AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಪ್ 6ನಿಂದ ಧನುಶ್ ಎಲಿಮಿನೇಟ್; ಬಿದ್ದ ವೋಟ್ ಇಷ್ಟೇನಾ?

ಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆ ಆರಂಭವಾಗಿದ್ದು, ಟಾಪ್ 6ರಲ್ಲಿ ಧನುಶ್ ಮೊದಲ ಸ್ಪರ್ಧಿಯಾಗಿ ಎಲಿಮಿನೇಟ್ ಆಗಿದ್ದಾರೆ. ಗೀತಾ ಧಾರಾವಾಹಿ ಖ್ಯಾತಿಯ ಧನುಶ್ ಉತ್ತಮ ಟಾಸ್ಕ್ ಪರ್ಫಾರ್ಮರ್ ಆಗಿದ್ದರೂ, ಮನೆಯಲ್ಲಿ ಸೈಲೆಂಟ್ ಆಗಿದ್ದ ಕಾರಣ ಹೊರಬಂದಿರಬಹುದೆಂದು ಅಂದಾಜಿಸಲಾಗಿದೆ. ಈಗ ಗಿಲ್ಲಿ ನಟ, ರಕ್ಷಿತಾ, ಅಶ್ವಿನಿ, ಕಾವ್ಯಾ, ರಘು ಟಾಪ್ 5ರಲ್ಲಿದ್ದು, ರಾತ್ರಿ ವಿನ್ನರ್ ಘೋಷಣೆ ಆಗಲಿದೆ.

ಟಾಪ್ 6ನಿಂದ ಧನುಶ್ ಎಲಿಮಿನೇಟ್; ಬಿದ್ದ ವೋಟ್ ಇಷ್ಟೇನಾ?
ಧನುಶ್
ರಾಜೇಶ್ ದುಗ್ಗುಮನೆ
|

Updated on: Jan 18, 2026 | 7:14 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಗ್ರ್ಯಾಂಡ್ ಫಿನಾಲೆ ಆರಂಭ ಆಗಿದೆ. ಜನವರಿ 18ರ ಮಧ್ಯಾಹ್ನ ಈ ಪ್ರಕ್ರಿಯೆ ಶುರುವಾಗಿದ್ದು, ಆರು ಗಂಟೆಗೆ ಕಲರ್ಸ್ ಹಾಗೂ ಜಿಯೋ ಹಾಟ್​​ಸ್ಟರ್​ನಲ್ಲಿ ಪ್ರಸಾರ ಆರಂಭ ಆಗಿದೆ. ರಂಗು ರಂಗಾದ ವೇದಿಕೆ ಮೇಲೆ ಸುದೀಪ್ ಅವರು ಆಗಮಿಸಿದರು. ನಂತರ ವಿವಿಧ ರೀತಿಯ ಡ್ಯಾನ್ಸ್ ಕಾರ್ಯಕ್ರಮ ಇತ್ತು. ಕಿಚ್ಚ ಸುದೀಪ್ ಅವರು ಮೊದಲು ಎಲಿಮಿನೇಟ್ ಆದ ವ್ಯಕ್ತಿ ಹೆಸರನ್ನು ಘೋಷಣೆ ಮಾಡಿದರು.

ಸೀಸನ್ 12ರ ಟಾಪ್ 6ರಲ್ಲಿ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಕಾವ್ಯಾ ಶೈವ, ರಘು ಹಾಗೂ ಧನುಶ್ ಇದ್ದರು. ಈ ಪೈಕಿ ಅತಿ ಕಡಿಮೆ ಮತ ಬಿದ್ದಿದ್ದು ಧನಶ್​ಗೆ. ಅವರು ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಅವರು ಎಲಿಮಿನೇಟ್ ಆಗುತ್ತಾರೆ ಎಂದು ಬಹುತೇಕರು ಊಹಿಸಿದ್ದರು.

ಧನುಶ್ ಅವರು ‘ಗೀತಾ’ ಧಾರಾವಾಹಿ ಮೂಲಕ ಫೇಮಸ್ ಆದವರು. ಅವರಿಗೆ ಕಿರುತೆರೆ ಲೋಕದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಉತ್ತಮವಾಗಿ ಡ್ಯಾನ್ಸ್ ಕೂಡ ಮಾಡುತ್ತಾರೆ. ಅವರು ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಉತ್ತಮವಾಗಿ ಆಡುತ್ತಿದ್ದರು. ಟಾಸ್ಕ್ ವಿನ್ ಆಗಿ ಟಾಪ್ 6ಗೆ ಅವರು ಅರ್ಹತೆ ಪಡೆದುಕೊಂಡಿದ್ದರು.

ಧನುಶ್ ಅವರು ಟಾಸ್ಕ್ ಉತ್ತಮವಾಗಿ ಆಡಿದರೂ ಉಳಿದ ಸಮಯದಲ್ಲಿ ಸೈಲೆಂಟ್ ಆಗಿಯೇ ಇರುತ್ತಿದ್ದರು. ಯಾರ ಬಗ್ಗೆಯೂ ಅವರು ಮಾತನಾಡುತ್ತಿರಲಿಲ್ಲ. ಯಾವುದೇ ವಿವಾದ ಬಂದರೂ ದೂರ ಸರಿಯುತ್ತಿದ್ದರು. ಬಿಗ್ ಬಾಸ್​​ನಲ್ಲಿ ಈ ರೀತಿಯ ಗುಣ ಹೆಚ್ಚು ಕೆಲಸಕ್ಕೆ ಬರೋದಿಲ್ಲ. ಅವರು ಹೊರ ಹೋಗಲು ಇದುವೇ ಕಾರಣ ಆಯಿತೇ ಎಂಬ ಪ್ರಶ್ನೆ ಮೂಡಿದೆ. ಅವರಿಗೆ 1 ಕೋಟಿ 27 ಲಕ್ಷ ವೋಟ್ ಬಿದ್ದಿದೆ. ವಿನ್ನರ್ ವೋಟ್ 40 ಕೋಟಿ ಮೇಲಿದೆ. ಹೀಗಾಗಿ, ಅದಕ್ಕೆ ಹೋಲಿಸಿದರೆ ಇದು ಕಡಿಮೆಯೇ.

ಇದನ್ನೂ ಓದಿ: ಟಾಪ್​ 6ನಿಂದ ಒಬ್ಬರು ಔಟ್; ವಿನ್ ನನ್ನ ಹಣೆಯಲ್ಲಿ ಬರೆದಿಲ್ಲ ಎಂದ ಗಿಲ್ಲಿ ಬಿಗ್ ಬಾಸ್​​ನಲ್ಲಿ ಸದ್ಯ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಕಾವ್ಯಾ ಶೈವ, ರಘು ಇದ್ದಾರೆ. ರಾತ್ರಿ ವೇಳೆಗೆ ವಿನ್ನರ್ ಹೆಸರು ಘೋಷಣೆ ಆಗಲಿದೆ. ಈ ಐವರ ಪೈಕಿ ಯಾರು ಕಪ್ ಎತ್ತುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ