AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 29ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮೂರು ಕಡೆಗಳಲ್ಲಿ ಚಿತ್ರ ಪ್ರದರ್ಶನ

ಪ್ರತಿ ವರ್ಷ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿನಿಮೋತ್ಸವ ನಡೆಯುತ್ತದೆ. ಈ ಬಾರಿ ಚಲನಚಿತ್ರೋತ್ಸವದಲ್ಲಿ 60 ದೇಶಗಳ ಸಿನಿಮಾಗಳ ಪ್ರದರ್ಶನ ಆಗಲಿವೆ. ಎಲ್ಲಾ ಸಿನಿಮಾಗಳನ್ನು ಒಂದೇ ಕಡೆ ನೋಡಲು ಅವಕಾಶ ಇರಲಿದೆ. ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ಸಿನಿಮಾ ಸಹ ಪ್ರದರ್ಶನ ಆಗಲಿದೆ ಎಂಬುದು ವಿಶೇಷ. ಈ ವರ್ಷ ಮಹಿಳಾ ಸಬಲೀಕರಣ ಥೀಮ್ ಬಗ್ಗೆ ಚರ್ಚೆ ನಡೆಯಲಿದೆ.

ಜನವರಿ 29ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮೂರು ಕಡೆಗಳಲ್ಲಿ ಚಿತ್ರ ಪ್ರದರ್ಶನ
Film Fest
ರಾಜೇಶ್ ದುಗ್ಗುಮನೆ
|

Updated on: Dec 23, 2025 | 2:14 PM

Share

ಪ್ರತಿ ಬಾರಿಯೂ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿನಿಮೋತ್ಸವ ನಡೆಯುತ್ತದೆ. ಈ ಸಿನಿಮೋತ್ಸವದಲ್ಲಿ ವಿವಿಧ ಸಿನಿಮಾಗಳು ಪ್ರದರ್ಶನ ಕಾಣುತ್ತವೆ. ಇದರ ಜೊತೆಗೆ ಕನ್ನಡದ ತಂತ್ರಜ್ಞರು, ಕಲಾವಿದರ ಜೊತೆಗೆ ಪರಭಾಷಾ ಕಲಾವಿದರು ಹಾಗೂ ನಿರ್ದೇಶಕರ ಜೊತೆ ಹಲವು ವಿಷಯಗಳನ್ನು ಚರ್ಚಿಸೋ ಅವಕಾಶ ಸಿಗುತ್ತದೆ. ಈಗ 2026ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದಿನಾಂಕ ನಿಗದಿ ಆಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಜ.29ರಿಂದ ಫೆ.6ರವರೆಗೆ ಸಿನಿಮೋತ್ಸವ ನಡೆಯಲಿದೆ. ಒಂಭತ್ತು ದಿನಗಳ ಕಾಲ ಈ ಸಿನಿ ಹಬ್ಬ ಇರಲಿದೆ. ಈ ಮೊದಲು ಒರಿಯನ್ ಮಾಲ್​​ನಲ್ಲಿ ಮಾತ್ರ ಸಿನಿಮೋತ್ಸವ ನಡೆಯುತ್ತಿತ್ತು. ಆದರೆ, ಈ ಬಾರಿ ಮೂರು ಕಡೆಗಳಲ್ಲಿ ಸಿನಿಮಾ ಪ್ರದರ್ಶನ ಕಾಣಲಿದೆ. ಲುಲು ಮಾಲ್, ಚಾಮರಾಜಪೇಟೆಯ ಡಾ.ರಾಜ್​ಕುಮಾರ್ ಭವನ ಮತ್ತು ಬನಶಂಕರಿಯ ಸುಚಿತ್ರಾ ಫಿಲ್ಮ್​ ಸೊಸೈಟಿಯಲ್ಲಿ ಸಿನಿಮಾ ಪ್ರದರ್ಶನ ಆಗಲಿದೆ.

ಬೆಂಗಳೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಲ್ಲಿಯವರೆಗೆ 110 ಸಿನಿಮಾಗಳು ಆಯ್ಕೆ ಆಗಿವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೂರೂವರೆ ಲಕ್ಷ ಬೆಲೆಯ ಗೌನ್ ಧರಿಸಿ ಕಾನ್ ಸಿನಿಮೋತ್ಸವದಲ್ಲಿ ಮಿಂಚಿದ ಜಾನ್ವಿ ಕಪೂರ್

ಚಲನಚಿತ್ರೋತ್ಸವದಲ್ಲಿ 60 ದೇಶಗಳ ಸಿನಿಮಾಗಳ ಪ್ರದರ್ಶನ ಆಗಲಿವೆ. ಎಲ್ಲಾ ಸಿನಿಮಾಗಳನ್ನು ಒಂದೇ ಕಡೆ ನೋಡಲು ಅವಕಾಶ ಇರಲಿದೆ. ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ಸಿನಿಮಾ ಸಹ ಪ್ರದರ್ಶನ ಆಗಲಿದೆ ಎಂಬುದು ವಿಶೇಷ. ಈ ವರ್ಷ ಮಹಿಳಾ ಸಬಲೀಕರಣ ಥೀಮ್ ಬಗ್ಗೆ ಚರ್ಚೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?