Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಲಂ ಫೆಸ್ಟ್:ನಟಿ ಶಬಾನಾ ಅಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ

Shabana Azmi: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇಂದು ಮುಕ್ತಾಯ ಆಗಲಿದೆ. ಖ್ಯಾತ ಬಹುಭಾಷಾ ನಟಿ, ಆರು ಬಾರಿ ರಾಷ್ಟ್ರಪ್ರಶಸ್ತಿ ಪಡೆದಿರುವ ನಟಿ ಶಬಾನಾ ಆಜ್ಮಿ ಅವರಿಗೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಶನಾನಾ ಆಜ್ಮಿ ಅವರ ಜೀವನ, ಸಾಧನೆ ಇಲ್ಲಿ ತಿಳಿಯಿರಿ...

ಫಿಲಂ ಫೆಸ್ಟ್:ನಟಿ ಶಬಾನಾ ಅಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ
Shabana Azmi
Follow us
ಮಂಜುನಾಥ ಸಿ.
|

Updated on:Mar 08, 2025 | 6:19 PM

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಇಂದು (ಮಾರ್ಚ್ 08) ಮುಕ್ತಾಯವಾಗಲಿದೆ. ಇಂದು ಪ್ರಶಸ್ತಿ ವಿಜೇತ ಸಿನಿಮಾಗಳ ಪಟ್ಟಿ ಪ್ರಕಟಣೆ ಆಗಲಿದೆ. ಜೊತೆಗೆ ಹಲವು ಹಿರಿಯ ಸಿನಿಮಾ ಸಾಧಕರನ್ನು ಗುರುತಿಸಿ ಪ್ರಶಸ್ತಿಯನ್ನು ಸಹ ಕೊಡಲಾಗುತ್ತದೆ. ಪ್ರತಿ ವರ್ಷವೂ ಸಹ ಸಿನಿಮಾ ರಂಗದಲ್ಲಿ ಅಪ್ರತಿಮ ಸಾಧನೆ ಮಾಡಿದ ಹಿರಿಯ ನಟ-ನಟಿಯರನ್ನು ಗುರುತಿಸಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಬಾರಿ ಖ್ಯಾತ ನಟಿ ಶಬಾನಾ ಅಜ್ಮಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಭಾರತದ ಹೆಸರಾಂತ ಕವಿ,ಸಾಹಿತಿ ಕೈಫ್-ಇ-ಅಜ್ಮಿ ಅವರ ಮಗಳಾಗಿರುವ ಶಬಾನಾ ಅಜ್ಮಿ ವಿದ್ಯಾರ್ಥಿ ದೆಸೆಯಿಂದಲೂ ಕಲೆ,ಸಾಹಿತ್ಯ, ಸಾಂಸ್ಕೃತಿಕ ರಂಗದಲ್ಲಿ ತೊಡಗಿಸಿಕೊಂಡು ಸಿನಿಮಾ ಕ್ಷೇತ್ರದಲ್ಲಿ ಮೇರುಸಾಧನೆ ಮಾಡಿದ್ದಾರೆ. ವೈವಿಧ್ಯತೆಯಲ್ಲಿ ಏಕತೆ ಸಾಧಿಸಿರುವ ಭಾರತದ ಬಹುತ್ವ ಪರಂಪರೆಯ ಹೆಮ್ಮೆಯ ವಾರಸುದಾರರಾಗಿರುವ ಅವರು ದೇಶದ ಚಿತ್ರರಂಗಕ್ಕೆ ಸುಮಾರು ಐದು ದಶಕಗಳ ಕಾಲ ಸಲ್ಲಿಸಿರುವ ಸೇವೆ ಪರಿಗಣಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಯು ಈ ಪ್ರಶಸ್ತಿ ನೀಡಿ ಗೌರವಿಸುತ್ತಿವೆ.ಪ್ರಶಸ್ತಿಯು 10 ಲಕ್ಷ ರೂ.ನಗದು,ಸ್ಮರಣಿಕೆ ಒಳಗೊಂಡಿದೆ.

ಶಬಾನಾ ಆಜ್ಮಿ ಭಾರತೀಯ ಚಿತ್ರರಂಗದ ಅದ್ಭುತ ನಟಿಯರಲ್ಲಿ ಒಬ್ಬರು. ತಮ್ಮ ವಾರಗೆಯ ನಟಿಯರಾದ ರೇಖಾ, ಜಯಾ ಬಚ್ಚನ್, ಹೇಮಾಮಾಲಿನಿ ಅವರಂತೆ ಕಮರ್ಶಿಯಲ್ ಸಿನಿಮಾಗಳಲ್ಲಿ ತೊಡಗಿಕೊಳ್ಳದೆ, ನಟನೆಗೆ ಒತ್ತು ಇರುವ, ಘನ ಸಂದೇಶವುಳ್ಳ ಸಿನಿಮಾಗಳಲ್ಲಿ ಮಾತ್ರವೇ ನಟಿಸಿದರು ನಟಿ ಶಬಾನಾ ಆಜ್ಮಿ. 1974 ರಲ್ಲಿ ಬಿಡುಗಡೆ ಆದ ‘ಅಂಕುರ್’ ಸಿನಿಮಾ ಮೂಲಕ ನಟನೆ ಆರಂಭಿಸಿದ ಶಬಾನಾ ಆಜ್ಮಿ ತಮ್ಮ ಮೊದಲ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಪಡೆದಿದ್ದರು. ಈ ವರೆಗೆ ಆರು ಬಾರಿ ರಾಷ್ಟ್ರಪ್ರಶಸ್ತಿ ಪಡೆದಿರುವುದು ಶಾಬಾನಾ ಆಜ್ಮಿ ಅವರ ನಟನಾ ಪ್ರತಿಭೆಗೆ ಸಾಕ್ಷಿ.

ಇದನ್ನೂ ಓದಿ:ದೇವಿಶ್ರೀ ಪ್ರಸಾದ್ ಎದುರು ತಮ್ಮ ಮ್ಯೂಸಿಕ್ ಹಿಸ್ಟರಿ ಬಿಚ್ಚಿಟ್ಟ ಸಾಧುಕೋಕಿಲ

ಶಬಾನಾ ಆಜ್ಮಿ ಕನ್ನಡದ ಕೇವಲ ಒಂದು ಸಿನಿಮಾದಲ್ಲಿ ಮಾತ್ರವೇ ನಟಿಸಿದ್ದಾರೆ. ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದಾಗಿರುವ ‘ಕನ್ನೇಶ್ವರ ರಾಮ’ ಸಿನಿಮಾನಲ್ಲಿ ಶಬಾನಾ ಆಜ್ಮಿ ನಾಯಕಿ. ಎಂಎಸ್ ಸತ್ಯು ನಿರ್ದೇಶಿಸಿದ್ದ ಈ ಸಿನಿಮಾದಲ್ಲಿ ಅನಂತ್ ನಾಗ್ ನಾಯಕ, ಅಮೋಲ್ ಪಾಲೇಕರ್ ಸಹ ನಟಿಸಿದ್ದರು. ಇದೀಗ ಶಬಾನಾ ಆಜ್ಮಿ ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ಅವರಿಗೆ 16ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವದ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:11 pm, Sat, 8 March 25

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ