ಕೂಡ ಸಂತಾಪ ಸೂಚಿಸಿದೆ.

Puneeth Rajkumar: ಪುನೀತ್ ಸಾವಿಗೆ ಕಂಬನಿ ಮಿಡಿದ ಅಂತಾರಾಷ್ಟ್ರೀಯ ಸುದ್ದಿವಾಹಿನಿಗಳು
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Oct 30, 2021 | 3:49 PM

Share

ಬೆಂಗಳೂರು: ಅಭಿಮಾನಿಗಳ ಪಾಲಿನ ಪ್ರೀತಿಯ ಅಪ್ಪು, ಸದಾ ಹಸನ್ಮುಖಿ, ವಿನಯವಂತ ಪುನೀತ್ ರಾಜ್​ಕುಮಾರ್ ನಿಧನಕ್ಕೆ ಲಕ್ಷಾಂತರ ಮಂದಿ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಗಣ್ಯರು, ದಕ್ಷಿಣ ಭಾರತದ ನಟರು ಮಾತ್ರವಲ್ಲದೆ, ಬಾಲಿವುಡ್ ಮಂದಿ, ಕ್ರಿಕೆಟ್ ಆಟಗಾರರು ಕೂಡ ಪುನೀತ್ ನಿಧನಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಮೊನ್ನೆಯಷ್ಟೇ ಭಜರಂಗಿ 2 ಸಿನಿಮಾ ಪ್ರಿ ರಿಲೀಸ್ ಸಮಾರಂಭದಲ್ಲಿ ಯಶ್, ಶಿವರಾಜ್​ಕುಮಾರ್ ಜೊತೆಗೆ ಪವರ್​ಫುಲ್ ಆಗಿಯೇ ಕಾಣಿಸಿಕೊಂಡಿದ್ದ ಪುನೀತ್, ನಿನ್ನೆ (ಅಕ್ಟೋಬರ್ 29) ಇದ್ದಕ್ಕಿದ್ದಂತೆ ಇನ್ನಿಲ್ಲ ಎಂಬ ಸುದ್ದಿ ಬರಸಿಡಿಲಿನಂತೆ ಬಂದೆರಗಿದೆ. ಪುನೀತ್ ಗಳಿಸಿದ ಪ್ರೀತಿ, ಅಭಿಮಾನಕ್ಕೆ ಇನ್ನೂ ಮುಗಿಯದ ಸಂತಾಪ, ಕಂಠೀರವ ಸ್ಟೇಡಿಯಂ ಸುತ್ತ ಇರುವ ಜನಸಾಗರವೇ ಸಾಕ್ಷಿ.

ಪುನೀತ್ ರಾಜ್​ಕುಮಾರ್​ ನಿಧನಕ್ಕೆ ಅಂತಾರಾಷ್ಟ್ರೀಯ ಮಟ್ಟದ ಸುದ್ದಿ ಸಂಸ್ಥೆ, ಬಿಬಿಸಿ ವಾಹಿನಿ ಕೂಡ ಸಂತಾಪ ಸೂಚಿಸಿದೆ. ಪುನೀತ್ ಅಭಿಮಾನಿಗಳೆಲ್ಲಾ ಶಾಕ್​ನಲ್ಲಿ ಇದ್ದಾರೆ. ದಿನದ ಹಿಂದಷ್ಟೇ ಅವರು ಸ್ಟೇಜ್​ನಲ್ಲಿ ಪರ್ಫಾರ್ಮ್ ಮಾಡಿದ್ದರು. ಅವರಿಗೆ 46 ವರ್ಷ ವಯಸ್ಸಾಗಿತ್ತು. ಅತ್ಯಂತ ಪ್ರತಿಭಾನ್ವಿತ ವ್ಯಕ್ತಿ ಆಗಿದ್ದರು. ಅವರ ನಿಧನದಿಂದ ಇಡೀ ಕರ್ನಾಟಕದಲ್ಲಿ ಶೋಕದ ವಾತಾವರಣ ಇದೆ. ಅಷ್ಟೊಂದು ಸಂಖ್ಯೆಯಲ್ಲಿ ಜನರು ಬರುತ್ತಿರುವುದು, ಆಸ್ಪತ್ರೆ ಆವರಣದಲ್ಲಿ ಜನರು ನಿಂತಿರುವುದು ಅವರ ಬಗ್ಗೆ ಅಭಿಮಾನಿಗಳಿಗೆ ಇದ್ದ ಪ್ರೀತಿ ತೋರಿಸುತ್ತದೆ ಎಂದು ಪರಿಸ್ಥಿತಿಯ ಬಗ್ಗೆ ಬಿಬಿಸಿ ನ್ಯೂಸ್​ನಲ್ಲಿ ಹೇಳಲಾಗಿದೆ.

ಪುನೀತ್ ರಾಜ್​ಕುಮಾರ್ ಸಣ್ಣ ವಯಸ್ಸಿನಲ್ಲೇ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಅವರು ಬಾಲನಟನಾಗಿ, ತಂದೆ ಡಾ. ರಾಜ್​ಕುಮಾರ್ ಜೊತೆಗೆ ಅಭಿನಯಿಸಿದರು. ಕೇವಲ ನಟ ಮಾತ್ರವಲ್ಲದೆ, ಗಾಯಕರಾಗಿ ಕೂಡ ಹೆಸರು ಮಾಡಿದ್ದರು. ಬಹಳಷ್ಟು ಸಾಮಾಜಿಕ ಹಿತ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಪುನೀತ್ ಈಗ ತಂದೆಯಂತೆಯೇ ತಮ್ಮ ನೇತ್ರದಾನ ಮಾಡಿದ್ದಾರೆ. ಈ ಸುದ್ದಿ ನನಗೂ ನಂಬಲು ಕಷ್ಟವಾಗುತ್ತಿದೆ ಎಂದು ಬಿಬಿಸಿ ನ್ಯೂಸ್​ನಲ್ಲಿ ಪ್ರತಿನಿಧಿ ಹೇಳಿದ್ದಾರೆ.

ಇದನ್ನೂ ಓದಿ: Puneeth Rajkumar: ಪುನೀತ್​ಗೆ ಅಂತಿಮ ನಮನ ಸಲ್ಲಿಸಿದ ನಟ ಜ್ಯೂ.ಎನ್​ಟಿಆರ್, ನಿರ್ದೇಶಕ ಪ್ರಶಾಂತ್ ನೀಲ್

ಇದನ್ನೂ ಓದಿ: Puneeth Rajkumar: ತಮ್ಮ ನೆಚ್ಚಿನ ನಟ ಪುನೀತ್ ರಾಜ್​ಕುಮಾರ್​ಗೆ ಅಭಿಮಾನಿಗಳಿಂದ ವಿಭಿನ್ನ ನಮನ

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?