AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್ 2’ ಚಿತ್ರಕ್ಕೂ ಮೊದಲೇ ಬರಲಿದೆ ‘ಕೆಜಿಎಫ್ 3; ಜೂನಿಯರ್ ಎನ್​ಟಿಆರ್ ಸಿನಿಮಾ ಮತ್ತಷ್ಟು ವಿಳಂಬ?

ಪ್ರಶಾಂತ್ ನೀಲ್ ಅವರಿಗೆ ‘ಕೆಜಿಎಫ್ 2’ ಚಿತ್ರದ ಬಗ್ಗೆ ವಿಶೇಷ ಪ್ರೀತಿ ಇದೆ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಲು ಈ ಸಿನಿಮಾ ಕಾರಣ. ಪ್ರಶಾಂತ್ ನೀಲ್ ಅವರು ‘ಕೆಜಿಎಫ್ 3’ ಚಿತ್ರಕ್ಕೂ ನಿರ್ದೇಶನ ಮಾಡಲಿದ್ದಾರೆ ಎಂಬುದು ‘ಕೆಜಿಎಫ್ 2’ ಕ್ಲೈಮ್ಯಾಕ್ಸ್​​ನಲ್ಲಿ ರಿವೀಲ್ ಆಗಿತ್ತು. ಈಗ ಈ ಕುರಿತು ಹೊಸ ಸುದ್ದಿ ಹರಿದಾಡಿದೆ.

‘ಸಲಾರ್ 2’ ಚಿತ್ರಕ್ಕೂ ಮೊದಲೇ ಬರಲಿದೆ ‘ಕೆಜಿಎಫ್ 3; ಜೂನಿಯರ್ ಎನ್​ಟಿಆರ್ ಸಿನಿಮಾ ಮತ್ತಷ್ಟು ವಿಳಂಬ?
ಯಶ್-ಪ್ರಭಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Aug 15, 2023 | 8:10 AM

Share

ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಅವರು ಸಾಲು ಸಾಲು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ಮುಂದೆ ಹಲವು ಸಿನಿಮಾಗಳಿವೆ. ಸದ್ಯ ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ಪ್ರಶಾಂತ್ ನೀಲ್ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಸೃಷ್ಟಿ ಆಗಿದೆ. ಈ ಮಧ್ಯೆ ‘ಕೆಜಿಎಫ್ 3’ (KGF 3 Movie) ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ‘ಸಲಾರ್ 2’ ಸಿನಿಮಾ ಕೆಲಸಗಳಿಗೂ ಮೊದಲೇ ‘ಕೆಜಿಎಫ್ 3’ ಚಿತ್ರದ ಕೆಲಸ ಆರಂಭ ಆಗಲಿದೆ ಎಂದು ವರದಿ ಆಗಿದೆ.

ಪ್ರಶಾಂತ್ ನೀಲ್ ಅವರಿಗೆ ‘ಕೆಜಿಎಫ್ 2’ ಚಿತ್ರದ ಬಗ್ಗೆ ವಿಶೇಷ ಪ್ರೀತಿ ಇದೆ. ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಲು ಈ ಸಿನಿಮಾ ಕಾರಣ. ಪ್ರಶಾಂತ್ ನೀಲ್ ಅವರು ‘ಕೆಜಿಎಫ್ 3’ ಚಿತ್ರಕ್ಕೂ ನಿರ್ದೇಶನ ಮಾಡಲಿದ್ದಾರೆ ಎಂಬುದು ‘ಕೆಜಿಎಫ್ 2’ ಕ್ಲೈಮ್ಯಾಕ್ಸ್​​ನಲ್ಲಿ ರಿವೀಲ್ ಆಗಿತ್ತು. ಈಗ ಈ ಕುರಿತು ಹೊಸ ಸುದ್ದಿ ಹರಿದಾಡಿದೆ. ಈ ವಿಚಾರದ ಬಗ್ಗೆ ಅವರ ಕಡೆಯಿಂದಲೇ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

‘ಸಲಾರ್’ ಮೊದಲ ಗ್ಲಿಂಪ್ಸ್​ನ ಇತ್ತೀಚೆಗೆ ಬಿಡುಗಡೆ ಮಾಡಲಾಯಿತು. ‘ಸಲಾರ್: ಪಾರ್ಟ್ 1-ಸೀಸ್​ಫೈರ್’ ಎಂದು ಈ ಚಿತ್ರಕ್ಕೆ ಶೀರ್ಷಿಕೆ ನೀಡಲಾಗಿದೆ. ಈ ಮೂಲಕ ಎರಡು ಪಾರ್ಟ್​ಗಳಲ್ಲಿ ಸಿನಿಮಾ ಮೂಡಿಬರಲಿದೆ ಎಂಬುದನ್ನು ತಂಡ ಖಚಿತಪಡಿಸಿದೆ. ಈಗ ಕೇಳಿ ಬರುತ್ತಿವೆ ಲೇಟೆಸ್ಟ್ ಮಾಹಿತಿ ಎಂದರೆ , ‘ಕೆಜಿಎಫ್ 3’ ಬಳಿಕವೇ ‘ಸಲಾರ್ 2’ ಸಿನಿಮಾ ಕೆಲಸಗಳು ಆರಂಭ ಆಗಲಿವೆಯಂತೆ.

‘ಕೆಜಿಎಫ್ 2’ ಚಿತ್ರದ ಕಥೆಗೂ ‘ಕೆಜಿಎಫ್ 3’ ಕಥೆಗೂ ಲಿಂಕ್ ಇದೆ. ಹೆಚ್ಚು ವಿಳಂಬ ಮಾಡಿದರೆ ಜನರಿಗೆ ಈ ಸರಣಿ ಮೇಲೆ ಆಸಕ್ತಿ ಹೊರಟು ಹೋಗುವ ಸಾಧ್ಯತೆ ಇರುತ್ತದೆ. ಈ ಕಾರಣಕ್ಕೆ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯವರು ‘ಕೆಜಿಎಫ್ 3’ ಕಡೆ ಗಮನ ಹರಿಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: KGF 2: ಇತಿಹಾಸ ಸೃಷ್ಟಿಸಿದ ಕೆಜಿಎಫ್ 2 ಸಿನಿಮಾಕ್ಕೆ ಒಂದು ವರ್ಷ, ಕಲೆಕ್ಷನ್ ಮಾತ್ರ ದಾಖಲೆಯಲ್ಲ

ಪ್ರಶಾಂತ್ ನೀಲ್ ಅವರು ಜೂನಿಯರ್ ಎನ್​ಟಿಆರ್ ಜೊತೆಗೂ ಒಂದು ಸಿನಿಮಾ ಮಾಡಬೇಕಿದೆ. ಇದು ಘೋಷಣೆ ಆಗಿ ಬಹಳ ಸಮಯ ಕಳೆದಿದೆ. ಆದರೆ, ಜೂನಿಯರ್​ ಎನ್​ಟಿಆರ್ ಅವರ ಕಾಲ್​ಶೀಟ್​ ಸದ್ಯಕ್ಕಂತೂ ಸಿಗುವ ಚಾನ್ಸ್ ಕಡಿಮೆ. ಅವರು ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ, ‘ಸಲಾರ್’ ರಿಲೀಸ್ ಆದ ಬಳಿಕ ಪ್ರಶಾಂತ್ ನೀಲ್ ಅವರು ‘ಕೆಜಿಎಫ್ 3’ ಚಿತ್ರದ ಕೆಲಸದಲ್ಲಿ ತೊಡಗಿಕೊಳ್ಳಲಿದ್ದಾರಂತೆ.

ಸಲಾರ್ ಸಿನಿಮಾ ಸೆಪ್ಟೆಂಬರ್ 28ರಂದು ರಿಲೀಸ್ ಆಗಲಿದೆ. ಈ ಮೊದಲೇ ಹೇಳಿದಂತೆ ‘ಕೆಜಿಎಫ್ 2’ ಚಿತ್ರಕ್ಕೂ ‘ಸಲಾರ್’ ಚಿತ್ರಕ್ಕೂ ಲಿಂಕ್ ಇದೆ ಎಂದು ಮೊದಲ ಗ್ಲಿಂಪ್ಸ್ ನೋಡಿದವರಿಗೆ ಅನುಮಾನ ಮೂಡಿದೆ. ಟ್ರೇಲರ್ ಅಥವಾ ಟೀಸರ್ ರಿಲೀಸ್ ಆದರೆ ಈ ಬಗ್ಗೆ ಸ್ಪಷ್ಟನೆ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:08 am, Tue, 15 August 23

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?