AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನ್ ಶೆಟ್ಟಿ-ನಿವೇದಿತಾ ಗೌಡ ವಿಚ್ಛೇದನ ಮಂಜೂರು: 4 ವರ್ಷಗಳ ದಾಂಪತ್ಯ ಅಂತ್ಯ

Chandan Shetty And Niveditha Gowda divorce: ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನಕ್ಕೆ ಕೋರ್ಟ್​ ಮಂಜೂರು ನೀಡಿದೆ. ಇದರೊಂದಿಗೆ ನಾಲ್ಕು ಚಂದನ್ ಶೆಟ್ಟಿ -ನಿವೇದಿತಾ ಗೌಡ ನಾಲ್ಕು ವರ್ಷಗಳ ದಾಂಪತ್ಯ ಅಂತ್ಯವಾಗಿದೆ.

ಚಂದನ್ ಶೆಟ್ಟಿ-ನಿವೇದಿತಾ ಗೌಡ ವಿಚ್ಛೇದನ ಮಂಜೂರು: 4 ವರ್ಷಗಳ ದಾಂಪತ್ಯ ಅಂತ್ಯ
ಚಂದನ್ ಶೆಟ್ಟಿ, ನಿವೇದಿತಾ ಗೌಡ
ರಮೇಶ್​ ಎಮ್​.
| Edited By: |

Updated on:Jun 07, 2024 | 5:39 PM

Share

ಬೆಂಗಳೂರು (ಜೂನ್ 07): ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ (chandan shetty And niveditha gowda) ಅವರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್​ ಪುರಸ್ಕರಿಸಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನ ಮಂಜೂರು ಮಾಡಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮೂಲಕ ರ್‍ಯಾಪರ್‌ ಚಂದನ್ ಶೆಟ್ಟಿ- ನಿವೇದಿತಾ ಗೌಡ ಅವರ ನಾಲ್ಕು ವರ್ಷದ ದಾಂಪತ್ಯ ಅಂತ್ಯವಾಗಿದೆ.

ಕೆಲ ಕಾರಣಾಂತರಗಳಿಂದ ಕೂಡಿ ಇರಲು ಇಚ್ಚಿಸಿದ ಈ ಜೋಡಿ, ಪ್ರತ್ಯೇಕವಾಗಿರಲು ಬಯಸಿದೆ. ಹೀಗಾಗಿ ವಿಚ್ಛೇದನ ಕೋರಿ ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್​ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿತ್ತು. ಪರಸ್ಪರ ಒಪ್ಪಂದದ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರಿಂದ ಕೋರ್ಟ್​, ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ವಿಚ್ಛೇದನ ಪಡೆದ ಚಂದನ್​ ಶೆಟ್ಟಿ-ನಿವೇದಿತಾ ಗೌಡ? ದಂಪತಿ ಬಗ್ಗೆ ಶಾಕಿಂಗ್​ ಸುದ್ದಿ

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ ಇಂದು (ಜೂನ್ 07) ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಬೆಂಚ್​ ಮುಂದೆ ಬಂದಿತ್ತು. ಆದ್ರೆ, ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕು. ಅದರಂತೆ ಚಂದನ್ ಹಾಗೂ ನಿವೇದಿತಾ ಅವರಿಗೆ ಕೌಟುಂಬಿಕ ಕೋರ್ಟ್‌ನ ಮಿಡಿಯೇಷನ್​ ಸೆಂಟರ್​ನಲ್ಲಿ ಮಾತುಕತೆ ನಡೆಸಲಾಯಿತು. ವಿಚ್ಛೇದನ ಪ್ರಕ್ರಿಯೆ ಮೊದಲು ಈ ಸಂಧಾನ ನಡೆಯಲೇಬೇಕು. ಅಂತೆಯೇ ಸಂಧಾನಕಾರರು ಮಾತುಕತೆ ನಡೆಸಿದಾಗ ಇಬ್ಬರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ. ಹೀಗಾಗಿ ಅಂತಿಮವಾಗಿ ಕೋರ್ಟ್​, ವಿಚ್ಛೇದನ ನೀಡಿ ಆದೇಶಿಸಿದೆ.

ಈ ದಂಪತಿಯ ವಿಚ್ಛೇದನ ಅಚ್ಚರಿಗೆ ಕಾರಣವಾಗಿದೆ. ಯಾಕಂದ್ರೆ ಯಾವುದೇ ದಂಪತಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರೆ ತಿಂಗಳಾನುಗಟ್ಟಲೇ, ವರ್ಷಗಟ್ಟಲೇ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತೆ. ಆದ್ರೆಮ ಚಂದನ್ ಶೆಟ್ಟಿ ದಂಪತಿ ವಿಚ್ಛೇದನ ಮಾತ್ರ ಒಂದೇ ದಿನದಲ್ಲಿ ಆಗಿದೆ. ಕಾರಣ ಇವರಿಬ್ಬರು ನಗು ನಗುತ್ತಲೇ, ಒಪ್ಪಂದದ ಮೇರೆಗೆಯಿಂದಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಕೋರ್ಟ್​ಗೆ ಹಾಜರಾದ ವೇಳೆ ಈ ಜೋಡಿ ಅಕ್ಕಪಕ್ಕದಲ್ಲೇ ಇತ್ತು. ಹೀಗಾಗಿ ಬೇಗನೇ ವಿಚ್ಛೇದನ ಮಂಜೂರಾಗಲು ಪ್ರಮುಖ ಕಾರಣವಾಗಿದೆ.

ಇವರಿಬ್ಬರ ವಿಚ್ಛೇದನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ರೀತಿಯ ಸುದ್ದಿ ಹರಿದಾಡುತ್ತಿವೆ. ಕ್ಯೂಟ್ ಕಪಲ್ ಎಂದೇ ಕರೆಯಿಸಿಕೊಂಡಿದ್ದ ಈ ಜೋಡಿ ಏಕಾಏಕಿ ಡಿವೋರ್ಸ್​ ನಿರ್ಧಾರ ಕೈಗೊಂಡಿದ್ಯಾಕೆ? ಕಾರಣವೇನು? ಇವರಲ್ಲಿ ಯಾರ ತಪ್ಪು ಇರಬಹುದು? ಇಬ್ಬರಲ್ಲಿ ಮೊದಲಿಗೆ ಡಿವೋರ್ಸ್ ಬಯಸಿದ್ದು ಯಾರು? ಹೀಗೇ ನಾನಾ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಶುರುವಾಗಿವೆ. ಆದ್ರೆ, ಚಂದನ್​ ಹಾಗೂ ನಿವೇದಿತಾ ಆಗಲೇ ತಮ್ಮ ವಿಚ್ಛೇದನಕ್ಕೆ ನಿರ್ದಿಷ್ಟ ಕಾರಣ ಏನು ಎನ್ನುವುದನ್ನು ಬಹಿರಂಗಪಡಿಸಿಲ್ಲ.

Published On - 5:17 pm, Fri, 7 June 24

Follow Us
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ