AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belakina Kavithe: 3 ಮಿಲಿಯನ್​ ವೀಕ್ಷಣೆ ಕಂಡ ‘ಬೆಳಕಿನ ಕವಿತೆ’; ಝೈದ್​ ಖಾನ್​-ಸೋನಲ್​ ರೊಮ್ಯಾನ್ಸ್​ಗೆ ಫ್ಯಾನ್ಸ್​ ಫಿದಾ

Banaras Movie Songs: ‘ಬನಾರಸ್​’ ಚಿತ್ರದ ಹಾಡುಗಳಿಗೆ ಈ ಪರಿ ಮೆಚ್ಚುಗೆ ಸಿಕ್ಕಿರುವುದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ. ಸಿನಿಪ್ರಿಯರಲ್ಲಿ ‘ಬೆಳಕಿನ ಕವಿತೆ..’ ಸಾಂಗ್​ ಒಂದು ಬಗೆಯ ಸೆನ್ಸೇಷನ್​ ಸೃಷ್ಟಿ ಮಾಡಿದೆ.

Belakina Kavithe: 3 ಮಿಲಿಯನ್​ ವೀಕ್ಷಣೆ ಕಂಡ ‘ಬೆಳಕಿನ ಕವಿತೆ’; ಝೈದ್​ ಖಾನ್​-ಸೋನಲ್​ ರೊಮ್ಯಾನ್ಸ್​ಗೆ ಫ್ಯಾನ್ಸ್​ ಫಿದಾ
ಝೈದ್ ಖಾನ್, ಸೋನಲ್ ಮಾಂಥೆರೋ
Follow us
TV9 Web
| Updated By: ಮದನ್​ ಕುಮಾರ್​

Updated on:Nov 11, 2022 | 1:53 PM

ಹೊಸ ಹೀರೋ ಝೈದ್​ ಖಾನ್​ (Zaid Khan) ಅಭಿನಯಿಸಿರುವ ‘ಬನಾರಸ್​’ ಸಿನಿಮಾ ನವೆಂಬರ್​ 4ರಂದು ಬಿಡುಗಡೆಯಾಗಿ ಉತ್ತಮ ವಿಮರ್ಶೆ ಪಡೆದುಕೊಂಡಿದೆ. ಸಿನಿಪ್ರಿಯರು ಝೈದ್​ ಖಾನ್​ ನಟನೆಗೆ ಮೆಚ್ಚುಗೆ ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ, ಈ ಸಿನಿಮಾದ ಹಾಡುಗಳು ಸೂಪರ್​ ಹಿಟ್​ ಆಗಿವೆ. ‘ಬನಾರಸ್​’ (Banaras) ಚಿತ್ರಕ್ಕೆ ಅಜನೀಶ್​ ಬಿ. ಲೋಕನಾಥ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಮೆಲೋಡಿ ಸಾಂಗ್ಸ್​ ನೀಡುವಲ್ಲಿ ಫೇಮಸ್​ ಆಗಿರುವ ಅವರು ‘ಮಾಯಗಂಗೆ..’ ಮತ್ತು ‘ಬೆಳಕಿನ ಕವಿತೆ..’ (Belakina Kavithe) ಹಾಡುಗಳ ಮೂಲಕ ‘ಬನಾರಸ್​’ ಸಿನಿಮಾದ ಮೆರುಗು ಹೆಚ್ಚಿಸಿದ್ದಾರೆ. ಈ ಸಿನಿಮಾದ ಹಾಡುಗಳು ಮಿಲಿಯನ್​ಗಟ್ಟಲೆ ವೀವ್ಸ್​ ಪಡೆದು ಮುನ್ನುಗ್ಗುತ್ತಿವೆ. ಇದರಿಂದ ಚಿತ್ರದ ಮೈಲೇಜ್​ ಹೆಚ್ಚಲು ಸಹಕಾರಿ ಆಗಿದೆ. ಝೈದ್​ ಖಾನ್​ ಮತ್ತು ಸೋನಲ್​ ಮಾಂಥೆರೋ ಅವರ ಕೆಮಿಸ್ಟ್ರಿ ಕೂಡ ಚೆನ್ನಾಗಿ ಮೂಡಿಬಂದಿದೆ.

ಮೊದಲು ಬಿಡುಗಡೆಯಾದ ‘ಮಾಯಗಂಗೆ..’ ಹಾಡು ಕನ್ನಡ ವರ್ಷನ್​ನಲ್ಲಿ ಈವರೆಗೆ 4.5 ಮಿಲಿಯನ್​ ಬಾರಿ ವೀಕ್ಷಣೆ ಕಂಡಿದೆ. ಅದೇ ರೀತಿ, ‘ಬೆಳಕಿನ ಕವಿತೆ..’ ಹಾಡಿಗೆ 3 ಮಿಲಿಯನ್​ ವೀವ್ಸ್​ ಆಗಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ. ಎಲ್ಲ ಭಾಷೆಯಲ್ಲಿಯೂ ಹಾಡುಗಳನ್ನು ರಿಲೀಸ್​ ಮಾಡಲಾಗಿದೆ. ‘ಬೆಳಕಿನ ಕವಿತೆ..’ ಹಾಡಿನ ಎಲ್ಲ ಭಾಷೆಯ ವರ್ಷನ್​ಗಳನ್ನು ಸೇರಿಸಿದರೆ 7 ಮಿಲಿಯನ್​​ಗಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.

‘ಬನಾರಸ್​’ ಹಾಡುಗಳಿಗೆ ಈ ಪರಿ ಮೆಚ್ಚುಗೆ ಸಿಕ್ಕಿರುವುದು ಚಿತ್ರತಂಡದ ಸಂತಸಕ್ಕೆ ಕಾರಣ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ‘ಬೆಳಕಿನ ಕವಿತೆ..’ ಒಂದು ಬಗೆಯ ಸೆನ್ಸೇಷನ್​ ಸೃಷ್ಟಿ ಮಾಡಿದೆ. ಎಲ್ಲರ ರೀಲ್ಸ್​ನಲ್ಲಿ ಈ ಹಾಡು ರಾರಾಜಿಸುತ್ತಿದೆ. ತುಂಬ ರೊಮ್ಯಾಂಟಿಕ್​ ಆಗಿ ಈ ಗೀತೆ ಮೂಡಿಬಂದಿದೆ. ಸೋನಲ್​ ಮಾಂಥೆರೋ ಹಾಗೂ ಝೈದ್​ ಖಾನ್​ ಕಾಂಬಿನೇಷನ್​ ಕಂಡು ಸಿನಿಪ್ರಿಯರು ವಾವ್​ ಎಂದಿದ್ದಾರೆ.

ಇದನ್ನೂ ಓದಿ
Image
Banaras: ಶಾರುಖ್​ ಅಥವಾ ಸಲ್ಮಾನ್​.. ಇಬ್ಬರಲ್ಲಿ ಝೈದ್​ ಖಾನ್​ಗೆ ಹೆಚ್ಚು ಇಷ್ಟ ಯಾರು? ಉತ್ತರಿಸಿದ ಜಮೀರ್​ ಪುತ್ರ
Image
Zaid Khan: ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಜಮೀರ್​ ಪುತ್ರ ಝೈದ್​ ಖಾನ್​ ಭೇಟಿ; ‘ಬನಾರಸ್​​’ ಬಿಡುಗಡೆಗೆ ಸಜ್ಜು
Image
Zaid Khan: ಗಣೇಶೋತ್ಸವ ಸಂಭ್ರಮದಲ್ಲಿ ಭಾಗಿಯಾದ ಜಮೀರ್​ ಅಹ್ಮದ್​ ಪುತ್ರ, ‘ಬನಾರಸ್​’ ಹೀರೋ ಝೈದ್​ ಖಾನ್​
Image
Banaras: ಜಮೀರ್​ ಅಹ್ಮದ್​ ಪುತ್ರ ಜೈದ್​ ಖಾನ್​ ಬದ್ಧತೆಗೆ ಭೇಷ್​ ಎಂದ ‘ಬನಾರಸ್​’ ನಿರ್ದೇಶಕ ಜಯತೀರ್ಥ

ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳ ಮೂಲಕ ಅಜನೀಶ್​ ಲೋಕನಾಥ್​ ಅವರು ಶೈನ್​ ಆಗುತ್ತಿದ್ದಾರೆ. ಅವರ ಸೂಪರ್​ ಹಿಟ್​ ಆಲ್ಬಂಗಳ ಸಾಲಿಗೆ ‘ಬನಾರಸ್​’ ಕೂಡ ಸೇರಿಕೊಂಡಿದೆ. ನಾಗೇಂದ್ರ ಪ್ರಸಾದ್​ ಅವರ ಸಾಹಿತ್ಯ, ಎ. ಹರ್ಷ ಕೊರಿಯೋಗ್ರಫಿ, ಅರುಣ್​ ಸಾಗರ್​ ಅವರ ಕಲಾ ನಿರ್ದೇಶನದ ಸಂಗಮದಿಂದಾಗಿ ಈ ಹಾಡಿನ ಮೆರುಗು ಇನ್ನಷ್ಟು ಹೆಚ್ಚಿದೆ.

ಸಂಚಿತ್ ಹೆಗಡೆ, ಸಂಗೀತಾ ರವೀಂದ್ರನಾಥ್​ ಅವರು ‘ಬೆಳಕಿನ ಕವಿತೆ..’ ಹಾಡಿಗೆ ಧ್ವನಿ ನೀಡಿದ್ದಾರೆ. ಯೂಟ್ಯೂಬ್​ನಲ್ಲಿ ಹಾಡು ನೋಡಿದ ಸಾವಿರಾರು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ. ಎಲ್ಲರಿಂದಲೂ ಪಾಸಿಟಿವ್​ ಮಾತುಗಳು ಕೇಳಿಬಂದಿವೆ. ಈ ಚಿತ್ರಕ್ಕೆ ಜಯತೀರ್ಥ ನಿರ್ದೇಶನ ಮಾಡಿದ್ದು, ತಿಲಕ್​ ರಾಜ್​ ಬಲ್ಲಾಳ್​ ಬಂಡವಾಳ ಹೂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:53 pm, Fri, 11 November 22

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್