AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿ ದರ್ಶನ್​ಗೆ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ನೀಡಲು ಸಿಕ್ತು ಅನುಮತಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ಗೆ ಆರೋಗ್ಯ ಸಮಸ್ಯೆ ಇರುವ ಕಾರಣದಿಂದ ಸರ್ಜಿಕಲ್​ ಚೇರ್​ ಬೇಕು ಎಂದು ಮನವಿ ಮಾಡಲಾಗಿತ್ತು. ಬಳ್ಳಾರಿ ಜೈಲಿಗೆ ಶಿಫ್ಟ್​ ಆಗುತ್ತಿದ್ದಂತೆಯೇ ದರ್ಶನ್​ ಮನವಿ ಸಲ್ಲಿಸಿದ್ದರು. ವೈದ್ಯರ ವರದಿಗಳನ್ನು ಪರಿಶೀಲಿಸಿದ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಡೆಯಿಂದ ಸರ್ಜಿಕಲ್​ ಚೇರ್​ ನೀಡಲಾಗುತ್ತಿದೆ.

ಆರೋಪಿ ದರ್ಶನ್​ಗೆ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ನೀಡಲು ಸಿಕ್ತು ಅನುಮತಿ
ದರ್ಶನ್​
ವಿನಾಯಕ ಬಡಿಗೇರ್​
| Edited By: |

Updated on:Sep 03, 2024 | 3:05 PM

Share

ನಟ ದರ್ಶನ್​ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ಬೇಕು ಎಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯರು ತಪಾಸಣೆ ನಡೆಸಿ ವರದಿ ನೀಡಿದ್ದರು. ವೈದ್ಯರ ವರದಿಗಳನ್ನು ಪರಿಶೀಲಿಸಿದ ಬಳಿಕ ಸರ್ಜಿಕಲ್ ಚೇರ್​ ನೀಡಲು ಅನುಮತಿ ಸಿಕ್ಕಿದೆ. ಇದಕ್ಕಾಗಿ ಎರಡು ವರದಿಗಳನ್ನು ಪರಿಶೀಲಿಸಲಾಗಿತ್ತು. ದರ್ಶನ್​ ಕುಟುಂಬಸ್ಥರು ನೀಡಿದ ವರದಿ ಹಾಗೂ ಪರಪ್ಪನ ಅಗ್ರಹಾರ ಜೈಲಿನಿಂದ ಕೊಟ್ಟ ವರದಿಯನ್ನೂ ಪರಿಶೀಲಿಸಿದ ಬಳಿಕ ನಟನಿಗೆ ಸರ್ಜಿಕಲ್​ ನೀಡಲು ಅಪ್ರೂವಲ್​ ಸಿಕ್ಕಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ದರ್ಶನ್​ಗೆ ಸರ್ಜಿಕಲ್​ ಚೇರ್​ ನೀಡಲು ಸಿದ್ಧತೆ ನಡೆದಿದೆ. ಬಳ್ಳಾರಿ ಜೈಲಿನಲ್ಲಿ ವೈದ್ಯರು ದರ್ಶನ್​ಗೆ ಹೆಲ್ತ್ ಚೆಕಪ್ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ದರ್ಶನ್​ ಎ2 ಆಗಿದ್ದು, ಪೊಲೀಸರು ಚಾರ್ಜ್​ಶೀಟ್​ ಸಲ್ಲಿಸುವ ತಯಾರಿಯಲ್ಲಿದ್ದಾರೆ. ತನಿಖೆ ಕೊನೇ ಹಂತದಲ್ಲಿದೆ.

ಪರಪ್ಪನ ಅಗ್ರಹಾರದಲ್ಲಿ ಇದ್ದಾಗ ದರ್ಶನ್​ ವಿವಿಧ ಸವಲತ್ತುಗಳನ್ನು ಪಡೆದುಕೊಂಡಿದ್ದರು. ತಮ್ಮ ಪ್ರಭಾವ ಬಳಸಿ ವಿಐಪಿ ಟ್ರೀಟ್​ಮೆಂಟ್​ ಪಡೆದುಕೊಂಡರು. ಅದಕ್ಕೆ ಸಾಕ್ಷಿ ಎಂಬಂತೆ ಫೋಟೋ ಮತ್ತು ವಿಡಿಯೋಗಳು ವೈರಲ್​ ಆದವು. ಆ ಬಳಿಕ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಶಿಫ್ಟ್​ ಮಾಡಲಾಯಿತು.

ಇದನ್ನೂ ಓದಿ: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್​; ಬಳ್ಳಾರಿ ಜೈಲಿನಲ್ಲಿ ವೈದ್ಯರಿಂದ ಆರೋಗ್ಯ ತಪಾಸಣೆ

ದರ್ಶನ್​ಗೆ ಆರೋಗ್ಯ ಸಮಸ್ಯೆ ಇದೆ. ಜೈಲು ಸೇರುವುದಕ್ಕೂ ಮುನ್ನ ಅವರ ಕೈಗೆ ಸರ್ಜರಿ ಆಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ ತೂಕ ಕಳೆದುಕೊಳ್ಳುತ್ತಿದ್ದಾರೆ ಎನ್ನಲಾಗಿತ್ತು. ಹಾಗಾಗಿ ಮನೆ ಊಟಕ್ಕೆ ಮನವಿ ಮಾಡಿದ್ದರು. ಆದರೆ ಜೈಲಿನ ನಿಯಮ ಉಲ್ಲಂಘನೆ ಮಾಡಿದ ವಿಷಯ ಬಹಿರಂಗ ಆದಾಗ ಅನಾರೋಗ್ಯದ ಬಗ್ಗೆ ಅನುಮಾನ ಮೂಡಿವಂತಾಯಿತು.

ಇದು ಹೈ-ಪ್ರೊಫೈಲ್​ ಕೇಸ್​ ಆದ್ದರಿಂದ ತನಿಖೆಯ ಪ್ರತಿ ಹಂತದ ಮೇಲೆ ಕಣ್ಣು ಇಡಲಾಗಿದೆ. ದರ್ಶನ್​ ಬಳ್ಳಾರಿ ಜೈಲಿಗೆ ಸ್ಥಳಾಂತರ ಆಗುವಾಗ ಅವರ ಕೂಲಿಂಗ್​ ಗ್ಲಾಸ್​ ಧರಿಸಿದ್ದಕ್ಕೆ ಕೂಡ ಆಕ್ಷೇಪ ವ್ಯಕ್ತವಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:36 pm, Mon, 2 September 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್