AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಚಿತ್ರೋತ್ಸವಕ್ಕೆ ಸರ್ಕಾರದ ದುಂದು ವೆಚ್ಚ! ಸ್ಯಾಂಡಲ್​ವುಡ್​ ಮಂದಿ ಏನ್​ ಹೇಳ್ತಾರೆ?

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ವಿರುದ್ದ ಕೆಲವು ಆಕ್ಷೇಪಗಳು ಕೇಳಿಬರುತ್ತಿವೆ. ಚಿತ್ರೋತ್ಸವದ ಹೆಸರಲ್ಲಿ ರಾಜ್ಯ ಸರ್ಕಾರ ಮಾಡುವ ದುಂದು ವೆಚ್ಚದ ಬಗ್ಗೆಯೂ ಈಗ ಚರ್ಚೆ ಆರಂಭ ಆಗಿದೆ.

ಬೆಂಗಳೂರು ಚಿತ್ರೋತ್ಸವಕ್ಕೆ ಸರ್ಕಾರದ ದುಂದು ವೆಚ್ಚ! ಸ್ಯಾಂಡಲ್​ವುಡ್​ ಮಂದಿ ಏನ್​ ಹೇಳ್ತಾರೆ?
ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ
ಮದನ್​ ಕುಮಾರ್​
|

Updated on: Mar 16, 2021 | 1:44 PM

Share

13ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಅನೇಕ ವಿಘ್ನಗಳು ಎದುರಾಗುತ್ತಿವೆ. ಕೊರೊನಾ ವೈರಸ್​ ಕಾರಣ ನೀಡಿ ಚಿತ್ರೋತ್ಸವದ ದಿನಾಂಕವನ್ನು ಮುಂದೂಡಲಾಗಿದೆ. ಜೊತೆಗೆ ಸಿನಿಮೋತ್ಸವದ ದುಂದುವೆಚ್ಚಗಳ ಬಗ್ಗೆ ವಿಧಾನ ಪರಿಷತ್​ ಕಲಾಪದಲ್ಲೂ ಪ್ರಶ್ನೆ ಎದ್ದಿದೆ.

‘ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದುಂದುವೆಚ್ಚ ಮಾಡಲಾಗುತ್ತಿದೆ. ಹೊರಗುತ್ತಿಗೆ ನೀಡುವುದರಿಂದ ಅನಗತ್ಯವಾಗಿ ವೆಚ್ಚ ಮಾಡಲಾಗುತ್ತದೆ. ಈ ಅದ್ಧೂರಿ ಕಾರ್ಯಕ್ರಮಕ್ಕೆ ಕೋಟ್ಯಂತರ ರೂ. ಸಂಭಾವನೆ ನೀಡಿ ಬಾಲಿವುಡ್ ಕಲಾವಿದರನ್ನು ಕರೆಸಲಾಗುತ್ತದೆ. ಈ ರೀತಿ ಕಲಾವಿದರಿಗೆ ಕೋಟಿಗಟ್ಟಲೆ ನೀಡುವ ಅಗತ್ಯವೇನಿದೆ? ವಿಧಾನಸೌಧದಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಿ’ ಎಂದು ವಿಧಾನ ಪರಿಷತ್​ ಸದಸ್ಯ ಮೋಹನ್‌ ಕುಮಾರ್ ಕೊಂಡಜ್ಜಿ ಹೇಳಿದ್ದಾರೆ.

ಮೋಹನ್‌ ಕುಮಾರ್ ಪ್ರಶ್ನೆಗೆ ಸಚಿವ ಜಗದೀಶ್ ಶೆಟ್ಟರ್ ಉತ್ತರ ನೀಡಿದ್ದಾರೆ. ಕೆಲವು ಕಾರ್ಯಕ್ರಮಗಳನ್ನು ಅವುಗಳ ಗುಣಮಟ್ಟಕ್ಕೆ ತಕ್ಕಂತೆ ಮಾಡಬೇಕಾಗುತ್ತದೆ. ಆದರೂ ಸದಸ್ಯರು ಎತ್ತಿದ ಈ ಪ್ರಶ್ನೆ ಬಗ್ಗೆ ಸರ್ಕಾರ ಪರಿಶೀಲಿಸುತ್ತದೆ’ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಚರ್ಚೆ ಬಗ್ಗೆ ಸ್ಯಾಂಡಲ್​ವುಡ್​ನ ಸೆಲೆಬ್ರಿಟಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ದುಂದುವೆಚ್ಚ ಮಾಡಬಾರದು ಎಂಬ ಮಾತನ್ನು ನಿರ್ದೇಶಕ ಮಂಸೋರೆ ಒತ್ತಿ ಹೇಳಿದ್ದಾರೆ. ‘ಮೋಹನ್​ಕುಮಾರ್​ ಕೊಂಡಜ್ಜಿ ಎತ್ತಿರುವ ಪ್ರಶ್ನೆ ಸರಿ. ಆದರೆ ತುಂಬ ಹಿಂದೆಯೇ ಈ ಮಾತನ್ನು ಅವರು ಹೇಳಬೇಕಿತ್ತು. ಜಗದೀಶ್​ ಶೆಟ್ಟರ್​ ಹೇಳಿರುವಂತೆ ಕಾರ್ಯಕ್ರಮದ ಗುಣಮಟ್ಟಕ್ಕೆ ಬೆಲೆ ಕೊಡುವುದೇ ಹೌದಾದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿನಿಮಾ ಕ್ಷೇತ್ರಕ್ಕೆ ಕೊಡುಗೆ ನೀಡಿದ ನಿರ್ದೇಶಕರನ್ನು, ತಂತ್ರಜ್ಱರನ್ನು ಬೆಂಗಳೂರು ಸಿನಿಮೋತ್ಸವಕ್ಕೆ ಕರೆಸಲಿ. ಬರೀ ಬಾಲಿವುಡ್​ ಸೆಲೆಬ್ರಿಟಿಗಳನ್ನು ಕರೆಸಬೇಕಿಲ್ಲ’ ಎಂದು ಮಂಸೋರೆ ಹೇಳಿದ್ದಾರೆ.

‘ದುಂದುವೆಚ್ಚದ ವಿಚಾರ ಮಾತ್ರವಲ್ಲದೆ ಚಿತ್ರೋತ್ಸವಕ್ಕೆ ಸಂಬಂಧಪಟ್ಟಂತೆ ಅಗತ್ಯವಾಗಿ ಬಗೆಹರಿಯಬೇಕಾದ ಸಮಸ್ಯೆಗಳು ಸಾಕಷ್ಟು ಇವೆ. ಸಿನಿಮಾಗಳ ಆಯ್ಕೆಯಲ್ಲಿ ಪಾರದರ್ಶಕತೆ ಬೇಕು. ಕನ್ನಡದ ‘ತಲೆದಂಡ’ ಚಿತ್ರಕ್ಕೆ ಈ ಬಾರಿ ಅವಕಾಶ ನೀಡಿಲ್ಲ. ಯಾಕೆ ಎಂಬುದನ್ನು ಆಯೋಜಕರು ಮೊದಲು ಸ್ಪಷ್ಟಪಡಿಸಬೇಕು. ಕಳೆದ ವರ್ಷವೂ ಕೆಲವು ಸಿನಿಮಾಗಳಿಗೆ ಹೀಗೆಯೇ ಆಗಿತ್ತು’ ಎಂದಿದ್ದಾರೆ ಮಂಸೋರೆ.

ಇದನ್ನೂ ಓದಿ: ಹೆಚ್ಚಿದ ಕೊರೊನಾ ಪ್ರಕರಣ; ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!