AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿ ದರ್ಶನ್​ಗೆ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ನೀಡಲು ಸಿಕ್ತು ಅನುಮತಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ಗೆ ಆರೋಗ್ಯ ಸಮಸ್ಯೆ ಇರುವ ಕಾರಣದಿಂದ ಸರ್ಜಿಕಲ್​ ಚೇರ್​ ಬೇಕು ಎಂದು ಮನವಿ ಮಾಡಲಾಗಿತ್ತು. ಬಳ್ಳಾರಿ ಜೈಲಿಗೆ ಶಿಫ್ಟ್​ ಆಗುತ್ತಿದ್ದಂತೆಯೇ ದರ್ಶನ್​ ಮನವಿ ಸಲ್ಲಿಸಿದ್ದರು. ವೈದ್ಯರ ವರದಿಗಳನ್ನು ಪರಿಶೀಲಿಸಿದ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಡೆಯಿಂದ ಸರ್ಜಿಕಲ್​ ಚೇರ್​ ನೀಡಲಾಗುತ್ತಿದೆ.

ಆರೋಪಿ ದರ್ಶನ್​ಗೆ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ನೀಡಲು ಸಿಕ್ತು ಅನುಮತಿ
ದರ್ಶನ್​
ವಿನಾಯಕ ಬಡಿಗೇರ್​
| Edited By: |

Updated on:Sep 03, 2024 | 3:05 PM

Share

ನಟ ದರ್ಶನ್​ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ಬೇಕು ಎಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯರು ತಪಾಸಣೆ ನಡೆಸಿ ವರದಿ ನೀಡಿದ್ದರು. ವೈದ್ಯರ ವರದಿಗಳನ್ನು ಪರಿಶೀಲಿಸಿದ ಬಳಿಕ ಸರ್ಜಿಕಲ್ ಚೇರ್​ ನೀಡಲು ಅನುಮತಿ ಸಿಕ್ಕಿದೆ. ಇದಕ್ಕಾಗಿ ಎರಡು ವರದಿಗಳನ್ನು ಪರಿಶೀಲಿಸಲಾಗಿತ್ತು. ದರ್ಶನ್​ ಕುಟುಂಬಸ್ಥರು ನೀಡಿದ ವರದಿ ಹಾಗೂ ಪರಪ್ಪನ ಅಗ್ರಹಾರ ಜೈಲಿನಿಂದ ಕೊಟ್ಟ ವರದಿಯನ್ನೂ ಪರಿಶೀಲಿಸಿದ ಬಳಿಕ ನಟನಿಗೆ ಸರ್ಜಿಕಲ್​ ನೀಡಲು ಅಪ್ರೂವಲ್​ ಸಿಕ್ಕಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ದರ್ಶನ್​ಗೆ ಸರ್ಜಿಕಲ್​ ಚೇರ್​ ನೀಡಲು ಸಿದ್ಧತೆ ನಡೆದಿದೆ. ಬಳ್ಳಾರಿ ಜೈಲಿನಲ್ಲಿ ವೈದ್ಯರು ದರ್ಶನ್​ಗೆ ಹೆಲ್ತ್ ಚೆಕಪ್ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ದರ್ಶನ್​ ಎ2 ಆಗಿದ್ದು, ಪೊಲೀಸರು ಚಾರ್ಜ್​ಶೀಟ್​ ಸಲ್ಲಿಸುವ ತಯಾರಿಯಲ್ಲಿದ್ದಾರೆ. ತನಿಖೆ ಕೊನೇ ಹಂತದಲ್ಲಿದೆ.

ಪರಪ್ಪನ ಅಗ್ರಹಾರದಲ್ಲಿ ಇದ್ದಾಗ ದರ್ಶನ್​ ವಿವಿಧ ಸವಲತ್ತುಗಳನ್ನು ಪಡೆದುಕೊಂಡಿದ್ದರು. ತಮ್ಮ ಪ್ರಭಾವ ಬಳಸಿ ವಿಐಪಿ ಟ್ರೀಟ್​ಮೆಂಟ್​ ಪಡೆದುಕೊಂಡರು. ಅದಕ್ಕೆ ಸಾಕ್ಷಿ ಎಂಬಂತೆ ಫೋಟೋ ಮತ್ತು ವಿಡಿಯೋಗಳು ವೈರಲ್​ ಆದವು. ಆ ಬಳಿಕ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಶಿಫ್ಟ್​ ಮಾಡಲಾಯಿತು.

ಇದನ್ನೂ ಓದಿ: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್​; ಬಳ್ಳಾರಿ ಜೈಲಿನಲ್ಲಿ ವೈದ್ಯರಿಂದ ಆರೋಗ್ಯ ತಪಾಸಣೆ

ದರ್ಶನ್​ಗೆ ಆರೋಗ್ಯ ಸಮಸ್ಯೆ ಇದೆ. ಜೈಲು ಸೇರುವುದಕ್ಕೂ ಮುನ್ನ ಅವರ ಕೈಗೆ ಸರ್ಜರಿ ಆಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ ತೂಕ ಕಳೆದುಕೊಳ್ಳುತ್ತಿದ್ದಾರೆ ಎನ್ನಲಾಗಿತ್ತು. ಹಾಗಾಗಿ ಮನೆ ಊಟಕ್ಕೆ ಮನವಿ ಮಾಡಿದ್ದರು. ಆದರೆ ಜೈಲಿನ ನಿಯಮ ಉಲ್ಲಂಘನೆ ಮಾಡಿದ ವಿಷಯ ಬಹಿರಂಗ ಆದಾಗ ಅನಾರೋಗ್ಯದ ಬಗ್ಗೆ ಅನುಮಾನ ಮೂಡಿವಂತಾಯಿತು.

ಇದು ಹೈ-ಪ್ರೊಫೈಲ್​ ಕೇಸ್​ ಆದ್ದರಿಂದ ತನಿಖೆಯ ಪ್ರತಿ ಹಂತದ ಮೇಲೆ ಕಣ್ಣು ಇಡಲಾಗಿದೆ. ದರ್ಶನ್​ ಬಳ್ಳಾರಿ ಜೈಲಿಗೆ ಸ್ಥಳಾಂತರ ಆಗುವಾಗ ಅವರ ಕೂಲಿಂಗ್​ ಗ್ಲಾಸ್​ ಧರಿಸಿದ್ದಕ್ಕೆ ಕೂಡ ಆಕ್ಷೇಪ ವ್ಯಕ್ತವಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:36 pm, Mon, 2 September 24

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್