AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ತಿಂಗಳ 30ಕ್ಕೆ ಬರುತ್ತಿದ್ದಾರೆ ‘ಬೆಂಗಳೂರು ಬಾಯ್ಸ್’ ಸ್ವಾಗತಿಸಲು ಸಜ್ಜಾಗಿ

Bengaluru Boys: ಹಾಸ್ಯಪ್ರಧಾನ ಬೆಂಗಳೂರು ಬಾಯ್ಸ್ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಇದೇ ತಿಂಗಳ 30ಕ್ಕೆ ಬರುತ್ತಿದ್ದಾರೆ ‘ಬೆಂಗಳೂರು ಬಾಯ್ಸ್’ ಸ್ವಾಗತಿಸಲು ಸಜ್ಜಾಗಿ
ಬೆಂಗಳೂರು ಬಾಯ್ಸ್
ಮಂಜುನಾಥ ಸಿ.
|

Updated on: Jun 26, 2023 | 8:35 AM

Share

ಲೋ ಬಜೆಟ್ (Budget), ಹೊಸಬರ ಸಿನಿಮಾಗಳು ಇತ್ತೀಚೆಗೆ ತಮ್ಮ ಮೇಕಿಂಗ್ ಸ್ಟೈಲ್, ನವೀನ ರೀತಿಯ ಪ್ರಚಾರಗಳಿಂದ ಗಮನ ಸೆಳೆಯುತ್ತಿವೆ. ಡೇರ್​ಡೆವಿಲ್ ಮುಸ್ತಾಫಾ (Daredevil Mustafa), ಹಾಸ್ಟೆಲ್ ಹುಡುಗರು (Hostle Hudugaru), ಕಂಬ್ಳಿ ಹುಳ ಇನ್ನಿತರೆ ಸಿನಿಮಾಗಳು ಇದಕ್ಕೆ ಸಾಕ್ಷಿ. ಇದೀಗ ಇದೇ ಸಾಲಿಗೆ ಸೇರುವಂತೆ ಗಮನ ಸೆಳೆವ ಪ್ರಚಾರ, ಫಸ್ಟ್ ಲುಕ್, ಟ್ರೈಲರ್​ಗಳ ಮೂಲಕ ಬೆಂಗಳೂರು ಬಾಯ್ಸ್ ಸಿನಿಮಾ ಕುತೂಹಲ ಕೆರಳಿಸಿದೆ. ಈ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ಪ್ರೇಕ್ಷಕರ ಮುಂದೆ ಬರಲಿದೆ.

ಬೆಂಗಳೂರಿನ ಪ್ರತಿಗಲ್ಲಿಗಳಲ್ಲಿಯೂ ಇರಬಹುದಾದ ಗೆಳೆಯರ ಗುಂಪುಗಳನ್ನೇ ಸ್ಪೂರ್ತಿಯಾಗಿ ಪಡೆದು ಮಾಡಿದ ಸಿನಿಮಾ ಇದಾಗಿದೆ. ಸಿನಿಮಾದಲ್ಲಿ ಹಾಸ್ಯ, ಪ್ರೇಮ, ರೊಮ್ಯಾನ್ಸ್, ಥ್ರಿಲ್ಲರ್ ಅಂಶಗಳು, ಹಾಡು, ಫೈಟ್, ಸಾಧಿಸುವ ಛಲದ ಹುಡುಗರು, ಸಂದೇಶ ಎಲ್ಲವೂ ಅಡಕವಾಗಿದೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು ವೈರಲ್ ಆಗಿದೆ. ಸಿನಿಮಾದ ಪೋಸ್ಟರ್​ಗಳು ಸಹ ವೈರಲ್ ಆಗಿವೆ.

ವಿ ಮೇಕರ್ಸ್ ನಿರ್ಮಾಣದಲ್ಲಿ ಮೂಡಿಬಂದಿರುವ ಬೆಂಗಳೂರು ಬಾಯ್ಸ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದೇ 30ರಂದು ರಾಜ್ಯಾದ್ಯಂತ ಚಿತ್ರ ರಿಲೀಸ್ ಆಗಲಿದೆ. ಬಿಡುಗಡೆ ಹೊಸ್ತಿಲಲ್ಲಿರುವ ಬೆಂಗಳೂರು ಬಾಯ್ಸ್ ಸಿನಿಮಾದ ಹೊಸ ಹಾಡು ರಿಲೀಸ್ ಆಗಿದೆ. ಕಾಮಿಡಿ ಕಿಂಗ್ ಚಿಕ್ಕಣ್ಣ ಧ್ವನಿಯಾಗಿರುವ ಟಪಾಸ್ ಹಾಡು ಈಗ ಭಾರೀ ಸದ್ದು ಮಾಡುತ್ತಿದೆ. ಸಾಫ್ಟ್‌ವೇರ್ ಗಳ ಪಾಡು ವಿವರಿಸುವ ಹಾಡು ಇದಾಗಿದೆ. ಧರ್ಮವಿಷ್ ಸಂಗೀತದ ಈ ಹಾಡಿಗೆ ಅರಸು ಅಂಥರೆ ಸಾಹಿತ್ಯ ಬರೆದಿದ್ದಾರೆ.

ಇದನ್ನೂ ಓದಿ:KGF Chapter 2: ರಾಕಿ ಸಾಮ್ರಾಜ್ಯ ವೀಕ್ಷಿಸುತ್ತಿರುವ ಬೆಂಗಳೂರು ಬಾಯ್ಸ್; ಆರ್​ಸಿಬಿ ತಂಡಕ್ಕೆ ‘ಕೆಜಿಎಫ್ ಚಾಪ್ಟರ್ 2’ ವಿಶೇಷ ಪ್ರದರ್ಶನ

ವೇಸ್ಟ್ ಎನಿಸಿಕೊಳ್ಳುವ ಲಾಸ್ಟ್ ಬೆಂಚ್ ಸ್ಟೂಡೆಂಟ್ ಬದುಕಿನಲ್ಲಿ ಸಾಧನೆಯ ಗುರಿಮುಟ್ಟಿದ ಸಾಕಷ್ಟು ಉದಾಹರಣೆಗಳಿವೆ. ಅಂತಹದ್ದೇ ಕಥಾಹಂದರ ಹೊಂದಿರುವ ಸಿನಿಮಾ ಬೆಂಗಳೂರು ಬಾಯ್ಸ್. 90ರ ದಶಕದಲ್ಲಿ ಸೂಪರ್ ಹಿಟ್ ಸಿನಿಮಾಗಳಾದ ರಣಧೀರ, ಅಂತ , ಓಂ ಹಾಗೂ ಎ ಚಿತ್ರಗಳ ಪಾತ್ರದಲ್ಲಿ ಅಭಿಷೇಕ್ ದಾಸ್, ಸಚಿನ್ ಚೆಲುವರಾಯಸ್ವಾಮಿ, ಚಂದನ್ ಆಚಾರ್, ರೋಹಿತ್ ಮಿಂಚಿದ್ದಾರೆ. ಇವರಿಗೆ ಜೋಡಿಯಾಗಿ ಪ್ರಗ್ಯ ನಯನ, ವೈನಿಧಿ ಜಗದೀಶ್, ಜಯಶ್ರೀ ಆಚಾರ್ ಹಾಗೂ ಸೋನಿ ನಟಿಸಿದ್ದಾರೆ.

ಕಾಮಿಡಿ ಕಿಂಗ್ ಚಿಕ್ಕಣ ಪ್ರಮುಖ ಪಾತ್ರವೊಂದ್ರಲ್ಲಿ ನಟಿಸಿದ್ದು, ಐಟಿಬಿಟಿ ಉದ್ಯೋಗಿ ಕಾಣಿಸಿಕೊಂಡಿದ್ದಾರೆ. ಉಮೇಶ್, ಪಿಡಿ ಸತೀಶ್, ಮೋಹನ್ ಜೂನೇಜಾ ಸೇರಿದಂತೆ ಹಿರಿಯ ಕಲಾವಿದರ ದಂಡು ಚಿತ್ರದಲ್ಲಿದೆ. ಬೆಂಗಳೂರು ಬಾಯ್ಸ್ ಸಿನಿಮಾಗೆ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾ ಖ್ಯಾತಿಯ ಗುರುದತ್‌ ಗಾಣಿಗ ಕ್ರಿಯೇಟಿವ್‌ ನಿರ್ದೇಶಕರಾಗಿ ಕೆಲಸ ಮಾಡಿದ್ದು, ರವಿ ಶ್ರೀರಾಮ್ ಕೋ ಡೈರೆಕ್ಟರ್ ಆಗಿ, ಡಿ ಆರ್ ಶ್ರೀನಿವಾಸ್ ಅಸೋಸಿಯೇಟ್ ಡೈರೆಕ್ಟರ್ ಆಗಿ ದುಡಿದಿದ್ದಾರೆ. ರಿಜೋ ಪಿ ಜಾನ್ ಛಾಯಾಗ್ರಹಣ, ಧರ್ಮ ವಿಶ್ ಟ್ಯೂನ್ ಹಾಕಿದ್ದಾರೆ. ಸಿನಿಮಾ ಆಸಕ್ತಿ ಹೊಂದಿರುವ ತೆಲುಗು ಮೂಲದ ವಿಕ್ರಮ್‌ ಕೆ.ವೈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಪ್ರಶಾಂತ್ ರಾವ್ ಪುರಂ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ