AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಸಿನಿಮಾ ಪೈರಸಿ ಮಾಡಿದ್ದ ‘ಪೈಲ್ವಾನ್’ ಆರೋಪಿ ಅಂದರ್

ಇತ್ತೀಚೆಗಷ್ಟೇ ಬಿಡುಗಡೆಯಾದ ಸ್ಯಾಂಡಲ್​ವುಡ್​ನ ಬಾದ್​ಷಾ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಚಿತ್ರ ಮೊದಲ ದಿನವೇ ಪೈರಸಿಯಾಗಿತ್ತು. ಪಂಚ ಭಾಷೆಗಳಲ್ಲಿ ರಿಲೀಸ್ ಆಗಿದ್ದ ಚಿತ್ರ ಅಂದೇ ಎಲ್ಲರ ಮೊಬೈಲ್​ಗಳಲ್ಲಿ ಹರಿದಾಡುತ್ತಿತ್ತು. ಇದೀಗ ಬೆಂಗಳೂರು ಸಿಸಿಬಿ ಪೊಲೀಸರು ನೆಲಮಂಗಲದ ಇಮಚೇನಹಳ್ಳಿ ನಿವಾಸಿ ರಾಕೇಶ್​ನನ್ನು ಬಂಧಿಸಿದ್ದಾರೆ.

ಸುದೀಪ್ ಸಿನಿಮಾ ಪೈರಸಿ ಮಾಡಿದ್ದ ‘ಪೈಲ್ವಾನ್’ ಆರೋಪಿ ಅಂದರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 02, 2026 | 9:53 AM

Share

ಇತ್ತೀಚೆಗಷ್ಟೇ ಬಿಡುಗಡೆಯಾದ ಸ್ಯಾಂಡಲ್​ವುಡ್​ನ ಬಾದ್​ಷಾ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಚಿತ್ರ ಮೊದಲ ದಿನವೇ ಪೈರಸಿಯಾಗಿತ್ತು. ಪಂಚ ಭಾಷೆಗಳಲ್ಲಿ ರಿಲೀಸ್ ಆಗಿದ್ದ ಚಿತ್ರ ಅಂದೇ ಎಲ್ಲರ ಮೊಬೈಲ್​ಗಳಲ್ಲಿ ಹರಿದಾಡುತ್ತಿತ್ತು. ಇದೀಗ ಬೆಂಗಳೂರು ಸಿಸಿಬಿ ಪೊಲೀಸರು ನೆಲಮಂಗಲದ ಇಮಚೇನಹಳ್ಳಿ ನಿವಾಸಿ ರಾಕೇಶ್​ನನ್ನು ಬಂಧಿಸಿದ್ದಾರೆ. ಆರೋಪಿ ರಾಕೇಶ್​ ಸಿನಿಮಾ ರಿಲೀಸ್ ಆದ ದಿನವೇ ತನ್ನ ಖಾತೆಯಿಂದ ಪೂರ್ತಿ ಸಿನಿಮಾವನ್ನು ಅಪ್ಲೋಡ್ ಮಾಡಿದ್ದ.

ಕಿಚ್ಚ ಸುದೀಪ್ ಮನೆಗೆ ಬೆಂಗಳೂರು ಪೊಲೀಸ್ ಆಯುಕ್ತರು ಇನ್ನು ಇದೇ ಬೆಳವಣಿಗೆಯಲ್ಲಿ, ಬೆಂಗಳೂರಿನ ಜೆಪಿ ನಗರದ ಕಿಚ್ಚ ಸುದೀಪ್ ನಿವಾಸಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭೇಟಿ ನೀಡಿ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.  ಅಲ್ಲದೆ ಕಿಚ್ಚ ಸುದೀಪ್ ಮತ್ತು ಭಾಸ್ಕರ್ ರಾವ್ ಹಿಂದಿನಿಂದಲೂ ಸ್ನೇಹಿತರು, ಹೀಗಾಗಿ ಸೌಹಾರ್ದಯುತ ಭೇಟಿ ನೀಡಿದ್ದಾರೆ. ಇನ್ನು ಇದೇ ವೇಳೆ ಪೈಲ್ವಾನ್ ಸಿನಿಮಾದ ಪೈರಸಿ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಪೈಲ್ವಾನ್ ಪೈರಸಿಯಿಂದ ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್​ ಪೈಲ್ವಾನ್ ಸಿನಿಮಾ ಪೈರಸಿಯಾಗಿದ್ದೇ ತಡ ದರ್ಶನ್ ಮತ್ತು ಸುದೀಪ್ ಫ್ಯಾನ್ಸ್​ ವಾರ್ ಶುರುವಾಯಿತು. ಸಾಮಾಜಿಕ ತಾಲತಾಣಗಳಲ್ಲಿ ‘ಕಿಚ್ಚ-ದಚ್ಚು’ ಫ್ಯಾನ್ಸ್​ ನಡುವೆ ಆರೋಪ, ಪ್ರತ್ಯಾರೋಪಗಳು ಜೋರಾದವು. ದರ್ಶನ್ ಅಭಿಮಾನಿಗಳು ಕಿಚ್ಚ ಸುದೀಪ್ ಹೆಸರೇಳದೆ ಬಹಿರಂಗ ಪತ್ರ ಬರೆದು ಪರೋಕ್ಷವಾಗಿ ಸುದೀಪ್​ಗೆ ಕೆಲವು ಪ್ರಶ್ನೆಗಳನ್ನ ಮುಂದಿಟ್ಟರು. ಇದರಿಂದ ಕೆರಳಿದ ಕಿಚ್ಚನ ಅಭಿಮಾನಿಗಳೂ ಸಹ ಬಹಿರಂಗ ಪತ್ರ ಬರೆದು ದರ್ಶನ್ ಫ್ಯಾನ್ಸ್​ಗೆ ಟಾಂಗ್ ನೀಡಿದ್ರು.

ಅಭಿಮಾನಿಗಳ ವಾರ್​ಗೆ ದರ್ಶನ್, ಸುದೀಪ್​ ಟ್ವೀಟ್​ ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್ ತಾರಕಕ್ಕೇರುತ್ತಿದ್ದಂತೆ ಚಾಲೆಂಜಿಂಗ್ ಸ್ಟಾರ್ ಸಹ ಟ್ವೀಟ್ ಮಾಡಿ, ಅನ್ನದಾತರು ಮತ್ತು ಸೆಲೆಬ್ರೆಟಿಗಳನ್ನು ಪ್ರಚೋದಿಸಬೇಡಿ ಅಂತ ವಾರ್ನಿಂಗ್ ನೀಡಿದ್ರು. ಬಳಿಕ ಕಿಚ್ಚ ಸುದೀಪ್ ಸಹ ಟ್ವೀಟ್ ಮಾಡಿ, ಕೆಲವೊಂದು ಮಾತುಗಳಿಗೆ ಕಣ್ಣು ಕಾಣಿಸದಂತೆ, ಕಿವಿ ಕೇಳಿಸದಂತೆ ಇರುವುದು ಒಳಿತು. ಪೈರಸಿ ಬಗ್ಗೆ ಯಾರ ಹೆಸರನ್ನೂ ನಾವು ತೆಗೆದುಕೊಂಡಿಲ್ಲ ಅಂತ ಸುದೀರ್ಘವಾದ ಪತ್ರ ಬರೆದರು.

ಇನ್ನು ಈ ಕುರಿತು ನಿರ್ಮಾಪಕಿ ಸ್ವಪ್ನಾ ಕೃಷ್ಣ ಸಹ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

Published On - 2:31 pm, Fri, 20 September 19

Follow Us
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ