AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಬಿಗ್​ ಬಾಸ್ ಸ್ಪರ್ಧಿ ಶ್ರುತಿ ಪ್ರಕಾಶ್​ ನಟನೆಯ ಹೊಸ ಸಿನಿಮಾ ‘ಫ್ರೈಡೇ’

ಶುಕ್ರವಾರಕ್ಕೂ ಈ ಸಿನಿಮಾದ ಕಥೆಗೂ ನಂಟು ಇದೆ. ಆ ಕಾರಣದಿಂದಲೇ ‘ಫ್ರೈಡೇ’ ಎಂದು ಶಿರ್ಷಿಕೆ ಇಡಲಾಗಿದೆ. ಮಧುಸೂದನ್ ಗೋವಿಂದ್, ಶ್ರುತಿ ಪ್ರಕಾಶ್ ಜೊತೆ ಗೋಪಾಲಕೃಷ್ಣ ದೇಶಪಾಂಡೆ ಕೂಡ ಒಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ‌. ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತಾ ಜಂಟಿಯಾಗಿ ನಿರ್ದೇಶನ ಮಾಡುತ್ತಿದ್ದಾರೆ.

ಮಾಜಿ ಬಿಗ್​ ಬಾಸ್ ಸ್ಪರ್ಧಿ ಶ್ರುತಿ ಪ್ರಕಾಶ್​ ನಟನೆಯ ಹೊಸ ಸಿನಿಮಾ ‘ಫ್ರೈಡೇ’
ಫ್ರೈಡೇ ಸಿನಿಮಾ ಮುಹೂರ್ತ ಸಮಾರಂಭ
ಮದನ್​ ಕುಮಾರ್​
|

Updated on: Dec 27, 2023 | 7:02 PM

Share

ನಟಿ ಶ್ರುತಿ ಪ್ರಕಾಶ್ (Shruti Prakash) ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಈಗ ಅವರ ಹೊಸ ಸಿನಿಮಾ ಸೆಟ್ಟೇರಿದೆ. ‘ಮೇಡ್ ಇನ್ ಬೆಂಗಳೂರು’ ಖ್ಯಾತಿಯ ಮಧುಸೂದನ್ ಗೋವಿಂದ್ ಜೊತೆ ಅವರು ಸಿನಿಮಾ ಮಾಡುತ್ತಿದ್ದು, ಆ ಚಿತ್ರಕ್ಕೆ ‘ಫ್ರೈಡೇ’ (Friday) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಮುಹೂರ್ತ ಸಮಾರಂಭ ನಡೆಯಿತು. ಬೆಂಗಳೂರಿನ ಧರ್ಮಗಿರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತು. ಈ ಸಿನಿಮಾ ತಂಡ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

‘ಫ್ರೈಡೇ’ ಚಿತ್ರವನ್ನು ‘Dees Films’ ಮತ್ತು ‘Shoolin Media’ ಸಂಸ್ಥೆಗಳು ಜಂಟಿಯಾಗಿ ನಿರ್ಮಾಣ ಮಾಡುತ್ತಿವೆ. ಮೃತ್ಯುಂಜಯ ಶುಕ್ಲ ಮತ್ತು ಅಲೋಕ್ ಚೌರಾಸಿಯಾ ಅವರು ನಿರ್ಮಾಪಕರು. ‘ಹೊಸ ದಿನಚರಿ’ ಸಿನಿಮಾಗೆ ನಿರ್ದೇಶನ ಮಾಡಿದ್ದ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತಾ ಅವರು ಜಂಟಿಯಾಗಿ ‘ಫ್ರೈಡೇ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕ್ರಿಯೇಟಿವ್ ನಿರ್ಮಾಪಕರಾಗಿ ಗಂಗಾಧರ್ ಸಾಲಿಮಠ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಹೊಸ ಸಿನಿಮಾದಲ್ಲಿ ಜೋಡಿಯಾಗಿ ನಟಿಸಲಿರುವ ನಿವೇದಿತಾ ಗೌಡ, ಚಂದನ್​ ಶೆಟ್ಟಿ

ಶುಕ್ರವಾರಕ್ಕೂ ಈ ಸಿನಿಮಾದ ಕಥೆಗೂ ನಂಟು ಇದೆ. ಆ ಕಾರಣದಿಂದಲೇ ‘ಫ್ರೈಡೇ’ ಎಂದು ಶಿರ್ಷಿಕೆ ಇಡಲಾಗಿದೆ. ‘ಶುಕ್ರವಾರ ಬಿಡುಗಡೆಯಾದ ಹೊಸ ಸಿನಿಮಾವನ್ನು ನೋಡಲು ಹೋದ ದಂಪತಿಯ ಬದುಕಿನಲ್ಲಿ ನಡೆಯಬಾರದ ಘಟನೆ ನಡೆಯುತ್ತದೆ. ಅದು ಈ ಚಿತ್ರದ ಕಥಾಹಂದರ’ ಎಂದು ಚಿತ್ರತಂಡದವರು ಕುತೂಹಲ ಮೂಡಿಸಿದ್ದಾರೆ. ಮಧುಸೂದನ್ ಗೋವಿಂದ್, ಶ್ರುತಿ ಪ್ರಕಾಶ್ ಜೊತೆ ಗೋಪಾಲಕೃಷ್ಣ ದೇಶಪಾಂಡೆ ಕೂಡ ಒಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ‌.

ಇದನ್ನೂ ಓದಿ: ಉತ್ತರ ಕರ್ನಾಟಕ ಸಂಸ್ಕೃತಿ, ಜೀವನ ಪರಿಚಯಿಸುವ ‘ದೇಸಾಯಿ’

‘ಫ್ರೈಡೇ’ ಸಿನಿಮಾಗೆ ಜನವರಿ ಮೊದಲ ವಾರದಲ್ಲಿ ಶೂಟಿಂಗ್​ ಆರಂಭ ಆಗಲಿದೆ. ಈ ಚಿತ್ರದಲ್ಲಿ ಸಸ್ಪೆನ್ಸ್-ಥ್ರಿಲ್ಲರ್ ಕಥಾಹಂದರ ಇರಲಿದೆ. ಸಿನಿಮಾದ ಮೂರು ಹಾಡುಗಳಿಗೆ ಅಶ್ವಿನ್ ಹೇಮಂತ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸಂದೀಪ್ ವಲ್ಲೂರಿ ಅವರು ಛಾಯಾಗ್ರಹಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಕನ್ನಡ ಮತ್ತು ಹಿಂದಿಯಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ