Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

| Updated By: ಮದನ್​ ಕುಮಾರ್​

Updated on: Nov 02, 2021 | 8:37 AM

Bengaluru City Police: ಪುನೀತ್​ ರಾಜ್​ಕುಮಾರ್​ ಬಗ್ಗೆ ಅವಹೇಳನಕಾರಿಯಾಗಿ ‘ರಿತ್ವಿಕ್ಸ್​’ ಎಂಬ ಕಿಡಿಗೇಡಿ ಪೋಸ್ಟ್​ ಮಾಡಿದ್ದ. ಆ ಬಗ್ಗೆ ಟಿವಿ9 ಡಿಜಿಟಲ್​ನಲ್ಲಿ ವರದಿ ಮಾಡಲಾಗಿತ್ತು. ಅದಕ್ಕೆ ‘ಬೆಂಗಳೂರು ಸಿಟಿ ಪೊಲೀಸ್​’ ಸೋಶಿಯಲ್​ ಮೀಡಿಯಾ ಖಾತೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ
ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್
Follow us on

ನಟ ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಅಪಾರ ಸಂಖ್ಯೆಯ ಅಭಿಮಾನಿಗಳು ಕಣ್ಣೀರು ಸುರಿಸುತ್ತಿದ್ದಾರೆ. ಈ ನಡುವೆಯೇ ಕಿಡಿಗೇಡಿಯೊಬ್ಬ ಅಪ್ಪು ಬಗ್ಗೆ ಅವಹೇಳನಕಾರಿಯಾಗಿ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದ. ಆತನ ಕೃತ್ಯಕ್ಕೆ ತೀವ್ರ ಖಂಡನೆ ವ್ಯಕ್ತವಾದ ಬೆನ್ನಲ್ಲೇ ಬೆಂಗಳೂರು ಸೈಬರ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಆತನನ್ನು ಬಂಧಿಸಿರುವ ಬಗ್ಗೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​​ ಅವರು ಟ್ವಿಟರ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಕಿಡಿಗೇಡಿಯ ಪೋಸ್ಟ್​ ಬಗ್ಗೆ ಟಿವಿ9 ಡಿಜಿಟಲ್​ನಲ್ಲಿ ಸೋಮವಾರ (ನ.1) ವರದಿ ಮಾಡಲಾಗಿತ್ತು. ಅದಕ್ಕೆ ‘ಬೆಂಗಳೂರು ಸಿಟಿ ಪೊಲೀಸ್​’ ಸೋಶಿಯಲ್​ ಮೀಡಿಯಾ ಖಾತೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ‘ಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತದೆ’ ಎಂದು ತಿಳಿಸಲಾಗಿದೆ.

ಪುನೀತ್​ ನಿಧನದ ಬಳಿಕ ಬೆಂಗಳೂರಿನಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಭಾರತದ ಮಂದಿಗೆ ಇದರಿಂದ ಕಿರಿಕಿರಿ ಆಗಿತ್ತು. ಹಾಗಾಗಿ ಪುನೀತ್​ ರಾಜ್​ಕುಮಾರ್​​ಗೆ ಅಗೌರವ ತೋರುವಂತಹ ಪೋಸ್ಟ್​ಗಳನ್ನು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ರಿತ್ವಿಕ್ಸ್​ (ritvikks) ಎಂಬ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ತೀರಾ ಅಶ್ಲೀಲ ಪದಗಳನ್ನು ಬಳಸಿ ಪುನೀತ್​ ರಾಜ್​ಕುಮಾರ್​ ಅವರಿಗೆ ಅವಮಾನ ಮಾಡಲಾಗಿತ್ತು.

ನಿಷೇಧದ ನಡುವೆಯೂ ರಿತ್ವಿಕ್ಸ್​ ಎಂಬ ಈ ವ್ಯಕ್ತಿಗೆ ಲಿಕ್ಕರ್​ ಸಿಕ್ಕಿತ್ತು. ಬಳಿಕ ಅದನ್ನು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿ, ಅಶ್ಲೀಲ ಪದಗಳಿಂದ ಪುನೀತ್​ ರಾಜ್​ಕುಮಾರ್​ ಅವರನ್ನು ಅವಮಾನಿಸಿದ್ದ. ಬಿಯರ್​ ಬಾಟಲಿಯ ಚಿತ್ರ ಹಂಚಿಕೊಂಡು, ‘ರಾಜ್​ಕುಮಾರ್​​ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಆತನನ್ನು ನೆನಪಿಟ್ಟುಕೊಳ್ಳಿ. ಮರೆಯಬೇಡಿ. ಯಾಕೆಂದರೆ, ಇದನ್ನು ಕುಡಿದ ಬಳಿಕ ಅವನ ಸಮಾಧಿ ಮೇಲೆ ನಾವು ಮೂ** ಮಾಡುತ್ತೇವೆ’ ಎಂದು ಆತ ಬರೆದುಕೊಂಡಿದ್ದ.

ಕಿಡಿಗೇಡಿಯ ಈ ಪೋಸ್ಟ್​ಗೆ ಜನರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಕಿಚ್ಚ ಸುದೀಪ್​ ಪುತ್ರಿ ಸಾನ್ವಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. ‘ಕೇವಲ ಆಲ್ಕೋಹಾಲ್​ಗಾಗಿ ಪುನೀತ್​ ಬಗ್ಗೆ ಇಂಥ ವರ್ತನೆಯೇ? ಜನರಲ್ಲಿ ಮನುಷ್ಯತ್ವ ಉಳಿದಿಲ್ಲವೇ?’ ಎಂದು ಸಾನ್ವಿ ಛೀಮಾರಿ ಹಾಕಿದ್ದರು. ಎಲ್ಲದರ ಫಲವಾಗಿ ಈಗ ಆ ಕಿಡಿಗೇಡಿಯ ಬಂಧನ ಆಗಿದೆ. ಪರ ರಾಜ್ಯದಿಂದ ಬಂದು, ಕನ್ನಡ ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಕಿಂಚಿತ್ತೂ ಗೌರವ ಇಲ್ಲದಂತೆ ನಡೆದುಕೊಳ್ಳುತ್ತಿರುವ ಇಂಥ ಜನರಿಗೆ ಈ ಘಟನೆಯಿಂದ ತಕ್ಕ ಪಾಠ ಕಲಿಸಬೇಕಿದೆ.

ಅಪ್ಪು ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿತ್ತು. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೇ ಇರಲಿ ಎಂಬುದು ಈ ಆದೇಶದ ಹಿಂದಿನ ಉದ್ದೇಶ ಆಗಿತ್ತು. ಕುಡಿದ ಅಮಲಿನಲ್ಲಿ ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಬಹುದು. ಅದನ್ನು ತಪ್ಪಿಸಲು ಮದ್ಯ ಮಾರಾಟಕ್ಕೆ ಬ್ರೇಕ್​ ಹಾಕಲಾಗಿತ್ತು.

ಇದನ್ನೂ ಓದಿ:

Puneeth Rajkumar: ‘ಪುನೀತ್​ ಅತಿಯಾಗಿ ಜಿಮ್​ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ

ಪುನೀತ್​ ಅಂತ್ಯಕ್ರಿಯೆ ಮರುದಿನ ಹೇಗಿದೆ ಶಿವಣ್ಣನ ದಿನಚರಿ? ನೋವು ನುಂಗಿಕೊಂಡು ಮುಂದಿನ ಹೆಜ್ಜೆ ಇಟ್ಟ ಶಿವರಾಜ್​ಕುಮಾರ್​

Published On - 8:11 am, Tue, 2 November 21