Rashmika Mandanna: ರಶ್ಮಿಕಾ ಮಂದಣ್ಣ ರಿಜೆಕ್ಟ್ ಮಾಡಿದ್ದ ಈ ಸಿನಿಮಾಗಳು ಸೋತಿದ್ದು ಹಾಗೀಗಲ್ಲ

ಇತ್ತೀಚೆಗೆ ತೆರೆಗೆ ಬಂದ ತೆಲುಗಿನ ‘ಆಚಾರ್ಯ’ ಸಿನಿಮಾ ಸೋತಿದೆ. ಈ ಚಿತ್ರದಲ್ಲಿ ಪೂಜಾ ಹೆಗ್ಡೆ ಬದಲು ರಶ್ಮಿಕಾ ನಟಿಸಬೇಕಿತ್ತು. ಆದರೆ, ಡೇಟ್ಸ್ ಹೊಂದಿಸಲು ಸಾಧ್ಯವಾಗದ ಕಾರಣ ಚಿತ್ರವನ್ನು ಅವರು ರಿಜೆಕ್ಟ್ ಮಾಡಿದ್ದರು.

Rashmika Mandanna: ರಶ್ಮಿಕಾ ಮಂದಣ್ಣ ರಿಜೆಕ್ಟ್ ಮಾಡಿದ್ದ ಈ ಸಿನಿಮಾಗಳು ಸೋತಿದ್ದು ಹಾಗೀಗಲ್ಲ
ರಶ್ಮಿಕಾ
Follow us
| Updated By: ರಾಜೇಶ್ ದುಗ್ಗುಮನೆ

Updated on:Apr 30, 2022 | 9:47 PM

ನಟಿ ರಶ್ಮಿಕಾ ಮಂದಣ್ಣ ಅವರು (Rashmika Mandanna) ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ. ಹೆಚ್ಚು ಸಂಭಾವನೆ ಸಿಗುತ್ತದೆ ಎನ್ನುವ ಕಾರಣಕ್ಕೆ ಅವರು ಎಂದಿಗೂ ಸಿನಿಮಾ ಒಪ್ಪಿಕೊಂಡವರಲ್ಲ. ಪಾತ್ರ ಹಾಗೂ ಸಿನಿಮಾಗೆ ತೂಕವಿದ್ದರೆ ಮಾತ್ರ ಅವರು ಪ್ರಾಜೆಕ್ಟ್ ಓಕೆ ಮಾಡುತ್ತಾರೆ. ಇಲ್ಲವಾದರೆ, ಅದೆಷ್ಟೇ ದೊಡ್ಡ ಡೈರೆಕ್ಟರ್ ಇರಲಿ ಅಥವಾ ಹೀರೋ ಇರಲಿ ಅವರು ನೋ ಎನ್ನಲು ಮುಲಾಜು ಮಾಡಿಕೊಳ್ಳುವುದೇ ಇಲ್ಲ. ಇತ್ತೀಚೆಗೆ ತೆರೆಗೆ ಬಂದ ತೆಲುಗಿನ ‘ಆಚಾರ್ಯ’ ಸಿನಿಮಾ  (Acharya Movie) ಸೋತಿದೆ. ಈ ಚಿತ್ರದಲ್ಲಿ ಪೂಜಾ ಹೆಗ್ಡೆ ಬದಲು ರಶ್ಮಿಕಾ ನಟಿಸಬೇಕಿತ್ತು. ಆದರೆ, ಡೇಟ್ಸ್ ಹೊಂದಿಸಲು ಸಾಧ್ಯವಾಗದ ಕಾರಣ ಚಿತ್ರವನ್ನು ಅವರು ರಿಜೆಕ್ಟ್ ಮಾಡಿದ್ದರು. ಇದಲ್ಲದೆ, ಅವರು ರಿಜೆಕ್ಟ್ ಮಾಡಿದ ಇನ್ನೂ ಕೆಲ ಸಿನಿಮಾಗಳು ಸೋತಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಆಚಾರ್ಯ: ‘ಆಚಾರ್ಯ’ ಸಿನಿಮಾದಲ್ಲಿ ನಟಿಸಲು ರಶ್ಮಿಕಾಗೆ ಆಫರ್ ನೀಡುವಂತೆ ‘ಮೆಗಾಸ್ಟಾರ್​’ ಚಿರಂಜೀವಿ ಸೂಚಿಸಿದ್ದರು. ಆದರೆ, ಅವರು ಡೇಟ್​ ಕಾರಣದಿಂದ ಸಿನಿಮಾ ರಿಜೆಕ್ಟ್ ಮಾಡಿದ್ದರು. ಇದು ರಶ್ಮಿಕಾಗೆ ವರದಾನವಾಗಿದೆ. ಈ ಸಿನಿಮಾ ಸೋತಿದೆ. ಅಲ್ಲದೆ, ಹೀರೋಯಿನ್ ಪಾತ್ರಕ್ಕೆ ಅಷ್ಟಾಗಿ ತೂಕವಿಲ್ಲ.

‘ಜೆರ್ಸಿ’: ಹಿಂದಿಯಲ್ಲಿ ತೆರೆಗೆ ಬಂದ ‘ಜೆರ್ಸಿ’ ಸಿನಿಮಾ ತೆಲುಗು ‘ಜೆರ್ಸಿ’ ಚಿತ್ರದ ರಿಮೇಕ್. ಈ ಸಿನಿಮಾ ಟಾಲಿವುಡ್​ನಲ್ಲಿ ಸದ್ದು ಮಾಡಿತ್ತು. ಆದರೆ, ಈ ಚಿತ್ರ ಬಾಲಿವುಡ್​ನಲ್ಲಿ ಸೋತಿದೆ. ಈ ಸಿನಿಮಾವನ್ನು ರಶ್ಮಿಕಾ ರಿಜೆಕ್ಟ್ ಮಾಡಿದ್ದರು.

ಬೀಸ್ಟ್: ತಮಿಳಿನ ‘ಬೀಸ್ಟ್’ ಸಿನಿಮಾ ಏಪ್ರಿಲ್ 13ರಂದು ತೆರೆಗೆ ಬಂದಿತ್ತು. ಈ ಸಿನಿಮಾ ಕೂಡ ಮಕಾಡೆ ಮಲಗಿದೆ. ಈ ಚಿತ್ರದಲ್ಲಿ ಪೂಜಾ ಹೆಗ್ಡೆ ಬದಲು ರಶ್ಮಿಕಾ ನಟಿಸಬೇಕಿತ್ತು. ಆದರೆ, ಹಲವು ಕಾರಣಗಳಿಂದ ರಶ್ಮಿಕಾ ಈ ಚಿತ್ರವನ್ನು ರಿಜೆಕ್ಟ್ ಮಾಡಿದ್ದರು.

ಕೈಯಲ್ಲಿರುವ ಸಿನಿಮಾಗಳು:

ರಶ್ಮಿಕಾ ಮಂದಣ್ಣ ಅವರು ಸದ್ಯ ಹಲವು ಪ್ರಾಜೆಕ್ಟ್​ಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಮಿಷನ್​ ಮಜ್ನು’ ಸಿನಿಮಾದಲ್ಲಿ ರಶ್ಮಿಕಾ ಅವರು ಸಿದ್ದಾರ್ಥ್ ಮಲ್ಹೋತ್ರಾಗೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಅಮಿತಾಭ್​ ಬಚ್ಚನ್ ಅಭಿನಯದ ‘ಗುಡ್ ಬೈ’ ಚಿತ್ರದಲ್ಲಿ ರಶ್ಮಿಕಾ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ವಿಜಯ್ ಸೇತುಪತಿ ಮುಂದಿನ ಚಿತ್ರದಲ್ಲಿ, ದುಲ್ಖರ್ ಸಲ್ಮಾನ್ ನಟನೆಯ ಚಿತ್ರದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ‘ಪುಷ್ಪ 2’ ಚಿತ್ರದ ಕೆಲಸಗಳು ಇನ್ನಷ್ಟೇ ಆರಂಭವಾಗಬೇಕಿದೆ.

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಮದ್ಯದ ಕಂಪನಿ ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ; ಹಿಗ್ಗಾಮುಗ್ಗಾ ಟ್ರೋಲ್ ಆದ ನಟಿ

ಶೀಘ್ರವೇ ಆರಂಭಗೊಳ್ಳಲಿದೆ ‘ಕಾಫಿ ವಿತ್ ಕರಣ್’ ಶೋ; ಅತಿಥಿಯಾಗಿ ಬರಲಿದ್ದಾರೆ ರಶ್ಮಿಕಾ ಮಂದಣ್ಣ

Published On - 9:47 pm, Sat, 30 April 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ