AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಅನಧಿಕೃತವಾಗಿ ಪುನೀತ್ ಪುತ್ಥಳಿ ಪ್ರತಿಷ್ಠಾಪಿಸಬೇಡಿ, ಅನುಮತಿ ಪಡೆಯಿರಿ: ಅಭಿಮಾನಿಗಳಿಗೆ ಬಿಬಿಎಂಪಿ ಸೂಚನೆ

BBMP: ಬೆಂಗಳೂರಿನಲ್ಲಿ ಪುನೀತ್ ಪುತ್ಥಳಿ ಸ್ಥಾಪಿಸಲು ಅಭಿಮಾನಿಗಳು ಮುಂದಾಗಿರುವ ಬೆನ್ನಲ್ಲೇ, ಬಿಬಿಎಂಪಿ ಅನಧಿಕೃತವಾಗಿ ಪುತ್ಥಳಿ ಸ್ಥಾಪಿಸದಂತೆ ಮನವಿ ಮಾಡಿದೆ.

Puneeth Rajkumar: ಅನಧಿಕೃತವಾಗಿ ಪುನೀತ್ ಪುತ್ಥಳಿ ಪ್ರತಿಷ್ಠಾಪಿಸಬೇಡಿ, ಅನುಮತಿ ಪಡೆಯಿರಿ: ಅಭಿಮಾನಿಗಳಿಗೆ ಬಿಬಿಎಂಪಿ ಸೂಚನೆ
ಪುನೀತ್ ರಾಜ್​​ಕುಮಾರ್
TV9 Web
| Edited By: |

Updated on:Nov 06, 2021 | 9:47 AM

Share

ಬೆಂಗಳೂರಿನಲ್ಲಿ ನಟ ಪುನೀತ್ ಪುತ್ಥಳಿ ಪ್ರತಿಷ್ಠಾಪನೆಗೆ ಸಿದ್ಧತೆ ಅಭಿಮಾನಿಗಳು ಸಿದ್ಧತೆ ನಡೆಸಿದ್ದು, ಪುತ್ಥಳಿ ಪ್ರತಿಷ್ಠಾಪನೆಗೆ ಸ್ಥಳ ಗುರುತು ಮಾಡಿದ್ದಾರೆ. ಈ ನಡುವೆ ಬಿಬಿಎಂಪಿ ಫ್ಯಾನ್ಸ್ ಬಳಿ ಮನವಿ ಮಾಡಿಕೊಂಡಿದ್ದು, ಅನಧಿಕೃತವಾಗಿ ಪುತ್ಥಳಿ ಪ್ರತಿಷ್ಠಾಪಿಸದಂತೆ ಕೋರಿಕೊಂಡಿದೆ. ಅನಧಿಕೃತ ಪುತ್ಥಳಿ ತೆರವಿಗೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ , ಅನುಮತಿ ಪಡೆಯದೆ ಯಾವುದೇ ಪುತ್ಥಳಿ ಸ್ಥಾಪಿಸುವಂತಿಲ್ಲ. ಹೀಗಾಗಿ ಬಿಬಿಎಂಪಿ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಪುತ್ಥಳಿ ಇಡದಂತೆ ಸೂಚನೆ ನೀಡಲಾಗಿದ್ದು, ಫುಟ್ ಪಾತ್, ಸಾರ್ವಜನಿಕರು ಓಡಾಡೋ ಸ್ಥಳ, ವಾಹನ ಸಂಚಾರಕ್ಕೆ ಅಡ್ಡಿಯಾಗದಂತಹ ಸ್ಥಳ ಗುರುತಿಸಲು ಸೂಚನೆ ನೀಡಲಾಗಿದೆ.

ರಾಜ್ಯದ 550 ಚಿತ್ರಮಂದಿರಗಳಲ್ಲಿ ನಾಳೆ ಪುನೀತ್ ನಮನ: ಅಕಾಲಿಕ ನಿಧನದಿಂದ ದೂರವಾದ ನಟ ಪುನೀತ್ ರಾಜಕುಮಾರ್ ಅವರಿಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳು ನಮನ ಸಲ್ಲಿಸಲಿವೆ. ನಾಳೆ ಸಂಜೆ 6ಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರಿಂದ ಪುನೀತ್​ಗೆ ನಮನ ಸಲ್ಲಿಸಲಾಗುವುದು. ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ನಟ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಚಿತ್ರಮಂದಿರಗಳಲ್ಲಿ ಮೊಂಬತ್ತಿ ಹಚ್ಚಿ ಪುನೀತ್‌ಗೆ ದೀಪಾಂಜಲಿ ನಡೆಸಲಾಗುವುದು. ನಂತರ ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಾಗುವುದು. ಈ ಮೂಲಕ ಥಿಯೇಟರ್ ಸಿಬ್ಬಂದಿ, ಅಭಿಮಾನಿಗಳು ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

ದಾವಣಗೆರೆ: ದೀಪಾವಳಿ ಹಿರಿಯರ ಹಬ್ಬದಲ್ಲಿ ಪುನೀತ್ ಫೊಟೋವಿಟ್ಟು ಪೂಜೆ ದಾವಣಗೆರೆಯ ಪುನೀತ್ ಅಭಿಮಾನಿ ಶಂಕರ್ ಅವರು ದೀಪಾವಳಿ ಹಿರಿಯರ ಹಬ್ಬದಲ್ಲಿ ಪುನೀತ್ ಪೋಟೋ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಪುನೀತ್ ಅಪ್ಪಟ ಆಭಿಮಾನಿಯಾಗಿರುವ ಶಂಕರ್, ಮನೆಯಲ್ಲಿ ಹಿರಿಯರ ಹಬ್ಬ ಮಾಡುವಾಗ ಮೃತಪಟ್ಟ ಅಕ್ಕ ಭಾವನ ಪೋಟೋ ಜೊತೆ ಪುನೀತ್ ಪೋಟೋ ಕೂಡ ಇಟ್ಟಿದ್ದಾರೆ. ದೀಪಾವಳಿ ಹಬ್ಬದಂದು ಮೃತಪಟ್ಟ ಕುಟುಂಬಸ್ಥರ ಪೋಟೋ ಇಟ್ಟು ಪೂಜೆ ಮಾಡುವುದು ವಾಡಿಕೆ. ಪುನೀತ್ ತಮ್ಮ ಕುಟುಂಬದ ಸದಸ್ಯ ಎಂದುಕೊಂಡು, ಮನೆ ಮಂದಿಯಲ್ಲಾ ಸೇರಿ ಪುನೀತ್​ಗೆ ಪೂಜೆ ಸಲ್ಲಿಸಿದ್ದಾರೆ.

‘ಪುನೀತ ನಮನ’ ಕಾರ್ಯಕ್ರಮಕ್ಕೆ ಇಂದು ಸಭೆ: ನವೆಂಬರ್ 16ರಂದು ‘ಪುನೀತ ನಮನ’ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಸಿದ್ಧತೆ ಬಗ್ಗೆ ಚರ್ಚಿಸಲು ಇಂದು ಸಭೆ ನಡೆಯಲಿದೆ. ಬೆಳಗ್ಗೆ 11.30ರ ನಂತರ ಕಾರ್ಯಕಾರಿಣಿ ಸಭೆ ಆರಂಭಗೊಳ್ಳಲಿದೆ. ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಯಲಿದ್ದು, ಕಾರ್ಯಕ್ರಮಕ್ಕೆ ಯಾವ್ಯಾವ ಗಣ್ಯರನ್ನು ಆಹ್ವಾನಿಸಬೇಕು. ಹೇಗೆ ಕಾರ್ಯಕ್ರಮ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯಲ್ಲಿ ಪ್ರದರ್ಶಕರ ವಲಯ, ನಿರ್ಮಾಪಕರ ವಲಯ ಹಾಗೂ ವಿತರಕರ ವಲಯದ ಅಧ್ಯಕ್ಷರು ಭಾಗಿಯಾಗಲಿದ್ದಾರೆ.

ಇಂದು ಕೂಡ ಪುನೀತ್ ದರ್ಶನಕ್ಕೆ ಸಾಲುಕಟ್ಟಿ ನಿಂತ ಅಭಿಮಾನಿಗಳು: ನಟ ಪುನೀತ್ ರಾಜ್‌ಕುಮಾರ್ ನಿಧನರಾಗಿ ಇಂದಿಗೆ 9 ದಿನವಾಗಿದ್ದು, ಅಭಿಮಾನಿಗಳು ರಾಜ್ಯದ ವಿವಿಧ ಭಾಗದಿಂದ ಆಗಮಿಸಿ, ಅಪ್ಪು ಸಮಾಧಿಯ ದರ್ಶನ ಪಡೆಯುತ್ತಿದ್ದಾರೆ. ನಿನ್ನೆ ಮಳೆಯ ನಡುವೆಯೂ ಅಭಿಮಾನಿಗಳು ನಿಂತು ಸಮಾಧಿ ದರ್ಶನ ಪಡೆದಿದ್ದರು. ಇಂದು ಕೂಡ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಮಾಧಿ ಇದ್ದು, ಬೆಳಗ್ಗೆ 9ರಿಂದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Published On - 9:46 am, Sat, 6 November 21

Follow Us
Web contact
Web contact

TV9 Kannada

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು