AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನ್ ಶೆಟ್ಟಿ-ನಿವೇದಿತಾ ಗೌಡ ವಿಚ್ಛೇದನ ಮಂಜೂರು: 4 ವರ್ಷಗಳ ದಾಂಪತ್ಯ ಅಂತ್ಯ

Chandan Shetty And Niveditha Gowda divorce: ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನಕ್ಕೆ ಕೋರ್ಟ್​ ಮಂಜೂರು ನೀಡಿದೆ. ಇದರೊಂದಿಗೆ ನಾಲ್ಕು ಚಂದನ್ ಶೆಟ್ಟಿ -ನಿವೇದಿತಾ ಗೌಡ ನಾಲ್ಕು ವರ್ಷಗಳ ದಾಂಪತ್ಯ ಅಂತ್ಯವಾಗಿದೆ.

ಚಂದನ್ ಶೆಟ್ಟಿ-ನಿವೇದಿತಾ ಗೌಡ ವಿಚ್ಛೇದನ ಮಂಜೂರು: 4 ವರ್ಷಗಳ ದಾಂಪತ್ಯ ಅಂತ್ಯ
ಚಂದನ್ ಶೆಟ್ಟಿ, ನಿವೇದಿತಾ ಗೌಡ
Ramesha M
| Edited By: |

Updated on:Jun 07, 2024 | 5:39 PM

Share

ಬೆಂಗಳೂರು (ಜೂನ್ 07): ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ (chandan shetty And niveditha gowda) ಅವರ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್​ ಪುರಸ್ಕರಿಸಿದ್ದು, ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನ ಮಂಜೂರು ಮಾಡಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಮೂಲಕ ರ್‍ಯಾಪರ್‌ ಚಂದನ್ ಶೆಟ್ಟಿ- ನಿವೇದಿತಾ ಗೌಡ ಅವರ ನಾಲ್ಕು ವರ್ಷದ ದಾಂಪತ್ಯ ಅಂತ್ಯವಾಗಿದೆ.

ಕೆಲ ಕಾರಣಾಂತರಗಳಿಂದ ಕೂಡಿ ಇರಲು ಇಚ್ಚಿಸಿದ ಈ ಜೋಡಿ, ಪ್ರತ್ಯೇಕವಾಗಿರಲು ಬಯಸಿದೆ. ಹೀಗಾಗಿ ವಿಚ್ಛೇದನ ಕೋರಿ ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್​ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿತ್ತು. ಪರಸ್ಪರ ಒಪ್ಪಂದದ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರಿಂದ ಕೋರ್ಟ್​, ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ವಿಚ್ಛೇದನ ಪಡೆದ ಚಂದನ್​ ಶೆಟ್ಟಿ-ನಿವೇದಿತಾ ಗೌಡ? ದಂಪತಿ ಬಗ್ಗೆ ಶಾಕಿಂಗ್​ ಸುದ್ದಿ

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ ಇಂದು (ಜೂನ್ 07) ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಬೆಂಚ್​ ಮುಂದೆ ಬಂದಿತ್ತು. ಆದ್ರೆ, ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕು. ಅದರಂತೆ ಚಂದನ್ ಹಾಗೂ ನಿವೇದಿತಾ ಅವರಿಗೆ ಕೌಟುಂಬಿಕ ಕೋರ್ಟ್‌ನ ಮಿಡಿಯೇಷನ್​ ಸೆಂಟರ್​ನಲ್ಲಿ ಮಾತುಕತೆ ನಡೆಸಲಾಯಿತು. ವಿಚ್ಛೇದನ ಪ್ರಕ್ರಿಯೆ ಮೊದಲು ಈ ಸಂಧಾನ ನಡೆಯಲೇಬೇಕು. ಅಂತೆಯೇ ಸಂಧಾನಕಾರರು ಮಾತುಕತೆ ನಡೆಸಿದಾಗ ಇಬ್ಬರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ. ಹೀಗಾಗಿ ಅಂತಿಮವಾಗಿ ಕೋರ್ಟ್​, ವಿಚ್ಛೇದನ ನೀಡಿ ಆದೇಶಿಸಿದೆ.

ಈ ದಂಪತಿಯ ವಿಚ್ಛೇದನ ಅಚ್ಚರಿಗೆ ಕಾರಣವಾಗಿದೆ. ಯಾಕಂದ್ರೆ ಯಾವುದೇ ದಂಪತಿ ವಿಚ್ಛೇದನ ಅರ್ಜಿ ಸಲ್ಲಿಸಿದ್ದರೆ ತಿಂಗಳಾನುಗಟ್ಟಲೇ, ವರ್ಷಗಟ್ಟಲೇ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತೆ. ಆದ್ರೆಮ ಚಂದನ್ ಶೆಟ್ಟಿ ದಂಪತಿ ವಿಚ್ಛೇದನ ಮಾತ್ರ ಒಂದೇ ದಿನದಲ್ಲಿ ಆಗಿದೆ. ಕಾರಣ ಇವರಿಬ್ಬರು ನಗು ನಗುತ್ತಲೇ, ಒಪ್ಪಂದದ ಮೇರೆಗೆಯಿಂದಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಕೋರ್ಟ್​ಗೆ ಹಾಜರಾದ ವೇಳೆ ಈ ಜೋಡಿ ಅಕ್ಕಪಕ್ಕದಲ್ಲೇ ಇತ್ತು. ಹೀಗಾಗಿ ಬೇಗನೇ ವಿಚ್ಛೇದನ ಮಂಜೂರಾಗಲು ಪ್ರಮುಖ ಕಾರಣವಾಗಿದೆ.

ಇವರಿಬ್ಬರ ವಿಚ್ಛೇದನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ರೀತಿಯ ಸುದ್ದಿ ಹರಿದಾಡುತ್ತಿವೆ. ಕ್ಯೂಟ್ ಕಪಲ್ ಎಂದೇ ಕರೆಯಿಸಿಕೊಂಡಿದ್ದ ಈ ಜೋಡಿ ಏಕಾಏಕಿ ಡಿವೋರ್ಸ್​ ನಿರ್ಧಾರ ಕೈಗೊಂಡಿದ್ಯಾಕೆ? ಕಾರಣವೇನು? ಇವರಲ್ಲಿ ಯಾರ ತಪ್ಪು ಇರಬಹುದು? ಇಬ್ಬರಲ್ಲಿ ಮೊದಲಿಗೆ ಡಿವೋರ್ಸ್ ಬಯಸಿದ್ದು ಯಾರು? ಹೀಗೇ ನಾನಾ ವಿಚಾರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಶುರುವಾಗಿವೆ. ಆದ್ರೆ, ಚಂದನ್​ ಹಾಗೂ ನಿವೇದಿತಾ ಆಗಲೇ ತಮ್ಮ ವಿಚ್ಛೇದನಕ್ಕೆ ನಿರ್ದಿಷ್ಟ ಕಾರಣ ಏನು ಎನ್ನುವುದನ್ನು ಬಹಿರಂಗಪಡಿಸಿಲ್ಲ.

Published On - 5:17 pm, Fri, 7 June 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?