ಹಾರರ್, ಆ್ಯಕ್ಷನ್, ಸಸ್ಪೆನ್ಸ್​, ಕಾಮಿಡಿಯ ಝಲಕ್​ ತೋರಿಸಿದ ‘ರಮೇಶ್​ ಸುರೇಶ್​’ ಟ್ರೇಲರ್​

‘ರಮೇಶ್​ ಸುರೇಶ್​’ ಚಿತ್ರವು ಟ್ರೇಲರ್​ ಮೂಲಕ ಕೌತುಕ ಸೃಷ್ಟಿಸಿದೆ. ಈ ಸಿನಿಮಾದಲ್ಲಿ ಬೆನಕ, ಯಶು ರಾಜ್​ ಅವರು ಹೀರೋಗಳಾಗಿ ನಟಿಸಿದ್ದಾರೆ. ನಾಯಕಿಯಾಗಿ ಚಂದನಾ ಸೋಗು ಅಭಿನಯಿಸಿದ್ದಾರೆ. ಪಿ. ಕೃಷ್ಣ, ಬಿ. ಶಂಕರ್ ನಿರ್ಮಾಣದ ಈ ಸಿನಿಮಾಗೆ ನಾಗರಾಜ್ ಮಲ್ಲಿಗೇನಹಳ್ಳಿ, ರಘುರಾಜ್ ಗೌಡ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ‘ರಮೇಶ್​ ಸುರೇಶ್​’ ಸಿನಿಮಾ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಹಾರರ್, ಆ್ಯಕ್ಷನ್, ಸಸ್ಪೆನ್ಸ್​, ಕಾಮಿಡಿಯ ಝಲಕ್​ ತೋರಿಸಿದ ‘ರಮೇಶ್​ ಸುರೇಶ್​’ ಟ್ರೇಲರ್​
ಬೆನಕ ಗುಬ್ಬಿ ವೀರಣ್ಣ, ಯಶು ರಾಜ್​
Follow us
|

Updated on: Jun 07, 2024 | 9:13 PM

ಜೂನ್​ ತಿಂಗಳಲ್ಲಿ ಕನ್ನಡದ ಹಲವು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಜೂನ್​ 21ರಂದು ‘ರಮೇಶ್​ ಸುರೇಶ್​’ ಸಿನಿಮಾ (Ramesh Suresh Movie) ಬಿಡುಗಡೆ ಆಗಲಿದೆ. ‘ಆರ್.ಕೆ. ಟಾಕೀಸ್’ ಮೂಲಕ ಪಿ. ಕೃಷ್ಣ ಮತ್ತು ಬಿ. ಶಂಕರ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ನಾಗರಾಜ್ ಮಲ್ಲಿಗೇನಹಳ್ಳಿ ಮತ್ತು ರಘುರಾಜ್ ಗೌಡ ಅವರು ಜಂಟಿಯಾಗಿ ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಗುಬ್ಬಿ ವೀರಣ್ಣ ಅವರ ಮರಿಮಗ ಬೆನಕ (Benak Gubbi Veeranna) ಮತ್ತು ಯಶು ರಾಜ್ ಅವರು ನಟಿಸಿದ್ದಾರೆ. ಇತ್ತೀಚೆಗೆ ‘ರಮೇಶ್​ ಸುರೇಶ್​’ ಸಿನಿಮಾದ ಟ್ರೇಲರ್ (Ramesh Suresh Trailer)​ ಬಿಡುಗಡೆ ಮಾಡಲಾಯಿತು.

ಟ್ರೇಲರ್​ ಮೂಲಕ ‘ರಮೇಶ್​ ಸುರೇಶ್​’ ಸಿನಿಮಾ ಕೌತುಕ ಮೂಡಿಸಿದೆ. ವಿಶೇಷ ಏನೆಂದರೆ, ಈ ಟ್ರೇಲರ್​ನಲ್ಲಿ ಮನರಂಜನೆಯ ಹಲವು ಎಳೆಗಳು ಕಾಣಿಸಿವೆ. ಅಂದರೆ ಹಾರರ್​, ಕಾಮಿಡಿ, ಆ್ಯಕ್ಷನ್​, ಸಸ್ಪೆನ್ಸ್​ ಮುಂತಾದ ಅಂಶಗಳು ಈ ಸಿನಿಮಾದಲ್ಲಿ ಇವೆ ಎಂಬುದಕ್ಕೆ ಟ್ರೇಲರ್​ನಲ್ಲಿ ಝಲಕ್​ ತೋರಿಸಲಾಗಿದೆ. ಬೆನಕ, ಯಶು ರಾಜ್ ಜೊತೆ ಸತ್ಯಪ್ರಕಾಶ್, ಉಮಾ, ನೀನಾಸಂ ರಂಗನಾಥ್, ಸಾಧುಕೋಕಿಲ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಚಂದನಾ ಸೇಗು ಅವರು ಈ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ‘ಕೋಟಿ’ ಸಿನಿಮಾ ಟ್ರೇಲರ್​ ಮೂಲಕ ಕೌತುಕ ಹೆಚ್ಚಿಸಿದ ಡಾಲಿ, ಪರಮ್​

‘ರಮೇಶ್​ ಸುರೇಶ್​’ ಸಿನಿಮಾದ ಟ್ರೇಲರ್​ ಬಿಡುಗಡೆ ಕಾರ್ಯಕ್ರಮಕ್ಕೆ ಸಂತೋಷ್ ಆರ್ಯನ್, ವಿಜಯ್ ಚೆಂಡೂರ್, ನಾಗೇಂದ್ರ ಅರಸ್ ಅವರು ಮುಖ್ಯ ಅತಿಥಿಗಳಾಗಿ ಬಂದು ಶುಭ ಕೋರಿದರು. ಈ ಸಿನಿಮಾಗೆ ಇಬ್ಬರು ನಿರ್ಮಾಪಕರು, ಇಬ್ಬರು ನಾಯಕರು ಹಾಗೂ ಇಬ್ಬರು ನಿರ್ದೇಶಕರು ಎಂಬುದು ವಿಶೇಷ. ‘ನಮ್ಮ ಚಿತ್ರದಲ್ಲಿ ಡಬಲ್ ಮೀನಿಂಗ್ ಡೈಲಾಗ್​ಗಳು ಇಲ್ಲ. ಅನವಶ್ಯಕವಾದ ಸನ್ನಿವೇಶಗಳು ಕೂಡ ಇಲ್ಲ. ಜನರಿಗೆ ಬೇಸರ ಆಗದಂತೆ ಉತ್ತಮ ಮನರಂಜನೆಯನ್ನು ನೀಡುವ ಸಿನಿಮಾ ಇದು’ ಎಂದು ಬೆನಕ ಗುಬ್ಬಿ ವೀರಣ್ಣ ಮತ್ತು ಯಶು ರಾಜ್ ಹೇಳಿದ್ದಾರೆ.

‘ರಮೇಶ್​ ಸುರೇಶ್​’ ಸಿನಿಮಾ ಟ್ರೇಲರ್​:

ನಿರ್ಮಾಪಕರಾದ ಕೃಷ್ಣ ಮತ್ತು ಶಂಕರ್ ಅವರು ಮಾತನಾಡಿ, ‘ಹೊಸ ಪ್ರತಿಭೆಗಳಿಗೆ ಚಾನ್ಸ್​ ಕೊಡುವ ಉದ್ದೇಶದಿಂದ ‘ಆರ್.ಕೆ. ಟಾಕೀಸ್’ ನಿರ್ಮಾಣ ಸಂಸ್ಥೆ ಪ್ರಾರಂಭಿಸಿದ್ದೇವೆ. ಮೊದಲ ಹೆಜ್ಜೆಯಾಗಿ ಈ ಸಿನಿಮಾವನ್ನು ನಿರ್ಮಿಸಿದ್ದೇವೆ. ನಿರ್ದೇಶಕರಾದ ನಾಗರಾಜ್ ಮತ್ತು ರಘುರಾಜ್ ಅವರ ಉತ್ತಮವಾಗಿ ಸಿನಿಮಾ ಕಟ್ಟಿಕೊಟ್ಟಿದ್ದಾರೆ. ಟೀಸರ್, ಟ್ರೇಲರ್ ಮತ್ತು ಹಾಡುಗಳಿಗೆ ಮೆಚ್ಚುಗೆ ಸಿಕ್ಕಿದೆ’ ಎಂದು ಹೇಳಿದ್ದಾರೆ. ನಿರ್ದೇಶಕರಾದ ನಾಗರಾಜ್ ಮಲ್ಲಿಗೇನಹಳ್ಳಿ ಮತ್ತು ರಘುರಾಜ್ ಗೌಡ ಅವರು ಟ್ರೇಲರ್​ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ‘ಇದೊಂದು ಕಾಮಿಡಿ ಪ್ರಕಾರದ ಸಿನಿಮಾವಾದರೂ ಒಳ್ಳೆಯ ಸಂದೇಶ ಇದೆ. ಪ್ರೇಕ್ಷಕರಿಗೆ ಬೇಕಾದ ಎಲ್ಲ ಅಂಶಗಳು ನಮ್ಮ ಸಿನಿಮಾದಲ್ಲಿದೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ