AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಅನಧಿಕೃತವಾಗಿ ಪುನೀತ್ ಪುತ್ಥಳಿ ಪ್ರತಿಷ್ಠಾಪಿಸಬೇಡಿ, ಅನುಮತಿ ಪಡೆಯಿರಿ: ಅಭಿಮಾನಿಗಳಿಗೆ ಬಿಬಿಎಂಪಿ ಸೂಚನೆ

BBMP: ಬೆಂಗಳೂರಿನಲ್ಲಿ ಪುನೀತ್ ಪುತ್ಥಳಿ ಸ್ಥಾಪಿಸಲು ಅಭಿಮಾನಿಗಳು ಮುಂದಾಗಿರುವ ಬೆನ್ನಲ್ಲೇ, ಬಿಬಿಎಂಪಿ ಅನಧಿಕೃತವಾಗಿ ಪುತ್ಥಳಿ ಸ್ಥಾಪಿಸದಂತೆ ಮನವಿ ಮಾಡಿದೆ.

Puneeth Rajkumar: ಅನಧಿಕೃತವಾಗಿ ಪುನೀತ್ ಪುತ್ಥಳಿ ಪ್ರತಿಷ್ಠಾಪಿಸಬೇಡಿ, ಅನುಮತಿ ಪಡೆಯಿರಿ: ಅಭಿಮಾನಿಗಳಿಗೆ ಬಿಬಿಎಂಪಿ ಸೂಚನೆ
ಪುನೀತ್ ರಾಜ್​​ಕುಮಾರ್
Follow us
TV9 Web
| Updated By: shivaprasad.hs

Updated on:Nov 06, 2021 | 9:47 AM

ಬೆಂಗಳೂರಿನಲ್ಲಿ ನಟ ಪುನೀತ್ ಪುತ್ಥಳಿ ಪ್ರತಿಷ್ಠಾಪನೆಗೆ ಸಿದ್ಧತೆ ಅಭಿಮಾನಿಗಳು ಸಿದ್ಧತೆ ನಡೆಸಿದ್ದು, ಪುತ್ಥಳಿ ಪ್ರತಿಷ್ಠಾಪನೆಗೆ ಸ್ಥಳ ಗುರುತು ಮಾಡಿದ್ದಾರೆ. ಈ ನಡುವೆ ಬಿಬಿಎಂಪಿ ಫ್ಯಾನ್ಸ್ ಬಳಿ ಮನವಿ ಮಾಡಿಕೊಂಡಿದ್ದು, ಅನಧಿಕೃತವಾಗಿ ಪುತ್ಥಳಿ ಪ್ರತಿಷ್ಠಾಪಿಸದಂತೆ ಕೋರಿಕೊಂಡಿದೆ. ಅನಧಿಕೃತ ಪುತ್ಥಳಿ ತೆರವಿಗೆ ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ , ಅನುಮತಿ ಪಡೆಯದೆ ಯಾವುದೇ ಪುತ್ಥಳಿ ಸ್ಥಾಪಿಸುವಂತಿಲ್ಲ. ಹೀಗಾಗಿ ಬಿಬಿಎಂಪಿ ಅನುಮತಿ ಪಡೆಯುವಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಪುತ್ಥಳಿ ಇಡದಂತೆ ಸೂಚನೆ ನೀಡಲಾಗಿದ್ದು, ಫುಟ್ ಪಾತ್, ಸಾರ್ವಜನಿಕರು ಓಡಾಡೋ ಸ್ಥಳ, ವಾಹನ ಸಂಚಾರಕ್ಕೆ ಅಡ್ಡಿಯಾಗದಂತಹ ಸ್ಥಳ ಗುರುತಿಸಲು ಸೂಚನೆ ನೀಡಲಾಗಿದೆ.

ರಾಜ್ಯದ 550 ಚಿತ್ರಮಂದಿರಗಳಲ್ಲಿ ನಾಳೆ ಪುನೀತ್ ನಮನ: ಅಕಾಲಿಕ ನಿಧನದಿಂದ ದೂರವಾದ ನಟ ಪುನೀತ್ ರಾಜಕುಮಾರ್ ಅವರಿಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳು ನಮನ ಸಲ್ಲಿಸಲಿವೆ. ನಾಳೆ ಸಂಜೆ 6ಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರಿಂದ ಪುನೀತ್​ಗೆ ನಮನ ಸಲ್ಲಿಸಲಾಗುವುದು. ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ನಟ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಚಿತ್ರಮಂದಿರಗಳಲ್ಲಿ ಮೊಂಬತ್ತಿ ಹಚ್ಚಿ ಪುನೀತ್‌ಗೆ ದೀಪಾಂಜಲಿ ನಡೆಸಲಾಗುವುದು. ನಂತರ ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಾಗುವುದು. ಈ ಮೂಲಕ ಥಿಯೇಟರ್ ಸಿಬ್ಬಂದಿ, ಅಭಿಮಾನಿಗಳು ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

ದಾವಣಗೆರೆ: ದೀಪಾವಳಿ ಹಿರಿಯರ ಹಬ್ಬದಲ್ಲಿ ಪುನೀತ್ ಫೊಟೋವಿಟ್ಟು ಪೂಜೆ ದಾವಣಗೆರೆಯ ಪುನೀತ್ ಅಭಿಮಾನಿ ಶಂಕರ್ ಅವರು ದೀಪಾವಳಿ ಹಿರಿಯರ ಹಬ್ಬದಲ್ಲಿ ಪುನೀತ್ ಪೋಟೋ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಪುನೀತ್ ಅಪ್ಪಟ ಆಭಿಮಾನಿಯಾಗಿರುವ ಶಂಕರ್, ಮನೆಯಲ್ಲಿ ಹಿರಿಯರ ಹಬ್ಬ ಮಾಡುವಾಗ ಮೃತಪಟ್ಟ ಅಕ್ಕ ಭಾವನ ಪೋಟೋ ಜೊತೆ ಪುನೀತ್ ಪೋಟೋ ಕೂಡ ಇಟ್ಟಿದ್ದಾರೆ. ದೀಪಾವಳಿ ಹಬ್ಬದಂದು ಮೃತಪಟ್ಟ ಕುಟುಂಬಸ್ಥರ ಪೋಟೋ ಇಟ್ಟು ಪೂಜೆ ಮಾಡುವುದು ವಾಡಿಕೆ. ಪುನೀತ್ ತಮ್ಮ ಕುಟುಂಬದ ಸದಸ್ಯ ಎಂದುಕೊಂಡು, ಮನೆ ಮಂದಿಯಲ್ಲಾ ಸೇರಿ ಪುನೀತ್​ಗೆ ಪೂಜೆ ಸಲ್ಲಿಸಿದ್ದಾರೆ.

‘ಪುನೀತ ನಮನ’ ಕಾರ್ಯಕ್ರಮಕ್ಕೆ ಇಂದು ಸಭೆ: ನವೆಂಬರ್ 16ರಂದು ‘ಪುನೀತ ನಮನ’ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಸಿದ್ಧತೆ ಬಗ್ಗೆ ಚರ್ಚಿಸಲು ಇಂದು ಸಭೆ ನಡೆಯಲಿದೆ. ಬೆಳಗ್ಗೆ 11.30ರ ನಂತರ ಕಾರ್ಯಕಾರಿಣಿ ಸಭೆ ಆರಂಭಗೊಳ್ಳಲಿದೆ. ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಯಲಿದ್ದು, ಕಾರ್ಯಕ್ರಮಕ್ಕೆ ಯಾವ್ಯಾವ ಗಣ್ಯರನ್ನು ಆಹ್ವಾನಿಸಬೇಕು. ಹೇಗೆ ಕಾರ್ಯಕ್ರಮ ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯಲ್ಲಿ ಪ್ರದರ್ಶಕರ ವಲಯ, ನಿರ್ಮಾಪಕರ ವಲಯ ಹಾಗೂ ವಿತರಕರ ವಲಯದ ಅಧ್ಯಕ್ಷರು ಭಾಗಿಯಾಗಲಿದ್ದಾರೆ.

ಇಂದು ಕೂಡ ಪುನೀತ್ ದರ್ಶನಕ್ಕೆ ಸಾಲುಕಟ್ಟಿ ನಿಂತ ಅಭಿಮಾನಿಗಳು: ನಟ ಪುನೀತ್ ರಾಜ್‌ಕುಮಾರ್ ನಿಧನರಾಗಿ ಇಂದಿಗೆ 9 ದಿನವಾಗಿದ್ದು, ಅಭಿಮಾನಿಗಳು ರಾಜ್ಯದ ವಿವಿಧ ಭಾಗದಿಂದ ಆಗಮಿಸಿ, ಅಪ್ಪು ಸಮಾಧಿಯ ದರ್ಶನ ಪಡೆಯುತ್ತಿದ್ದಾರೆ. ನಿನ್ನೆ ಮಳೆಯ ನಡುವೆಯೂ ಅಭಿಮಾನಿಗಳು ನಿಂತು ಸಮಾಧಿ ದರ್ಶನ ಪಡೆದಿದ್ದರು. ಇಂದು ಕೂಡ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸಮಾಧಿ ಇದ್ದು, ಬೆಳಗ್ಗೆ 9ರಿಂದ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Published On - 9:46 am, Sat, 6 November 21

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ