AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಸಿನಿಮಾ ಪೈರಸಿ ಮಾಡಿದ್ದ ‘ಪೈಲ್ವಾನ್’ ಆರೋಪಿ ಅಂದರ್

ಇತ್ತೀಚೆಗಷ್ಟೇ ಬಿಡುಗಡೆಯಾದ ಸ್ಯಾಂಡಲ್​ವುಡ್​ನ ಬಾದ್​ಷಾ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಚಿತ್ರ ಮೊದಲ ದಿನವೇ ಪೈರಸಿಯಾಗಿತ್ತು. ಪಂಚ ಭಾಷೆಗಳಲ್ಲಿ ರಿಲೀಸ್ ಆಗಿದ್ದ ಚಿತ್ರ ಅಂದೇ ಎಲ್ಲರ ಮೊಬೈಲ್​ಗಳಲ್ಲಿ ಹರಿದಾಡುತ್ತಿತ್ತು. ಇದೀಗ ಬೆಂಗಳೂರು ಸಿಸಿಬಿ ಪೊಲೀಸರು ನೆಲಮಂಗಲದ ಇಮಚೇನಹಳ್ಳಿ ನಿವಾಸಿ ರಾಕೇಶ್​ನನ್ನು ಬಂಧಿಸಿದ್ದಾರೆ. ಆರೋಪಿ ರಾಕೇಶ್​ ಸಿನಿಮಾ ರಿಲೀಸ್ ಆದ ದಿನವೇ ತನ್ನ ಖಾತೆಯಿಂದ ಪೂರ್ತಿ ಸಿನಿಮಾವನ್ನು ಅಪ್ಲೋಡ್ ಮಾಡಿದ್ದ. ಕಿಚ್ಚ ಸುದೀಪ್ ಮನೆಗೆ ಬೆಂಗಳೂರು ಪೊಲೀಸ್ ಆಯುಕ್ತರು ಇನ್ನು ಇದೇ ಬೆಳವಣಿಗೆಯಲ್ಲಿ, ಬೆಂಗಳೂರಿನ ಜೆಪಿ ನಗರದ ಕಿಚ್ಚ […]

ಸುದೀಪ್ ಸಿನಿಮಾ ಪೈರಸಿ ಮಾಡಿದ್ದ ‘ಪೈಲ್ವಾನ್’ ಆರೋಪಿ ಅಂದರ್
ಸಾಧು ಶ್ರೀನಾಥ್​
|

Updated on:Sep 20, 2019 | 3:12 PM

Share

ಇತ್ತೀಚೆಗಷ್ಟೇ ಬಿಡುಗಡೆಯಾದ ಸ್ಯಾಂಡಲ್​ವುಡ್​ನ ಬಾದ್​ಷಾ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಚಿತ್ರ ಮೊದಲ ದಿನವೇ ಪೈರಸಿಯಾಗಿತ್ತು. ಪಂಚ ಭಾಷೆಗಳಲ್ಲಿ ರಿಲೀಸ್ ಆಗಿದ್ದ ಚಿತ್ರ ಅಂದೇ ಎಲ್ಲರ ಮೊಬೈಲ್​ಗಳಲ್ಲಿ ಹರಿದಾಡುತ್ತಿತ್ತು. ಇದೀಗ ಬೆಂಗಳೂರು ಸಿಸಿಬಿ ಪೊಲೀಸರು ನೆಲಮಂಗಲದ ಇಮಚೇನಹಳ್ಳಿ ನಿವಾಸಿ ರಾಕೇಶ್​ನನ್ನು ಬಂಧಿಸಿದ್ದಾರೆ. ಆರೋಪಿ ರಾಕೇಶ್​ ಸಿನಿಮಾ ರಿಲೀಸ್ ಆದ ದಿನವೇ ತನ್ನ ಖಾತೆಯಿಂದ ಪೂರ್ತಿ ಸಿನಿಮಾವನ್ನು ಅಪ್ಲೋಡ್ ಮಾಡಿದ್ದ.

ಕಿಚ್ಚ ಸುದೀಪ್ ಮನೆಗೆ ಬೆಂಗಳೂರು ಪೊಲೀಸ್ ಆಯುಕ್ತರು ಇನ್ನು ಇದೇ ಬೆಳವಣಿಗೆಯಲ್ಲಿ, ಬೆಂಗಳೂರಿನ ಜೆಪಿ ನಗರದ ಕಿಚ್ಚ ಸುದೀಪ್ ನಿವಾಸಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಭೇಟಿ ನೀಡಿ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.  ಅಲ್ಲದೆ ಕಿಚ್ಚ ಸುದೀಪ್ ಮತ್ತು ಭಾಸ್ಕರ್ ರಾವ್ ಹಿಂದಿನಿಂದಲೂ ಸ್ನೇಹಿತರು, ಹೀಗಾಗಿ ಸೌಹಾರ್ದಯುತ ಭೇಟಿ ನೀಡಿದ್ದಾರೆ. ಇನ್ನು ಇದೇ ವೇಳೆ ಪೈಲ್ವಾನ್ ಸಿನಿಮಾದ ಪೈರಸಿ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಪೈಲ್ವಾನ್ ಪೈರಸಿಯಿಂದ ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್​ ಪೈಲ್ವಾನ್ ಸಿನಿಮಾ ಪೈರಸಿಯಾಗಿದ್ದೇ ತಡ ದರ್ಶನ್ ಮತ್ತು ಸುದೀಪ್ ಫ್ಯಾನ್ಸ್​ ವಾರ್ ಶುರುವಾಯಿತು. ಸಾಮಾಜಿಕ ತಾಲತಾಣಗಳಲ್ಲಿ ‘ಕಿಚ್ಚ-ದಚ್ಚು’ ಫ್ಯಾನ್ಸ್​ ನಡುವೆ ಆರೋಪ, ಪ್ರತ್ಯಾರೋಪಗಳು ಜೋರಾದವು. ದರ್ಶನ್ ಅಭಿಮಾನಿಗಳು ಕಿಚ್ಚ ಸುದೀಪ್ ಹೆಸರೇಳದೆ ಬಹಿರಂಗ ಪತ್ರ ಬರೆದು ಪರೋಕ್ಷವಾಗಿ ಸುದೀಪ್​ಗೆ ಕೆಲವು ಪ್ರಶ್ನೆಗಳನ್ನ ಮುಂದಿಟ್ಟರು. ಇದರಿಂದ ಕೆರಳಿದ ಕಿಚ್ಚನ ಅಭಿಮಾನಿಗಳೂ ಸಹ ಬಹಿರಂಗ ಪತ್ರ ಬರೆದು ದರ್ಶನ್ ಫ್ಯಾನ್ಸ್​ಗೆ ಟಾಂಗ್ ನೀಡಿದ್ರು.

ಅಭಿಮಾನಿಗಳ ವಾರ್​ಗೆ ದರ್ಶನ್, ಸುದೀಪ್​ ಟ್ವೀಟ್​ ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್ ತಾರಕಕ್ಕೇರುತ್ತಿದ್ದಂತೆ ಚಾಲೆಂಜಿಂಗ್ ಸ್ಟಾರ್ ಸಹ ಟ್ವೀಟ್ ಮಾಡಿ, ಅನ್ನದಾತರು ಮತ್ತು ಸೆಲೆಬ್ರೆಟಿಗಳನ್ನು ಪ್ರಚೋದಿಸಬೇಡಿ ಅಂತ ವಾರ್ನಿಂಗ್ ನೀಡಿದ್ರು. ಬಳಿಕ ಕಿಚ್ಚ ಸುದೀಪ್ ಸಹ ಟ್ವೀಟ್ ಮಾಡಿ, ಕೆಲವೊಂದು ಮಾತುಗಳಿಗೆ ಕಣ್ಣು ಕಾಣಿಸದಂತೆ, ಕಿವಿ ಕೇಳಿಸದಂತೆ ಇರುವುದು ಒಳಿತು. ಪೈರಸಿ ಬಗ್ಗೆ ಯಾರ ಹೆಸರನ್ನೂ ನಾವು ತೆಗೆದುಕೊಂಡಿಲ್ಲ ಅಂತ ಸುದೀರ್ಘವಾದ ಪತ್ರ ಬರೆದರು.

ಇನ್ನು ಈ ಕುರಿತು ನಿರ್ಮಾಪಕಿ ಸ್ವಪ್ನಾ ಕೃಷ್ಣ ಸಹ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

Published On - 2:31 pm, Fri, 20 September 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ