AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಕವಿ K ಕಲ್ಯಾಣ್​ ದಾಂಪತ್ಯದಲ್ಲಿ ಬಿರುಕು, ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ

ಬೆಳಗಾವಿ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್​ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ಇದೀಗ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಚಿತ್ರಸಾಹಿತಿಯ ದೂರಿನ ಮೇರೆಗೆ ಸೆಪ್ಟೆಂಬರ್ 30ರಂದು FIR ದಾಖಲಾಗಿತ್ತು. ಕಲ್ಯಾಣ್​ ದೂರಿನ ಮೇರೆಗೆ ಅವರ ಪತ್ನಿ ಅಶ್ವಿನಿಯನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ. ಜೊತೆಗೆ, ಪೊಲೀಸರು ಅಶ್ವಿನಿಯಿಂದ ಮಾಹಿತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಆಸ್ತಿಗೋಸ್ಕರ K ಕಲ್ಯಾಣ್ ನನ್ನನ್ನು ಮದುವೆ […]

ಪ್ರೇಮಕವಿ K ಕಲ್ಯಾಣ್​ ದಾಂಪತ್ಯದಲ್ಲಿ ಬಿರುಕು, ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ
KUSHAL V
|

Updated on:Oct 03, 2020 | 7:28 PM

Share

ಬೆಳಗಾವಿ: ಪ್ರೇಮಕವಿ ಹಾಗೂ ಖ್ಯಾತ ಚಿತ್ರಸಾಹಿತಿ ಕೆ.ಕಲ್ಯಾಣ್​ ದಾಂಪತ್ಯದಲ್ಲಿ ಬಿರುಕು ಮೂಡಿದ್ದು ಇದೀಗ ದಂಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ ಎಂದು ತಿಳಿದುಬಂದಿದೆ.

ತಮ್ಮ ಪತ್ನಿ ಅಶ್ವಿನಿ ಕಿಡ್ನಾಪ್ ಆಗಿದ್ದಾರೆಂದು ಕೆ.ಕಲ್ಯಾಣ್ ನಗರದ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು. ಚಿತ್ರಸಾಹಿತಿಯ ದೂರಿನ ಮೇರೆಗೆ ಸೆಪ್ಟೆಂಬರ್ 30ರಂದು FIR ದಾಖಲಾಗಿತ್ತು. ಕಲ್ಯಾಣ್​ ದೂರಿನ ಮೇರೆಗೆ ಅವರ ಪತ್ನಿ ಅಶ್ವಿನಿಯನ್ನು ಪೊಲೀಸರು ಠಾಣೆಗೆ ಕರೆತಂದಿದ್ದಾರೆ. ಜೊತೆಗೆ, ಪೊಲೀಸರು ಅಶ್ವಿನಿಯಿಂದ ಮಾಹಿತಿ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಆಸ್ತಿಗೋಸ್ಕರ K ಕಲ್ಯಾಣ್ ನನ್ನನ್ನು ಮದುವೆ ಆಗಿದ್ದಾರೆ -ಪ್ರೇಮಕವಿ ವಿರುದ್ಧ ಪತ್ನಿ ಪ್ರತಿದೂರು ಕಲ್ಯಾಣ್​ ದೈಹಿಕ ಹಿಂಸೆ ನೀಡ್ತಿದ್ದಾರೆ, ನನಗೆ ವಿಚ್ಛೇದನ ಬೇಕು: ಕೋರ್ಟ್​ ಮೊರೆಹೋದ ಪ್ರೇಮಕವಿ ಪತ್ನಿ

ಕೆ.ಕಲ್ಯಾಣ್​ರ ಪತ್ನಿ ಅಶ್ವಿನಿಯನ್ನು ಆಕೆಯ ಪೋಷಕರು ಪುಸಲಾಯಿಸಿ ಅಪಹರಣ ಮಾಡಿದ್ದರು ಎಂದು ಸಾಹಿತಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು. ಜೊತೆಗೆ, ಅಶ್ವಿನಿ ಅಕೌಂಟ್‌ನಿಂದ 19 ಲಕ್ಷ ರೂಪಾಯಿ ಹಣವನ್ನು ಆಕೆಯ ಪೋಷಕರು ತಮ್ಮ ಅಕೌಂಟ್‌ಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಕಲ್ಯಾಣ್​ ಆರೋಪಿಸಿದ್ದಾರೆ. ಇದಲ್ಲದೆ, ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಡಗಿ ಗ್ರಾಮದವರಾದ ತಮ್ಮ ಪತ್ನಿಯ ಸಂಬಂಧಿಗಳಾದ ಶಿವಾನಂದ ವಾಲಿ ಹಾಗೂ ಗಂಗಾ ಕುಲಕರ್ಣಿ ವಿರುದ್ಧ ಕಲ್ಯಾಣ್​ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿಯನ್ನು ಪೊಲೀಸರು ಮಾಳಮಾರುತಿ ಠಾಣೆಗೆ ಕರೆತಂದು ಮಾಹಿತಿ ಪಡೆಯುತ್ತಿದ್ದಾರೆ. ಜೊತೆಗೆ, ಆರೋಪಿ ಶಿವಾನಂದ ವಾಲಿಯನ್ನು ಸಹ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Published On - 5:51 pm, Sat, 3 October 20

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು