AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ನಟ ಓದಿದ ಶಾಲೆಯಲ್ಲಿ ಬಿಡುಗಡೆ ಆಯ್ತು ‘ಸರ್ಕಾರಿ ಶಾಲೆ H8’ ಸಿನಿಮಾ ಪೋಸ್ಟರ್

‘ಸರ್ಕಾರಿ ಶಾಲೆ H8’ ಸಿನಿಮಾದಲ್ಲಿ ಗಿಲ್ಲಿ ನಟ ಜೊತೆ ಗುಣ ಹರಿಯಬ್ಬೆ, ಮೇಘಶ್ರೀ ಅವರು ನಟಿಸಿದ್ದಾರೆ. ಗಿಲ್ಲಿ ನಟ ಓದಿದ ಸರ್ಕಾರಿ ಶಾಲೆಯಲ್ಲಿ ಅವರ ತಂದೆ, ತಾಯಿ ಈ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು. ಸೆನ್ಸಾರ್ ಪ್ರಕ್ರಿಯೆ ಮುಗಿದಿದ್ದು, 2026ರ ಫೆಬ್ರವರಿಯಲ್ಲಿ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಗಿಲ್ಲಿ ನಟ ಓದಿದ ಶಾಲೆಯಲ್ಲಿ ಬಿಡುಗಡೆ ಆಯ್ತು ‘ಸರ್ಕಾರಿ ಶಾಲೆ H8’ ಸಿನಿಮಾ ಪೋಸ್ಟರ್
Sarkari Shale H8 Poster
ಮದನ್​ ಕುಮಾರ್​
|

Updated on: Dec 09, 2025 | 5:24 PM

Share

ಕಿರುತೆರೆಯಲ್ಲಿ ಅಪಾರ ಜನಪ್ರಿಯತೆ ಪಡೆದ ಗಿಲ್ಲಿ ನಟ (Gilli Nata) ಅವರು ಸಿನಿಮಾಗಳಲ್ಲಿ ಕೂಡ ಬೇಡಿಕೆ ಹೊಂದಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಗಿಲ್ಲಿ ಮಿಂಚಲು ಆರಂಭಿಸಿದ ಬಳಿಕ, ಅವರ ಸಿನಿಮಾಗಳ ಬಗ್ಗೆಯೂ ಕ್ರೇಜ್ ಸೃಷ್ಟಿ ಆಗಿದೆ. ಇತ್ತೀಚೆಗಷ್ಟೇ ಅವರ ‘ಸೂಪರ್ ಹಿಟ್’ ಸಿನಿಮಾದ ಟೀಸರ್ ಬಿಡುಗಡೆ ಆಗಿತ್ತು. ಈಗ ಗಿಲ್ಲಿ ಅಭಿನಯದ ‘ಸರ್ಕಾರಿ ಶಾಲೆ H8’ (Sarkari Shale H8) ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಶೀರ್ಷಿಕೆಯ ಮೂಲಕ ಈ ಸಿನಿಮಾ ಕುತೂಹಲ ಮೂಡಿಸಿದೆ. ಈ ಸಿನಿಮಾದಲ್ಲಿ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಇದೆ ಎಂದು ಚಿತ್ರತಂಡ ಹೇಳಿದೆ.

‘ಸರ್ಕಾರಿ ಶಾಲೆ H8’ ಸಿನಿಮಾದ ಎಲ್ಲ ಕೆಲಸಗಳು ಮುಗಿದಿವೆ. ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡದವರು ಸಿದ್ಧವಾಗಿದ್ದಾರೆ. ಗಿಲ್ಲಿ ನಟ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾಗೆ ಗುಣ ಹರಿಯಬ್ಬೆ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ‘ಗಿರಿಚಂದ್ರ ಪ್ರೊಡಕ್ಷನ್ಸ್’ ಮೂಲಕ ತೇಜಸ್ವಿನಿ ಎಸ್. ಅವರು ‘ಸರ್ಕಾರಿ ಶಾಲೆ H8’ ಸಿನಿಮಾವನ್ನು ನಿರ್ಮಿಸಿದ್ದಾರೆ.

ವಿಶೇಷ ಏನೆಂದರೆ, ‘ಸರ್ಕಾರಿ ಶಾಲೆ H8’ ಸಿನಿಮಾದ ಪೋಸ್ಟರ್ ಅನ್ನು ಇತ್ತಿಚೆಗೆ ಗಿಲ್ಲಿ ನಟ ಅವರ ಊರಾದ ಮಳವಳ್ಳಿ ತಾಲೂಕಿನ ದಡದಪುರದಲ್ಲಿ ಬಿಡುಗಡೆ ಮಾಡಲಾಯಿತು. ಗಿಲ್ಲಿ ನಟ ಓದಿದ ಸರ್ಕಾರಿ ಶಾಲೆಯಲ್ಲಿ ಅವರ ತಂದೆ-ತಾಯಿ ಪೋಸ್ಟರ್ ಬಿಡುಗಡೆ ಮಾಡಿದ್ದು ವಿಶೇಷ. ಈ ಸಿನಿಮಾದಲ್ಲಿ ಗಿಲ್ಲಿ ನಟ, ಗುಣ ಹರಿಯಬ್ಬೆ, ಮೇಘಶ್ರೀ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ.

ರಾಘವೇಂದ್ರ ರಾಜ್​​ಕುಮಾರ್, ಸುಚೇಂದ್ರ ಪ್ರಸಾದ್ , ನವಾಜ್, ಜಗಪ್ಪ, ಸುಶ್ಮಿತಾ ಜಗಪ್ಪ, ಕಡ್ಡಿಪುಡಿ, ಜೋತಿರಾಜ್, ನಮ್ರತಾ ಮುಂತಾದವರು ಕೂಡ ‘ಸರ್ಕಾರಿ ಶಾಲೆ H8’ ಸಿನಿಮಾದಲ್ಲಿ ನಟಿಸಿದ್ದಾರೆ. ರವಿ ರಾಮದುರ್ಗ ಹಾಗೂ ವೀನಸ್ ಮೂರ್ತಿ ಅವರು ಛಾಯಾಗ್ರಹಣ ಮಾಡಿದ್ದಾರೆ. ರವಿತೇಜ ಸಿ.ಹೆಚ್. ಅವರ ಸಂಕಲನ ಈ ಸಿನಿಮಾಗಿದೆ. ವಿಜೇತ್ ಮಂಜಯ್ಯ ಅವರು ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: ಇಡೀ ಕರ್ನಾಟಕದಲ್ಲಿ ಗಿಲ್ಲಿ ಕ್ರೇಜ್: ಎಲಿಮಿನೇಟ್ ಆಗಿ ಬಂದ ಅಭಿಷೇಕ್ ಹೇಳಿದ್ದೇನು?

‘ಕುತೂಹಲ ಕೆರಳಿಸುತ್ತ ಸಾಗುವ ಈ ಸಿನಿಮಾದ ಕಥೆಯು ಒಂದು ವಿಗ್ರಹದ ಮೇಲೆ ನಿಂತಿರುತ್ತೆ‌. ಕಥೆ 4 ಕಡೆಗಳಲ್ಲಿ ಸಾಗುತ್ತದೆ’ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಬೆಂಗಳೂರು, ಚಿತ್ರದುರ್ಗ, ಶಿರಾ, ಶಿವಮೊಗ್ಗ ಸುತ್ತಮುತ್ತ ಶೂಟಿಂಗ್ ಮಾಡಲಾಗಿದೆ. ಈಗಾಗಲೇ ಚಿತ್ರಕ್ಕೆ ಸೆನ್ಸಾರ್ ಪ್ರಕ್ರಿಯೆ ಕೂಡ ಮುಗಿದಿದೆ. 2026ರ ಫೆಬ್ರವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಶರಣ್, ಮೆಹಬೂಬ್ ಸಾಬ್ ಅವರು ಹಾಡುಗಳಿಗೆ ಧ್ವನಿ ನೀಡಿದ್ದಾರೆ. ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!